ಚಾಮುಂಡಿ ಬೆಟ್ಟಕ್ಕೆ ಏಲಿಯನ್ಸ್‌ …


Team Udayavani, Jul 5, 2018, 5:40 PM IST

mysore-masala-sharmila-ma.jpg

ಕೆಲವು ತಿಂಗಳುಗಳ ಹಿಂದೆ ಸಂಯುಕ್ತಾ ಹೊರನಾಡು, “ನಮ್ಮ ಯುಎಫ್ಓ’ ಎಂಬ ಹೊಸ ಸೈನ್ಸ್‌ ಫಿಕ್ಷನ್‌ ಚಿತ್ರದಲ್ಲಿ ನಟಿಸುತ್ತಿರುವುದಾಗಿ ಹೇಳಿದ್ದರು. ಈ ಚಿತ್ರದಲ್ಲಿ ಅವರು ಮೊದಲ ಬಾರಿಗೆ ಪೊಲೀಸ್‌ ಯೂನಿಫಾರ್ಮ್ನಲ್ಲಿ ಕಾಣಿಸಿಕೊಳ್ಳುತ್ತಿರುವುದರ ಜೊತೆಗೆ, ಈ ಚಿತ್ರದಲ್ಲಿ ಚಿತ್ರದಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಏಲಿಯನ್ಸ್‌ ಕಾಣಿಸಿಕೊಳ್ಳುತ್ತವೆ ಎಂದು ಹಿಂಟ್‌ ಕೊಟ್ಟಿದ್ದರು. ಈಗ ಆ ಚಿತ್ರಕ್ಕೆ ಚಾಲನೆ ಸಿಕ್ಕಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಅಷ್ಟೇ ಅಲ್ಲ, ಚಿತ್ರಕ್ಕೆ “ಮೈಸೂರು ಮಸಾಲ’ ಎಂದು ನಾಮಕರಣ ಮಾಡಲಾಗಿದೆ.

ಹೌದು, “ನಮ್ಮ ಯುಎಫ್ಓ’ ಚಿತ್ರಕ್ಕೆ “ಮೈಸೂರು ಮಸಾಲ’ ಎಂಬ ಹೊಸ ಹೆ ಹೆಸರು ಸಿಕ್ಕಿದೆ. ಮುಂಚೆ ಈ ಚಿತ್ರದಲ್ಲಿ ಸಂಯುಕ್ತಾ ಹೊರನಾಡು ಜೊತೆಗೆ ಅನಂತ್‌ ನಾಗ್‌ ಅಭಿನಯಿಸುತ್ತಾರೆ ಎಂದು ಹೇಳಲಾಗಿತ್ತು. ಈಗ ತಾರಾಗಣಕ್ಕೆ ಶರ್ಮಿಳಾ ಮಾಂಡ್ರೆ, ಕಿರಣ್‌ ಶ್ರೀನಿವಾಸ್‌, ಪ್ರಕಾಶ್‌ ಬೆಳವಾಡಿ ಮುಂತಾದವರು ಸೇರಿಕೊಂಡಿದ್ದಾರೆ.

 ಕಳೆದ ವರ್ಷ “ಲೀಡರ್‌’ ಮತ್ತು “ಆಕೆ’ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದ ಶರ್ಮಿಳಾ ಮಾಂಡ್ರೆ, ಆ ನಂತರ ಯಾವೊಂದು ಚಿತ್ರದಲ್ಲೂ ನಟಿಸಿರಲಿಲ್ಲ. ಈಗ “ಮೈಸೂರು ಮಸಾಲ’ ಚಿತ್ರದ ಮೂಲಕ ವಾಪಸ್ಸಾಗುತ್ತಿರುವುದಷ್ಟೇ ಅಲ್ಲ, ಒಂದು ವಿಭಿನ್ನ ಪಾತ್ರದಲ್ಲಿಯೂ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ಕಿರಣ್‌ ಶ್ರೀನಿವಾಸ್‌ “ಒಂಥರಾ ಬಣ್ಣಗಳು’ ಎಂಬ ಚಿತ್ರದಲ್ಲಿ ನಟಿಸಿದ್ದು, ಸದ್ಯದಲ್ಲೇ ಆ ಚಿತ್ರ ಬಿಡುಗಡೆಯಾಗಲಿದೆ.

ಅಜಯ್‌ ಸಪೇಶ್‌ಕರ್‌ ಎಂಬುವವರು ಈ ಚಿತ್ರದ ನಿದೇಶಕರು. ಮೂಲತಃ ಟೆಕ್ಕಿಯಾಗಿದ್ದರೂ ಸಿನಿಮಾದ ಆಸಕ್ತಿ ಹೊಂದಿದ್ದ ಅಜಯ್‌, ಹಲವು ಜಾಹೀರಾತು ಹಾಗೂ ಕಿರುಚಿತ್ರಗಳನ್ನು ನಿರ್ಮಿಸಿದ್ದಾರೆ. ಬರೀ ಕನ್ನಡದಲ್ಲಷ್ಟೇ ಅಲ್ಲ ಇಡೀ ಭಾರತದಲ್ಲಿ ಹಲವು ಅತ್ಯುತ್ತಮ ಚಿತ್ರಗಳು ಬರುತ್ತಿತ್ತಾದರೂ ನೈಜ ವಿಜ್ಞಾನ ಆಧಾರಿತ ಸೈ-ಫೈ ಮತ್ತು ಸಾಹಸ ಚಿತ್ರಗಳ ಸಂಖ್ಯೆ ಕಡಿಮೆ ಇದೆ ಎಂದು ಅವರನ್ನು ಗಮನಿಸಿದ್ದರಂತೆ. ಹಾಗಾಗಿ ಯಾರೂ ಪ್ರಯತ್ನಿಸದ ವಿಷಯಗಳ ಮೇಲೆ ಚಿತ್ರ ಮಾಡಬೇಕು ಎಂದು ಅವರು “ಮೈಸೂರು ಮಸಾಲ’ ಕೈಗೆತ್ತಿಕೊಂಡಿದ್ದಾರೆ. “ಮೈಸೂರು ಮಸಾಲ’ ಚಿತ್ರವು ವಿಜ್ಞಾನ ಮತ್ತು ಊಹಾತ್ಮಕ ಅಂಶಗಳ ಮೇಲೆ ಬೆಳಕು ಚೆಲ್ಲಲಿದೆಯಂತೆ. ಈ ಚಿತ್ರವನ್ನು ಎ.ಎಸ್‌.ಎಕ್ಸ್‌ ಫಿಲ್ಮ್ಸ್ ಸಂಸ್ಥೆಯು ನಿರ್ಮಿಸುತ್ತಿದೆ.

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.