ಸಂಚಾರಿಯ 6ನೇ ಮೈಲಿ ಕನಸು


Team Udayavani, Jun 26, 2018, 11:14 AM IST

6ne-maili.jpg

ಸಂಚಾರಿ ವಿಜಯ್‌ ಪ್ರತಿ ಸಿನಿಮಾಗಳ ಬಗ್ಗೆಯೂ ಸಿಕ್ಕಾಪಟ್ಟೆ ನಿರೀಕ್ಷೆಯಿಂದ ಎದುರು ನೋಡುತ್ತಾರೆ. ಅದಕ್ಕೆ ಸರಿಯಾಗಿ ತಮ್ಮ ಪಾತ್ರಕ್ಕೂ ನ್ಯಾಯ ಒದಗಿಸುವಲ್ಲಿ ಅವರು ಯಾವತ್ತೂ ಹಿಂದೆ ಬಿದ್ದಿಲ್ಲ. ಒಂದೆರಡು ತಿಂಗಳ ಹಿಂದೆ ಬಿಡುಗಡೆಯಾದ ವಿಜಯ್‌ ಅವರ “ಕೃಷ್ಣ ತುಳಸಿ’ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾದರೂ ಚಿತ್ರ ಮಾತ್ರ ಓಡಲಿಲ್ಲ. ಈಗ ಮತ್ತೆ ಸಂಚಾರಿ ವಿಜಯ್‌ ನಿರೀಕ್ಷೆ ಕಂಗಳೊಂದಿಗೆ ಎದುರು ನೋಡುತ್ತಿದ್ದಾರೆ.

ಅದಕ್ಕೆ ಕಾರಣ ಕಾರಣ “6ನೇ ಮೈಲಿ’. ಹೌದು, ವಿಜಯ್‌ “6ನೇ ಮೈಲಿ’ ಎಂಬ ಸಿನಿಮಾ ಮಾಡಿರುವ ಬಗ್ಗೆ ನಿಮಗೆ ಗೊತ್ತಿರುಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು ಜುಲೈ 6 ರಂದು ತೆರೆಕಾಣುತ್ತಿದೆ. ಇದೊಂದು ಥ್ರಿಲ್ಲರ್‌ ಹಿನ್ನೆಲೆಯಲ್ಲಿ ಸಾಗುವ ಸಿನಿಮಾವಾಗಿದ್ದು, ವಿಜಯ್‌ ಅವರ ಪಾತ್ರ ಕೂಡಾ ಭಿನ್ನವಾಗಿದೆಯಂತೆ. “6ನೇ ಮೈಲಿ’ ಚಿತ್ರವನ್ನು ಸೀನಿ ನಿರ್ದೇಶಿಸಿದ್ದು, ಡಾ ಶೈಲೇಶ್‌ ಕುಮಾರ್‌ ನಿರ್ಮಿಸಿದ್ದಾರೆ.  

ಟ್ರೆಕ್ಕಿಂಗ್‌ಗೆಂದು ಹೋದಾಗ ಏನೆಲ್ಲಾ ಸಮಸ್ಯೆಗಳು ಎದುರಾಗುತ್ತದೆ ಎಂಬುದನ್ನು ನಿರ್ದೇಶಕ ಸೀನಿ ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಿದ್ದಾರಂತೆ. ಈ ಚಿತ್ರದಲ್ಲಿ ನಕ್ಸಲ್‌ ಹಿನ್ನೆಲೆಯೂ ಇದ್ದು, ಟ್ರೆಕ್ಕಿಂಗ್‌ಗೆಂದು ಹೋದವರು ಅನುಭವಿಸುವ ಕಷ್ಟಗಳನ್ನು ಚಿತ್ರದಲ್ಲಿ ವಿವರಿಸಲಾಗಿದೆಯಂತೆ. ಈ ಹಿಂದೆ ಚಿತ್ರದ ಟೈಟಲ್‌ ಟ್ರ್ಯಾಕ್‌ ಅನ್ನು ಮೆಚ್ಚಿ ಸುದೀಪ್‌ ಟ್ವೀಟ್‌ ಮಾಡಿದ್ದರು.  

ಚಿತ್ರದ ಟೈಟಲ್‌ ಲಿರಿಕಲ್‌ ವಿಡಿಯೋ ಕೇಳಿ ಇಷ್ಟಪಟ್ಟಿರುವ ಸುದೀಪ್‌, “ಸೂಪರ್‌ ಸ್ಟ್ರಾಂಗ್‌ ಮ್ಯೂಸಿಕ್‌’ ಎಂದು ಟ್ವೀಟ್‌ ಮಾಡಿ, ಚಿತ್ರತಂಡದ ಬೆನ್ನು ತಟ್ಟಿದ್ದರು. ಇದು ಕೂಡಾ ಚಿತ್ರತಂಡದ ವಿಶ್ವಾಸವನ್ನು ಹೆಚ್ಚಿಸಿತು. ಅಂದಹಾಗೆ, ಚಿತ್ರದ ಆಡಿಯೋ ಪುನೀತ್‌ ರಾಜಕುಮಾರ್‌ ಅವರ “ಪಿಆರ್‌ಕೆ’ ಮೂಲಕ ಬಿಡುಗಡೆಯಾಗಿದೆ. ಹಾಡು ಕೇಳಿ ಇಷ್ಟಪಟ್ಟ ಸಂಸ್ಥೆ ಆಡಿಯೋ ಹಕ್ಕು ಖರೀದಿಸಿದೆ.  

ಚಿತ್ರಕ್ಕೆ ಪರಮೇಶ್‌ ಪಿ.ಎಂ ಅವರ ಛಾಯಾಗ್ರಹ, ಸಾಯಿಕಿರಣ್‌ ಸಂಗೀತ ನಿರ್ದೇಶನ, ಮಹೇಶ್‌ ರೆಡ್ಡಿ ಸಂಕಲನ, ಡಿಫ‌ರೆಂಟ್‌ ಡ್ಯಾನಿ, ವಿಕ್ರಂ ಮೋರ್‌ ಸಾಹಸ ನಿರ್ದೇಶನ ಹಾಗೂ ರವಿ ಸಂತೆಹೈಕ್ಲು ಅವರ ಕಲಾ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಸಂಚಾರಿ ವಿಜಯ್‌, ಆರ್‌.ಜೆ.ನೇತ್ರ, ರಘು ಪಾಂಡೇಶ್ವರ್‌, ಕೃಷ್ಣ ಹೆಬ್ಟಾಳೆ, ಡಾ. ಜಾಹ್ನವಿ, ಆರ್‌.ಜೆ.ಸುದ್ದೇಶ್‌, ಹೇಮಂತ್‌ ಸುಶೀಲ್‌, ಮೈತ್ರಿ ಜಗ್ಗಿ ಮುಂತಾದವರಿದ್ದಾರೆ. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.