ಅಯೋಗ್ಯನಿಗೆ ತೊಂದರೆ


Team Udayavani, Jun 14, 2018, 4:20 PM IST

ayogya.jpg

ಸತೀಶ್‌ ನೀನಾಸಂ ಅಭಿನಯದ “ಅಯೋಗ್ಯ’ ಚಿತ್ರಕ್ಕೆ ಸಣ್ಣ ಸಮಸ್ಯೆ ಎದುರಾಗಿದೆ. “ಅಯೋಗ್ಯ’ ಹೆಸರಿನ ಕೆಳಗೆ “ಗ್ರಾಮಪಂಚಾಯ್ತಿ ಸದಸ್ಯ’ ಎಂಬ ಉಪಶೀರ್ಷಿಕೆ ಇರುವುದು ಗೊತ್ತೇ ಇದೆ. ಇದು ಗ್ರಾಮಪಂಚಾಯ್ತಿ ಸದಸ್ಯರಿಗೆ ಅವಮಾನ ಮಾಡಿದಂತೆ ಎಂದು ಮೈಸೂರಿನ ಕನ್ನಡ ಕ್ರಾಂತಿದಳದ ತೇಜಸ್ವಿನಿ ಕುಮಾರ್‌ ಎನ್ನುವವರು ತಕರಾರು ತೆಗೆದಿದ್ದಾರೆ. ಈ ಸಂಬಂಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆಯುವುದರ ಜೊತೆಗೆ, ಚಿತ್ರತಂಡಕ್ಕೂ ಕರೆಮಾಡಿ, ಉಪಶೀರ್ಷಿಕೆಯನ್ನು ತೆಗೆದುಹಾಕುವಂತೆ ತಾಕೀತು ಮಾಡಿದ್ದಾರೆ. ಒಂದು ಪಕ್ಷ ಉಪಶೀರ್ಷಿಕೆ ತೆಗೆಯದ ಪಕ್ಷದಲ್ಲಿ, ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ.

“ಅಯೋಗ್ಯ’ ಎಂಬ ಹೆಸರ ಕೆಳಗೆ “ಗ್ರಾಮಪಂಚಾಯ್ತಿ ಸದಸ್ಯ’ ಎಂಬ ಉಪಶೀರ್ಷಿಕೆ ಇಟ್ಟಿರುವುದರ ಕುರಿತು ಚಿತ್ರದ ಮುಹೂರ್ತದ ಸಂದರ್ಭದಲ್ಲೇ ಪ್ರಶ್ನಿಸಲಾಗಿತ್ತು. ಆದರೆ, ನಿರ್ದೇಶಕ ಮಹೇಶ್‌ ಕುಮಾರ್‌ ಅವರು ಚಿತ್ರಕ್ಕೆ ಅದರ ಅವಶ್ಯಕತೆ ಇದೆ ಮತ್ತು ಚಿತ್ರ ನೋಡಿದರೆ ಅರ್ಥವಾಗುತ್ತದೆ ಎಂದು ಸ್ಪಷ್ಟನೆ ಕೊಟ್ಟಿದ್ದರು. ಅದಾಗಿ ಆರು ತಿಂಗಳು ಕಳೆದ ಮೇಲೆ, ಈಗ ಕನ್ನಡ ಕ್ರಾಂತಿದಳ ಸಂಘಟನೆಯು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದು, ಆ ಉಪಶೀರ್ಷಿಕೆಯನ್ನು ರದ್ದು ಮಾಡುವಂತೆ ಕೋರಿದೆ. ಇದಕ್ಕೆ ಪ್ರತ್ಯುತ್ತರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಅವರು ಪತ್ರ ಬರೆದಿದ್ದು, ವಾಣಿಜ್ಯ ಮಂಡಳಿಯಲ್ಲಿ “ಅಯೋಗ್ಯ’ ಎಂಬ ಶೀರ್ಷಿಕೆ ನೋಂದಣಿಯಾಗಿದೆಯೇ ಹೊರತು, “ಅಯೋಗ್ಯ – ಗ್ರಾಮ ಪಂಚಾಯ್ತಿ ಸದಸ್ಯ’ ಎಂದು ನೋಂದಾಯಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಅಷ್ಟೇ ಅಲ್ಲ, ಉಪಶೀರ್ಷಿಕೆಗೂ ಮತ್ತು ವಾಣಿಜ್ಯ ಮಂಡಳಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಯಾವುದೇ ಕಾರಣಕ್ಕೆ ಬದಲಾಯಿಸುವುದಿಲ್ಲ: ಇನ್ನು ಈ ಶೀರ್ಷಿಕೆ ವಿವಾದದ ಕುರಿತು ಮಾತನಾಡುವ ನಿರ್ದೇಶಕ ಮಹೇಶ್‌, “ನಾವು ಗ್ರಾಮ ಪಂಚಾಯ್ತಿ ಸದಸ್ಯರನ್ನು ಅಗೌರವಯುತವಾಗಿ ತೋರಿಸಿಲ್ಲ. ಇಷ್ಟಕ್ಕೂ ನಮ್ಮ ಚಿತ್ರದಲ್ಲೇನಿದೆ ಎಂದು ಯಾರಿಗೂ ಗೊತ್ತಿಲ್ಲ. ಹಾಗಾಗಿ ಮೊದಲು ಚಿತ್ರ ನೋಡಿ, ಆ ನಂತರ ಮಾತನಾಡುವುದು ಸೂಕ್ತ. 

ಈಗಾಗಲೇ ಚಿತ್ರೀಕರಣ ಮುಗಿದು, ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ನಡೆಯುತ್ತಿವೆ. ಜುಲೈ 15ರೊಳಗೆ ಚಿತ್ರದ ಕೆಲಸಗಳು ಸಂಪೂರ್ನವಾಗಲಿದ್ದು, ಆ ನಂತರ ಬೇಕಾದರೆ 100 ಜನರಿಗೆ ತೋರಿಸುತ್ತೀನಿ. ಯಾರಾದರೂ ತಪ್ಪು ಎಂದರೆ, ಚಿತ್ರದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರಿಗೆ ಅಗೌರವಯುತವಾಗಿ ಏನಾದರೂ ಇದ್ದರೆ, ಕ್ಷಮೆ ಕೇಳುವುದಕ್ಕೆ ನಾನು ಸಿದ್ಧ. ಆ ಉಪಶೀರ್ಷಿಕೆಯನ್ನು ಸುಮ್ಮನೆ ಇಟ್ಟಿಲ್ಲ ನಾವು. ಕಥೆಗೆ ಸೂಕ್ತ ಎಂಬ ಕಾರಣಕ್ಕೆ ಇಟ್ಟಿದ್ದೇವೆ. 

ಆದರೆ, ಸಂಘಟನೆಯವರು ಈಗಲೇ ತೆಗೆದುಹಾಕದಿದ್ದರೆ, ಸದ್ಯದಲ್ಲೇ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಹೇಳಿದ್ದಾರೆ. ಆದರೆ, ಉಪಶೀರ್ಷಿಕೆಯನ್ನು ತೆಗೆದುಹಾಕುವ ಪ್ರಶ್ನೆಯೇ ಇಲ್ಲ’ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.