ಅಪೂರ್ವ ಮಾತು


Team Udayavani, Jul 3, 2018, 11:15 AM IST

apoorva-1.jpg

ರವಿಚಂದ್ರನ್‌ ಅವರ “ಅಪೂರ್ವ’ ಚಿತ್ರದ ಆ ಚಿತ್ರದಲ್ಲಿ ನಟಿಸಿದ್ದ ಅಪೂರ್ವ ಯಾವೊಂದು ಚಿತ್ರದಲ್ಲೂ ನಟಿಸಿರಲಿಲ್ಲ. ಇನ್ನು ಆಕೆಯ ಕೆರಿಯರ್‌ ಮುಗಿದಂತೆಯೇ ಎಂದು ಎಲ್ಲರೂ ಭಾವಿಸುವಾಗಲೇ, ಅಪೂರ್ವ ಒಂದರಹಿಂದೊಂದು ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲಿಗೆ ಅಪೂರ್ವ, ರವಿಚಂದ್ರನ್‌ ಅವರ “ರಾಜೇಂದ್ರ ಪೊನ್ನಪ್ಪ’ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಸುದ್ದಿಯಾಯಿತು.

ಆ ನಂತರ ಶರಣ್‌ ಅವರ “ವಿಕ್ಟರಿ-2′ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ ಬಂತು. ಅದಾದ ಮೇಲೆ ರವಿಚಂದ್ರನ್‌ ಅಭಿನಯದ “ಪೀಸ್‌ ಪೀಸ್‌’ ಎಂಬ ಚಿತ್ರದಲ್ಲೂ ರವಿಚಂದ್ರನ್‌ ಅವರಿಗೆ ನಾಯಕಿಯಾಗಿ ಅಪೂರ್ವ ನಟಿಸುತ್ತಿದ್ದಾರೆ ಎಂದಾಯಿತು. ಈಗ ಮತ್ತೂಂದು ಸಿನಿಮಾವನ್ನು ಅಪೂರ್ವ ಒಪ್ಪಿಕೊಂಡಿದ್ದಾರೆ. ಅದು ಶಶಿಕುಮಾರ್‌ ಅವರ ಮಗನ ಸಿನಿಮಾ. ನಟ ಶಶಿಕುಮಾರ್‌ ಅವರ ಮಗ ಆದಿತ್ಯ ಶಶಿಕುಮಾರ್‌ ಚಿತ್ರರಂಗಕ್ಕೆ ಎಂಟ್ರಿಕೊಡುತ್ತಿದ್ದು, ಆ ಚಿತ್ರದಲ್ಲಿ ಅಪೂರ್ವ ನಾಯಕಿಯಾಗಿ ನಟಿಸುತ್ತಿದ್ದಾರೆ.

ಜುಲೈ 6 ರಂದು ಚಿತ್ರದ ಫೋಟೋಶೂಟ್‌ ನಡೆಯಲಿದೆ. ಇದಲ್ಲದೇ ಇನ್ನೊಂದಿಷ್ಟು ಸಿನಿಮಾಗಳ ಮಾತುಕತೆ ಕೂಡಾ ನಡೆಯುತ್ತಿದೆ. ಈ ಮೂಲಕ ಅಪೂರ್ವ ಮತ್ತೆ ಬಿಝಿಯಾಗುತ್ತಿದ್ದಾರೆ. ಎಲ್ಲಾ ಓಕೆ, “ಅಪೂರ್ವ’ ಚಿತ್ರದ ನಂತರ ಯಾಕೆ ಅಷ್ಟೊಂದು ಗ್ಯಾಪ್‌ ಎಂದರೆ, ಎಜುಕೇಶನ್‌ ಎಂಬ ಪ್ರಶ್ನೆ ಬರುತ್ತದೆ. “ನಾನು ಪಿಯುಸಿನಲ್ಲಿದ್ದಾಗ ನನಗೆ “ಅಪೂರ್ವ’ ಸಿನಿಮಾದ ಆಫ‌ರ್‌ ಬಂತು. ಆ ಸಿನಿಮಾ ಮುಗಿದ ಬಳಿಕ ಮತ್ತೆ ನನ್ನ ಶಿಕ್ಷಣವನ್ನು ಮುಂದುವರೆಸಿದೆ.

ಈ ಗ್ಯಾಪ್‌ನಲ್ಲಿ ಸಾಕಷ್ಟು ಆಫ‌ರ್‌ಗಳು ಬಂದುವು. ತಮಿಳು, ತೆಲುಗು ಸೇರಿದಂತೆ ಪರಭಾಷೆಗಳಿಂದಲೂ ಬಂತು. ಆದರೆ ಯಾವುದನ್ನು ಒಪ್ಪಿಕೊಳ್ಳಲಿಲ್ಲ. ಈಗ ನಾನು ಬಿ.ಕಾಂ ಮುಗಿಸಿದ್ದೇನೆ. ಹಾಗಾಗಿ, ಸಿನಿಮಾ ಕಡೆ ಹೆಚ್ಚು ಗಮನಕೊಡುತ್ತಿದ್ದೇನೆ’ ಎನ್ನುವುದು ಅಪೂರ್ವ ಮಾತು. ಇನ್ನು, “ವಿಕ್ಟರಿ-2′ ಹಾಗೂ ಶಶಿಕುಮಾರ್‌ ಪುತ್ರನ ಸಿನಿಮಾದಲ್ಲಿನ ಪಾತ್ರಗಳು ಭಿನ್ನವಾಗಿದ್ದು, ಈ ಮೂಲಕ ಮತ್ತಷ್ಟು ಗುರುತಿಸಿಕೊಳ್ಳುವ ನಿರೀಕ್ಷೆ ಅಪೂರ್ವಗಿದೆ.

ಇನ್ನು, ನಾಯಕಿಯರ ಹೆಸರಲ್ಲಿ ಸಿನಿಮಾ ಸೆಟ್ಟೇರುವುದು ಕಡಿಮೆ. ಅದರಲ್ಲೂ ಮೊದಲ ಸಿನಿಮಾದಲ್ಲೇ ನಾಯಕಿಯ ಹೆಸರನ್ನೇ ಶೀರ್ಷಿಕೆಯನ್ನಾಗಿಟ್ಟರೆ ಆಕೆ ಅದೃಷ್ಟ ಮಾಡಿದ್ದಾಳೆಂಬ ಮಾತು ಚಿತ್ರರಂಗದಲ್ಲಿ ಕೇಳಿಬರುತ್ತದೆ. ಆದರೆ, ಅಪೂರ್ವ ಅವರಿಗೆ ಆ ಅದೃಷ್ಟ ಮೊದಲ ಸಿನಿಮಾದಲ್ಲೇ ಸಿಕ್ಕಿದೆ. ಆದರೆ, ಆಗ ಟೈಟಲ್‌ ಮಹತ್ವ ಅಪೂರ್ವಗೆ ಗೊತ್ತಿರಲಿಲ್ಲವಂತೆ. “ಆಗ ನಾನು ಚಿಕ್ಕವಳಿದ್ದೆ. ನನಗೆ ಟೈಟಲ್‌ ಮಹತ್ವ ಗೊತ್ತಿರಲಿಲ್ಲ.

ಆದರೆ, ಈಗ ಗೊತ್ತಾಗುತ್ತಿದೆ. ಆ ವಿಚಾರದಲ್ಲಿ ನಾನು ಅದೃಷ್ಟವಂತೆ. ನನಗೆ ಒಳ್ಳೆಯ ಲಾಂಚ್‌ ಸಿಕ್ಕಿತು. ರವಿಚಂದ್ರನ್‌ ಅವರಂತಹ ಲೆಜೆಂಡ್‌ ಚಿತ್ರದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ. ಮುಂದೆ ನಾನು ಎಷ್ಟೇ ಸಿನಿಮಾದಲ್ಲಿ ನನ್ನ ಮೊದಲ ಸಿನಿಮಾ “ಅಪೂರ್ವ’ವನ್ನು ಮರೆಯುವಂತಿಲ್ಲ’ ಎನ್ನುವುದು ಅಪೂರ್ವ ಮಾತು. ಅಪೂರ್ವಗೆ ಮುಂದೆ ಚಿತ್ರರಂಗದಲ್ಲಿ ಬಿಝಿಯಾಗಿರಬೇಕು,

ಎಲ್ಲಾ ಸ್ಟಾರ್‌ಗಳ ಸಿನಿಮಾಗಳಲ್ಲಿ ನಟಿಸಬೇಕೆಂಬ ಆಸೆ ಇದೆ. “ಚಿತ್ರರಂಗದಲ್ಲಿ ಒಳ್ಳೆಯ ಸಿನಿಮಾಗಳ ಮೂಲಕ ಬಿಝಿಯಾಗಬೇಕೆಂಬ ಆಸೆ ಇದೆ. ಪುನೀತ್‌, ಸುದೀಪ್‌, ದರ್ಶನ್‌ ಸೇರಿದಂತೆ ಎಲ್ಲಾ ನಟರ ಚಿತ್ರಗಳಲ್ಲಿ ನಟಿಸಬೇಕೆಂಬುದು ನನ್ನ ಕನಸು’ ಎನ್ನುತ್ತಾರೆ ಅಪೂರ್ವ. ಮುಂದೆ ಸಂಪೂರ್ಣವಾಗಿ ಚಿತ್ರರಂಗದಲ್ಲೇ ತೊಡಗಿಸಿಕೊಳ್ಳುವುದರಿಂದ ಡ್ಯಾನ್ಸ್‌, ನಟನೆಯ ಬಗ್ಗೆ ಹೆಚ್ಚು ಗಮನಹರಿಸುತ್ತಿದ್ದಾರಂತೆ ಅಪೂರ್ವ. 

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.