ಡಬ್ಬಲ್‌ ಇಂಜಿನ್‌ ಹತ್ತಿದ ಚಿರಯೌವ್ವನೆ


Team Udayavani, Jun 13, 2018, 11:09 AM IST

double-engine.jpg

ಈಯಮ್ಮನಿಗೆ ವಯಸ್ಸೇ ಆಗಲ್ಲ ಬಿಡಿ … ಸುಮನ್‌ ರಂಗನಾಥನ್‌ ನೋಡಿದವರು ಮೊದಲು ಹೇಳುವ ಮಾತಿದೆ. ಅದಕ್ಕೆ ಕಾರಣ ಗ್ಲಾಮರ್‌. ಹರೆಯದ ಯಾವ ನಟಿಗೂ ಕಮ್ಮಿ ಇಲ್ಲದಂತಹ ಗ್ಲಾಮರ್‌ನಲ್ಲಿ ಮಿಂಚುವ ಮೂಲಕ ಸುಮನ್‌ ರಂಗನಾಥ್‌ ಇಂದಿಗೂ ಬೇಡಿಕೆಯ ನಟಿಯಾಗಿದ್ದಾರೆ. 1989ರಲ್ಲಿ ಆರಂಭವಾದ ಸುಮನ್‌ ರಂಗನಾಥ್‌ ಅವರ ಜರ್ನಿ ಇಲ್ಲಿವರೆಗೆ ಯಶಸ್ವಿಯಾಗಿ ಸಾಗಿಬಂದಿದೆ.

ಕನ್ನಡ, ತೆಲುಗು, ತಮಿಳು, ಹಿಂದಿ … ಹೀಗೆ ಎಲ್ಲಾ ಭಾಷೆಯ ಚಿತ್ರರಂಗದಲ್ಲೂ ಸುಮನ್‌ ರಂಗನಾಥ್‌ ನಟಿಸಿ ಬಂದಿದ್ದಾರೆ. ಸುಮನ್‌ ಅವರಿಗೆ ಇತ್ತೀಚಿನ ವರ್ಷಗಳಲ್ಲಿ ಹೆಸರು ಕೊಟ್ಟ ಸಿನಿಮಾ “ಸಿದ್ಲಿಂಗು’. ಆ ಚಿತ್ರದ ಆಂಡಲಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದರು ಸುಮನ್‌. ಆ ನಂತರ “ನೀರ್‌ ದೋಸೆ’ಯಲ್ಲೂ ಸುಮನ್‌ ಅವರಿಗೆ ಒಳ್ಳೆಯ ಪಾತ್ರ ಸಿಕ್ಕಿತ್ತು. ಸದ್ಯ ಸುಮನ್‌ ರಂಗನಾಥ್‌ “ಡಬಲ್‌ ಇಂಜಿನ್‌’ ಎಂಬ ಸಿನಿಮಾದಲ್ಲಿ ಸಖತ್‌ ಗ್ಲಾಮರಸ್‌ ಆಗಿ ಕಾಣಿಸಿಕೊಂಡಿದ್ದಾರೆ.

ಇಲ್ಲಿ ಚಿಕ್ಕಣ್ಣ ಅವರ ಕಾಂಬಿನೇಶನ್‌ನಲ್ಲಿ ಅವರ ದೃಶ್ಯಗಳು ಸಾಗಿ ಬರಲಿದೆ. ಹೆಸರಿಗೆ ತಕ್ಕಂತೆ ಕಾಮಿಡಿ ಹಿನ್ನೆಲೆಯಲ್ಲಿ ಸಾಗುವ ಸಿನಿಮಾ ಇದಾಗಿರುವುದರಿಂದ ಸಾಕಷ್ಟು ಫ‌ನ್ನಿ ಸನ್ನಿವೇಶಗಳು ಚಿಕ್ಕಣ್ಣ ಹಾಗೂ ಸುಮನ್‌ ಕಾಂಬಿನೇಶನ್‌ನಲ್ಲಿ ಮೂಡಿಬಂದಿವೆ. ಈ ಹಿಂದೆ “ಬಾಂಬೆ ಮಿಠಾಯಿ’ ಎಂಬ ಸಿನಿಮಾ ಮಾಡಿದ್ದ ಚಂದ್ರಮೋಹನ್‌ ಈ ಚಿತ್ರದ ನಿರ್ದೇಶಕರು.

ಇದೊಂದು ಮೂವರು ಮುಗ್ಧ ಹುಡುಗರ ಸುತ್ತ ನಡೆಯುವ ಕಥೆ. ಹಳ್ಳಿಯಲ್ಲಿರುವ ಮೂವರು ಮುಗ್ಧ ಯುವಕರಿಗೆ ಅದೊಂದು ದಿನ, ತಾವು ದಿಢೀರ್‌ ಶ್ರೀಮಂತರಾಗಿಬಿಡಬೇಕು ಎಂಬ ಆಸೆ ಚಿಗುರುತ್ತದೆ. ಶ್ರೀಮಂತರಾಗೋದು ಸುಲಭವಲ್ಲ. ಆದರೆ, ಕೆಟ್ಟದಾರಿ ಹಿಡಿದರೆ, ಬೇಗನೇ ಶ್ರೀಮಂತರಾಗಿಬಿಡಬಹುದು ಎಂಬ ಆಸೆಯಿಂದ ಕೆಟ್ಟದಾರಿ ಹಿಡಿಯುತ್ತಾರೆ. ಆಮೇಲೆ ಏನೆಲ್ಲಾ ಆಗಿಹೋಗುತ್ತೆ ಎಂಬುದು ಚಿತ್ರದ ಕಥಾ ಸಾರಾಂಶ.

ಕಥೆ ಗಂಭೀರವಾಗಿದ್ದರೂ, ಹಾಸ್ಯದ ಮೂಲಕವೇ ಚಿತ್ರ ಸಾಗುವುದರಿಂದ ನೋಡುಗರಿಗೆ ಎಲ್ಲೂ ಬೋರ್‌ ಎನಿಸುವುದಿಲ್ಲ ಎಂಬುದು ಚಿತ್ರತಂಡದ ಮಾತು. ಮುಖ್ಯವಾಗಿ ಇಲ್ಲಿ ಯುವಕರಿಗೊಂದು ಸಂದೇಶವಿದೆ. ಅದಕ್ಕೆ ಪೂರಕವಾಗಿಯೇ ಶೀರ್ಷಿಕೆ ಇಡಲಾಗಿದೆಯಂತೆ. ಅದೇನೇ ಆದರೂ ಸುಮನ್‌ ರಂಗನಾಥ್‌ ಮತ್ತೂಮ್ಮೆ “ಡಬಲ್‌ ಇಂಜಿನ್‌’ನಲ್ಲಿ ಸಖತ್‌ ಗ್ಲಾಮರಸ್‌ ಆಗಿ ಕಾಣಿಸಿಕೊಂಡಿರುವುದಂತೂ ಸತ್ಯ. 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.