ಅಂಬಿ ಸ್ಟೈಲ್‌: ಖದರು, ಗದರು


Team Udayavani, Jun 22, 2018, 6:06 PM IST

ambarish-1.jpg

ಅಂಬರೀಶ್‌ ಎಲ್ಲಿರುತ್ತಾರೋ ಅಲ್ಲಿ ನಗುವಿನ ವಾತಾವರಣ, ಆತ್ಮೀಯತೆಯ ಬೈಗುಳ, ಗದರುವಿಕೆ, ಸಣ್ಣ ಸಿಟ್ಟು, ಮರುಕ್ಷಣ ಒಂದು ನಗೆ … ಇವಿಷ್ಟನ್ನು ನಿರೀಕ್ಷಿಸಬಹುದು. ಅವರ ಗುಣವೇ ಅಂತಹುದು ತಮಗೆ ಆಗದ್ದನ್ನು ನೇರವಾಗಿ ಹೇಳಿಬಿಡುವ, ಸಿಟ್ಟು ಬಂದಾಗ ಗದರುವ, ಮರುಕ್ಷಣವೇ “ಬಾರಯ್ಯ’ ಎಂದು ಹೆಗಲಿಗೆ ಕೈ ಹಾಕಿ ಮುಗುಳ್ನಗುವ ಗುಣವೇ ಅವರನ್ನು ಅಭಿಮಾನಿಗಳು ಇಷ್ಟಪಡುವಂತೆ ಮಾಡಿದ್ದು.

ಗುರುವಾರ ಚಿತ್ರರಂಗದ ವತಿಯಿಂದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರಿಗೆ ಆಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲೂ ಅಂಬರೀಶ್‌ ಅವರ ಖದರು, ಮ್ಯಾನರೀಸಂ ಎಲ್ಲರ ಗಮನ ಸೆಳೆಯಿತು. ಕಾರ್ಯಕ್ರಮ ತಡವಾದರೂ ವೇದಿಕೆಯಲ್ಲಿ ಅಂಬಿ ಅವರ ಸ್ಟೈಲ್‌ ನೋಡಿದವರು ಕಿರುನಗೆಯೊಂದಿಗೆ ಅದನ್ನು ಆಸ್ವಾಧಿಸಿದ್ದು ಸುಳ್ಳಲ್ಲ. ಸನ್ಮಾನ ಕಾರ್ಯಕ್ರಮದಲ್ಲಿನ ಅಂಬಿ ಸ್ಟೈಲ್‌ನ ಝಲಕ್‌ ಇಲ್ಲಿದೆ …

ಏಯ್‌ ಎದ್‌ ಬಾರಯ್ಯವೇದಿಕೆ ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ಒಬ್ಬೊಬ್ಬರನ್ನೇ ನಿರೂಪಕಿ ವೇದಿಕೆ ಕರೆಯಲಾರಂಭಿಸಿದರು. ಕಾರ್ಯಕ್ರಮಕ್ಕೆ ಬಂದಿದ್ದ ದರ್ಶನ್‌ ಸಾಮಾನ್ಯರಂತೆ ಹಿಂದುಗಡೆ ಕುಳಿತಿದ್ದರು. ದರ್ಶನ್‌ ಬಂದಿದ್ದನ್ನು ಗಮನಿಸಿದ ಅಂಬರೀಶ್‌, “ದರ್ಶನ್‌ನ ಕರೀರಿ’ ಎಂದರು. ಅಂತೆಯೇ ದರ್ಶನ್‌ ವೇದಿಕೆಗೆ ಬರಬೇಕೆಂದು ನಿರೂಪಕಿ ಕರೆದಾಗ, ದರ್ಶನ್‌ “ಬೇಡ ನಾನು ಇಲ್ಲೇ ಇರುತ್ತೇನೆ’ ಎಂದು ಕೈ ಸನ್ನೆ ಮಾಡಿದರು.

ಆಗ ಅಂಬಿ ವೇದಿಕೆಯಿಂದಲೇ “ಏಯ್‌ ಎದ್‌ ಬಾರಯ್ಯ’ ಎಂದು ತಮ್ಮ ಶೈಲಿಯಲ್ಲಿ ಗದರಿದರು. ಅಂಬರೀಶ್‌ ಅವರ ಪ್ರೀತಿಯ ಗದರಿಕೆಗೆ ಮಣಿದ ದರ್ಶನ್‌ ನೇರವಾಗಿ ವೇದಿಕೆಗೆ ಬಂದು ಮತ್ತೆ ಕೆಳಗೆ ಹೋಗುತ್ತೇನೆ ಎಂದರು. ಆಗ ಮತ್ತೆ ಅಂಬರೀಶ್‌ “ಏಯ್‌ ಸುಮ್ನೆ ಕೂತ್ಕೊಬೇಕು’ ಎಂದು ನಕ್ಕರು. ಅದರಂತೆ ದರ್ಶನ್‌ ಕಾರ್ಯಕ್ರಮ ಮುಗಿಯುವವರೆಗೆ ವೇದಿಕೆಯಲ್ಲೇ ಇದ್ದರು. 

ಹೋಗ್ರೋ ಎಲ್ಲಾ ಕೆಳಗೆ ಹೋಗ್ರೋಕಾರ್ಯಕ್ರಮ ಆರಂಭವಾಗಿ ಕೆಲಹೊತ್ತಿನ ನಂತರ ಮುಖ್ಯಮಂತ್ರಿವರಿಗೆ ಸನ್ಮಾನ ನಡೆಯಿತು. ಆ ವೇಳೆಗೆ ಮುಖ್ಯಮಂತ್ರಿಯವರಿಗೊಂದು ಹೂಗುಚ್ಛ ನೀಡಬೇಕೆಂದು ತಂದಿದ್ದವರೆಲ್ಲಾ ಒಮ್ಮೆಲೇ ವೇದಿಕೆ ಏರಿದರು. ಇದರಿಂದ ವೇದಿಕೆ ಒಂದು ಕ್ಷಣ ದೊಂಬಿಯಾಗಿದ್ದು ಸುಳ್ಳಲ್ಲ.

ನಾ ಮುಂದು ತಾ ಮುಂದು ಎಂದು ಸಿಎಂಗೆ ಶುಭಕೋರಿ ಫೋಟೋಗೆ ಫೋಸ್‌ ಕೊಡಲು ನುಗ್ಗುತ್ತಲೇ ಇದ್ದಾರೆ. ಇದರಿಂದ ಸಿಟ್ಟಾದ ಅಂಬರೀಶ್‌ ಮೈ ಎತ್ತಿಕೊಂಡು, “ಏಯ್‌ ಹೋಗ್ರೋ ಸಾಕು, ಎಲ್ಲಾ ಹೋಗ್ರೋ, ಹೇ ನೀನ್ಯಾಕೆ ನುಗ್ತಿಯಾ, ಬಾ ಕೆಳಗಡೆ … ಏಯ್‌ ಕಳಿಸ್ರೋ ಅವನ್ನ ಆಚೆಗೆ … ಚಿನ್ನೇಗೌಡ್ರೆ ಬನ್ನಿ ನೀವು ಓಟಿಗೆ ನಿಂತಿದ್ದೀರೆಂದು ಗೊತ್ತು …’ ಎಂದು ನಗುತ್ತಲೇ ಗದರುತ್ತಾ ವೇದಿಕೆಯಲ್ಲಿದ್ದ ಅಷ್ಟೂ ಮಂದಿಯನ್ನೂ ಕೆಳಗಿಳಿಸಿದರು.

ಅಂಬಿ ಸ್ಟೈಲ್‌ ನೋಡಿ, ಸಿಎಂ ಕುಮಾರಸ್ವಾಮಿ ನಗುತ್ತಿದ್ದರು. ಇಷ್ಟಕ್ಕೆ ಅಂಬಿ ಸಿಟ್ಟು ನಿಲ್ಲಲಿಲ್ಲ. ತಾನು ಭಾಷಣ ಮಾಡಲಾರಂಭಿಸಿದಾಗ ಪಕ್ಕದ ಹಾಲ್‌ನಿಂದ ಮೈಕ್‌ ಸೌಂಡ್‌ ಜೋರಾಗಿ ಕೇಳಿಬರುತ್ತಿತ್ತು. ಆಗ “ಯಾವನೋ ಅವ್ನು ಡೋರ್‌ ಕ್ಲೋಸ್‌ ಮಾಡಲೇ … ಹೇ ನೀನ್ಯಾಕೆ ಮೇಲೆ ಬಂದೆ, ಹೋಗ್‌’ ಎಂದು ಗದರುತ್ತಲೇ ಭಾಷಣ ಮುಗಿಸಿದರು.

ಯಾರ್‌ ಏನೇ ಅಂದರೂ ಕಿವಿಗೆ ಹಾಕ್ಕೋಬೇಡಹಿರಿಯ ನಟಿ ಜಯಮಲಾ ಈಗ ಸಂಪುಟದಲ್ಲಿ ಸಚಿವೆಯಾಗಿರುವುದು, ವಿಧಾನ ಪರಿಷತ್‌ ನಾಯಕಿಯಾಗಿರುವುದು ಗೊತ್ತೇ ಇದೆ. ಈ ಬಗ್ಗೆಯೂ ಅಂಬಿ ತಮ್ಮದೇ ಶೈಲಿಯಲ್ಲಿ ಮಾತನಾಡಿದರು. “ಇಷ್ಟು ದಿನ ರೀಲ್‌ ನಾಯಕಿಯಾಗಿದ್ದೆ. ಈಗ ರಿಯಲ್‌ ನಾಯಕಿಯಾಗಿದ್ದೀಯಾ. ಖುಷಿಯ ವಿಚಾರ. ಜನ ನೂರು ಮಾತನಾಡಿಕೊಳ್ಳಬಹುದು,

ಆದರೆ ಅದನ್ನು ಕಿವಿ ಒಳಗೆ ಬಿಟ್ಟುಕೊಳ್ಳದೇ ಒಳ್ಳೆಯ ಕೆಲಸ ಮಾಡು. ಡಾ.ರಾಜ್‌ಕುಮಾರ್‌ ಹೇಳ್ಳೋರು, “ನಾನು ಮೇಕಪ್‌ಗೆ ಕೂತರೆ, ಅವಳು ಹಂಗೆ, ಇವನು ಹಿಂಗೆ ಮತ್ತೊಂದು ಇನ್ನೊಂದು ಅಂತ ಹೇಳ್ಳೋರು. ಆದರೆ, ಅದು ಯಾವುದು ನನ್ನ ಕಿವಿಯೊಳಗೆ ಹೋಗುತ್ತಿರಲಿಲ್ಲ. ಎಲ್ಲವನ್ನು ಅಲ್ಲಿಂದಲೇ ಆಚೆ ಕಳುಹಿಸುತ್ತಿದ್ದೆ. ಅದೇ ರೀತಿ ಜಯಮಾಲಾ ಕೂಡಾ ಯಾರು ಏನೇ ಅಂದರೂ ಕಿವಿಗೆ ಹಾಕಿಕೊಳ್ಳದೇ ಒಳ್ಳೆಯ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು. 

ಚಿತ್ರರಂಗದ ಇಂಚಿಂಚು ಗೊತ್ತುಚಿತ್ರರಂಗದ ಸಮಸ್ಯೆ, ಬೇಡಿಕೆಗಳ ಪಟ್ಟಿಯನ್ನು ಮುಖ್ಯಮಂತ್ರಿಗಳ ಮುಂದೆ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಇಟ್ಟರು. ಆ ನಂತರ ಮಾತನಾಡಿದ ಅಂಬರೀಶ್‌, “ನಾನು ಚಿತ್ರರಂಗದಲ್ಲಿ 49 ವರ್ಷ ಕಳೆದಿದ್ದೇನೆ. ಇಲ್ಲಿನ ಸಣ್ಣ ಸಣ್ಣ ಅಂಶಗಳೂ ಗೊತ್ತು. ಚಿತ್ರರಂಗದ ಒಂದೊಂದು ಸೆಂಟಿಮೀಟರ್‌ ಕೂಡಾ ಗೊತ್ತು. ಇಲ್ಲಿ ಸಾಕಷ್ಟು ಸಮಸ್ಯೆಗಳಿವೆ.

ಕಲಾವಿದರಿಂದ ಹಿಡಿದು ಸಿನಿಮಾ ಬಿಡುಗಡೆವರೆಗೆ ಸಮಸ್ಯೆ ಇದೆ’ ಎಂದ ಅಂಬಿ ಹಿಂದೆ ಕೆ.ಜಿ.ರಸ್ತೆಯಲ್ಲಿದ್ದ ಚಿತ್ರಮಂದಿರಗಳನ್ನು ನೆನಪಿಸುತ್ತಾ, “ಆಗ ಕೆ.ಜಿ.ರಸ್ತೆಯಲ್ಲಿ ಅಷ್ಟೊಂದು ಚಿತ್ರಮಂದಿರಗಳಿದ್ದರೂ ಸರಿಯಾಗಿ ಕನ್ನಡಕ್ಕೆ ಥಿಯೇಟರ್‌ ಸಿಗುತ್ತಿರಲಿಲ್ಲ. ಒಂದರಲ್ಲಿ ಹಿಂದಿ ಸಿನಿಮಾ ಹಾಕಿದರೆ, ಇನ್ನೊಂದರೆ ಸೆಕ್ಸ್‌ ಪಿಕ್ಚರ್‌ ಹಾಕುತ್ತಿದ್ದರು. ಮತ್ತೊಂದರಲ್ಲಿ ತಮಿಳು..

ಈ ತರಹದ ಸ್ಪರ್ಧೆಯಲ್ಲೇ ಬಿಡುಗಡೆ ಮಾಡಬೇಕಿತ್ತು. ಮೂರನೇ ಕ್ಲಾಸ್‌ ಓದಿದ ಡಾ.ರಾಜ್‌ಕುಮಾರ್‌ ಇತಿಹಾಸನೇ ಬರೆದುಬಿಟ್ಟರು. ಆದರೆ, ಕರ್ನಾಟಕದ, ಈ ಬೆಂಗಳೂರಿನ ಹೃದಯ ಭಾಗವಾಗಿದ್ದ ಎಂ.ಜಿ.ರಸ್ತೆಯಲ್ಲಿ ಅವರ ಒಂದು ಪೋಸ್ಟರ್‌ ಹಾಕಲಾಗಲಿಲ್ಲ. ಆ ತರಹದ ಸನ್ನಿವೇಶದಲ್ಲಿ ಕನ್ನಡ ಚಿತ್ರರಂಗ ಬೆಳೆದು ಬಂದಿದೆ’ ಎನ್ನುತ್ತಾ ಚಿತ್ರರಂಗ ಬೆಳೆದು ಬಂದ ಹಾದಿಯ ಬಗ್ಗೆ ಮಾತನಾಡಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.