ಶರಣ್‌ ಜೊತೆ ಅಪೂರ್ವ; ಸಂತು ನಿರ್ದೇಶನದ ವಿಕ್ಟರಿ 2 ಚಿತ್ರಕ್ಕೆ ನಾಯಕಿ


Team Udayavani, Jun 21, 2018, 5:08 PM IST

apoorva-1.jpg

ರವಿಚಂದ್ರನ್‌ ನಿರ್ದೇಶಿಸಿ, ನಟಿಸಿದ್ದ “ಅಪೂರ್ವ’ ಚಿತ್ರದ ನಾಯಕಿ ಅಪೂರ್ವ ಎಲ್ಲಿ ಹೋದರು ಎಂಬ ಪ್ರಶ್ನೆ ಎಲ್ಲೆಡೆ ಹರಿದಾಡುತ್ತಿತ್ತು. ಎರಡು ವರ್ಷಗಳ ಬಳಿಕ ಅಪೂರ್ವ ಪುನಃ ಸುದ್ದಿಯಾಗಿದ್ದಾರೆ. ಹೌದು, ಅಪೂರ್ವ ಸದ್ದಿಲ್ಲದೆಯೇ ಚಿತ್ರವೊಂದರಲ್ಲಿ ನಟಿಸಿದ್ದಾಗಿದೆ. ಅದು ಶರಣ್‌ ಅಭಿನಯದ “ವಿಕ್ಟರಿ 2′. 

“ಅಲೆಮಾರಿ’ ಸಂತು ನಿರ್ದೇಶನದ ಈ ಚಿತ್ರದಲ್ಲಿ ಶರಣ್‌ಗೆ ಜೋಡಿಯಾಗಿ ಅಸ್ಮಿತಾ ಸೂದ್‌ ನಾಯಕಿ ಅಲ್ಲವೇ ಎಂಬ ಇನ್ನೊಂದು ಪ್ರಶ್ನೆ ಎದುರಾಗುವುದು ಸಹಜ. ಅಸ್ಮಿತಾ ಸೂದ್‌ ಕೂಡ ಶರಣ್‌ ಜೊತೆ ಇದ್ದಾರೆ. ಆದರೆ, ಅಸ್ಮಿತಾ ಕೇವಲ ಬೆರಳೆಣಿಕೆ ದೃಶ್ಯಗಳಲ್ಲಿ ಬಂದು ಹೋಗುತ್ತಾರೆ. ಆದರೆ, ಅಪೂರ್ವ ಇಡೀ ಚಿತ್ರದುದ್ದಕ್ಕೂ ಆವರಿಸಿಕೊಂಡಿದ್ದಾರೆ. ಹಾಗಾಗಿ, ಶರಣ್‌ ಜೊತೆ ಅಪೂರ್ವಗೆ “ವಿಕ್ಟರಿ 2′ ಎರಡನೇ ಚಿತ್ರ. 

“ಅಪೂರ್ವ’ ಚಿತ್ರದ ನಂತರ ಒಂದಷ್ಟು ಕಥೆ ಬಂದರೂ, ಅಪೂರ್ವ ಮಾತ್ರ ಯಾವುದನ್ನೂ ಒಪ್ಪಿಕೊಳ್ಳಲಿಲ್ಲ. ಎರಡು ವರ್ಷಗಳ ಕಾಲ ಸುಮ್ಮನಿದ್ದ ಅಪೂರ್ವ, “ವಿಕ್ಟರಿ 2′ ಕಥೆ ಕೇಳಿದ ಕೂಡಲೇ ನಟಿಸೋಕೆ ಗ್ರೀನ್‌ಸಿಗ್ನಲ್‌ ಕೊಟ್ಟಿದ್ದಾರೆ. ಅಂದಹಾಗೆ,  “ವಿಕ್ಟರಿ 2′ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದೆ. ಹಾಡಿನ ಚಿತ್ರೀಕರಣ ಬಾಕಿ ಉಳಿಸಿಕೊಂಡಿರುವ ಚಿತ್ರತಂಡ, ಇಷ್ಟರಲ್ಲೇ ವಿದೇಶಕ್ಕೆ ಹಾರಿ ಹಾಡುಗಳನ್ನು ಚಿತ್ರೀಕರಿಸುವ ಯೋಜನೆ ಹಾಕಿಕೊಂಡಿದೆ. 

ಸದ್ಯಕ್ಕೆ ಶರಣ್‌ ಅವರು ಇನ್ನೊಂದು ಚಿತ್ರದ ಚಿತ್ರೀಕರಣಕ್ಕಾಗಿ ವಿದೇಶದಲ್ಲಿ ಬೀಡು ಬಿಟ್ಟಿದ್ದಾರೆ. ಅವರು ಹಿಂದಿರುಗಿದ ಬಳಿಕ “ವಿಕ್ಟರಿ 2′ ಚಿತ್ರದ ಹಾಡುಗಳಿಗಾಗಿ ವಿದೇಶಕ್ಕೆ ಹೋಗಲು ಸಿದ್ಧತೆ ಮಾಡಿಕೊಳ್ಳುತ್ತಿದೆ ಚಿತ್ರತಂಡ. ಈ ಚಿತ್ರಕ್ಕೆ ಅರ್ಜುನ್‌ ಜನ್ಯಾ ನಾಲ್ಕು ಹಾಡುಗಳಿಗೆ ಸಂಗೀತ ನೀಡಿದ್ದಾರೆ. ಗುರುಪ್ರಶಾಂತ್‌ ರೈ ಅವರ ಸಂಗೀತವಿದೆ.

“ವಿಕ್ಟರಿ 2′ ಅಂದಾಕ್ಷಣ, “ವಿಕ್ಟರಿ’ ಸಿನಿಮಾದ ನೆನಪಾಗುತ್ತೆ. ಆದರೆ, ಆ ಚಿತ್ರಕ್ಕೂ ಈ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸುತ್ತಾರೆ ನಿರ್ದೇಶಕ “ಅಲೆಮಾರಿ’ ಸಂತು. ಆದರೆ, “ವಿಕ್ಟರಿ’ ಚಿತ್ರದಲ್ಲಿದ್ದ ಪಾತ್ರಗಳು ಇಲ್ಲೂ ಮುಂದುವರೆಯುತ್ತವೆ. ಆ ಚಿತ್ರ ನೋಡಿದವರಿಗೆ ಈ ಚಿತ್ರ ಬೇರೆ ಅಂತೆನಿಸುತ್ತದೆ. ಇದೊಂದು ಪಕ್ಕಾ ಮನರಂಜನೆಯ ಚಿತ್ರವಾಗಿದ್ದು, ಬಹುತೇಕ ಪ್ರೇಕ್ಷಕರಿಗೆ ನಿರಾಸೆ ಮಾಡುವುದಿಲ್ಲ ಎಂಬ ಗ್ಯಾರಂಟಿ ಕೊಡುತ್ತಾರೆ ನಿರ್ದೇಶಕರು. ಈ ಚಿತ್ರವನ್ನು ತರುಣ್‌ ಶಿವಪ್ಪ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ತರುಣ್‌ ಸುಧೀರ್‌ ಅವರ ಕಥೆ ಇದೆ.
 

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.