ಸುಮನ್‌ ಕಾಮಿಡಿ ಖುಷಿ


Team Udayavani, Jul 11, 2018, 11:05 AM IST

double-engine.jpg

ಸುಮನ್‌ ರಂಗನಾಥ್‌ ಇಲ್ಲಿವರೆಗೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇಷ್ಟು ವರ್ಷದ ಅವರ ಕೆರಿಯರ್‌ನಲ್ಲಿ ಅವರು ನಾನಾ ಬಗೆಯ ಪಾತ್ರ ಪೋಷಣೆ ಮಾಡಿದ್ದಾರೆ. ಆದರೆ, ಯಾವತ್ತೂ ಔಟ್‌ ಅಂಡ್‌ ಔಟ್‌ ಕಾಮಿಡಿ ಪಾತ್ರವನ್ನು ಯಾವತ್ತೂ ಮಾಡಿರಲಿಲ್ಲ. ಈಗ ಅದೂ ಹಾಗೋಗಿದೆ. ಈ ವಾರ ತೆರೆಕಾಣುತ್ತಿರುವ “ಡಬಲ್‌ ಇಂಜಿನ್‌’ ಚಿತ್ರದಲ್ಲಿ ಸುಮನ್‌ ರಂಗನಾಥ್‌ ಪ್ರಮುಖ ಪಾತ್ರ ಮಾಡಿದ್ದು, ಕಾಮಿಡಿ ಪಾತ್ರದಲ್ಲಿ ಅವರು ಮಿಂಚಿದ್ದಾರೆ.

ಈ ಪಾತ್ರವನ್ನು ಜನ ಹೇಗೆ ಸ್ವೀಕರಿಸುತ್ತಾರೆಂಬ ಕುತೂಹಲದಲ್ಲಿ ಎದುರು ನೋಡುತ್ತಿದ್ದಾರೆ ಸುಮನ್‌. “ಈ ಹಿಂದೆ ನಾನು ಕೆಲವು ಸಿನಿಮಾಗಳಲ್ಲಿ ಕಾಮಿಡಿ ಪಾತ್ರ ಮಾಡಿದ್ದೆ. ಆದರೆ, ಅದು ಕೆಲವೇ ಕೆಲವು ದೃಶ್ಯಗಳಲ್ಲಿ. ಈ ಬಾರಿ “ಡಬಲ್‌ ಇಂಜಿನ್‌’ನಲ್ಲಿ ನನ್ನ ಪಾತ್ರ ಕಾಮಿಡಿ ಹಿನ್ನೆಲೆಯಲ್ಲಿ ಮೂಡಿಬಂದಿದೆ. ಇದೊಂದು ಹಾಸ್ಯಪ್ರಧಾನ ಚಿತ್ರವಾದ್ದರಿಂದ ನನ್ನ ಪಾತ್ರಕ್ಕೂ ಕಾಮಿಡಿ ಮಾಡುವ ಅವಕಾಶ ಸಿಕ್ಕಿದೆ.

ನಾನಂತೂ ಈ ಸಿನಿಮಾ ಬಗ್ಗೆ ಖುಷಿಯಾಗಿದ್ದೇನೆ. ಜನ ಹೇಗೆ ಸ್ವೀಕರಿಸುತ್ತಾರೆಂಬ ಕುತೂಹಲವಿದೆ’ ಎನ್ನುತ್ತಾರೆ ಸುಮನ್‌. ಈ ಚಿತ್ರದಲ್ಲಿ ಸುಮನ್‌ ಹಳ್ಳಿಯ ಹೆಣ್ಣುಮಗಳಾಗಿ ಕಾಣಿಸಿಕೊಂಡಿದ್ದಾರೆ. ಹಳ್ಳಿಯಲ್ಲಿದ್ದರೂ ಸಖತ್‌ ಗ್ಲಾಮರಸ್‌ ಆಗಿ ಕಾಣಿಸಿಕೊಳ್ಳುವ ಪಾತ್ರವಂತೆ. ಈ ನಡುವೆ ಕಾಸಿನ ಆಸೆಗೆ ಬಿದ್ದು, ತಂಡವೊಂದರ ಜೊತೆ ಸೇರುವ, ಈ ನಡುವೆ ಆಗುವ ಎಡವಟ್ಟುಗಳ ಮೂಲಕ ಸಿನಿಮಾ ಸಾಗಿ ಬಂದಿದೆ’ ಎನ್ನುತ್ತಾರೆ.

“ನಿರ್ದೇಶಕ ಚಂದ್ರಮೋಹನ್‌ ಕರೆ ಮಾಡಿ, “ಡಬಲ್‌ ಇಂಜಿನ್‌’ನಲ್ಲಿ ಹೀಗೊಂದು ಪಾತ್ರವಿದೆ, ನೀವು ಮಾಡಬೇಕು ಎಂದಾಗ ಕಥೆ ಕೇಳಿದೆ. ಪಾತ್ರ ಇಷ್ಟವಾಗಿ ಒಪ್ಪಿಕೊಂಡೆ’ ಎನ್ನುತ್ತಾರೆ ಅವರು. ಸದ್ಯ ಸುಮನ್‌ ರಂಗನಾಥ್‌ “ಕವಲು ದಾರಿ’ ಹಾಗೂ “ದಂಡುಪಾಳ್ಯ-4′ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇನ್ನು, “ಕವಲುದಾರಿ’ಯಲ್ಲಿ ಅವರದು ಗೆಸ್ಟ್‌ ಅಪಿಯರೆನ್ಸ್‌ ಆದರೂ ಪಾತ್ರ ತುಂಬಾ ಚೆನ್ನಾಗಿದೆಯಂತೆ.

“ದಂಡುಪಾಳ್ಯ-4’ನಲ್ಲಿ ಅವರು ಗ್ಯಾಂಗ್‌ ಲೀಡರ್‌. ಬಹುತೇಕ ಪಾತ್ರಗಳಲ್ಲಿ ಗ್ಲಾಮರಸ್‌ ಆಗಿ ಕಾಣಿಸಿಕೊಳ್ಳುವ ಸುಮನ್‌ ರಂಗನಾಥ್‌, “ದಂಡುಪಾಳ್ಯ-4’ನಲ್ಲಿ ಡಿಗ್ಲಾಮರಸ್‌ ಆಗಿ ಕಾಣಿಸಿಕೊಂಡಿದ್ದಾರಂತೆ.”ಸಾಕಷ್ಟು ಸಿನಿಮಾಗಳು ಹುಡುಕಿಕೊಂಡು ಬರುತ್ತಿವೆ. ಒಂದು ಸಿನಿಮಾಕ್ಕಿಂತ ಇನ್ನೊಂದು ಸಿನಿಮಾದ ಪಾತ್ರ ಭಿನ್ನವಾಗಿರುತ್ತದೆ ಎಂಬ ಖುಷಿ ಇದೆ. ಆದಷ್ಟು ಪಾತ್ರಗಳು ರಿಪೀಟ್‌ ಆಗದಂತೆ ನೋಡಿಕೊಳ್ಳುತ್ತೇನೆ.

ಪೊಲೀಸ್‌, ಟೀಚರ್‌, ಲೇಡಿ ಬಾಸ್‌ … ಹೀಗೆ ವಿಭಿನ್ನ ಪಾತ್ರಗಳೊಂದಿಗೆ ನಿರ್ದೇಶಕರು ಬರುತ್ತಾರೆ. ನನಗೆ ತುಂಬಾ ಇಷ್ಟವಾದ ಕಥೆಯನ್ನು ಒಪ್ಪಿಕೊಳ್ಳುತ್ತೇನೆ’ ಎನ್ನುತ್ತಾರೆ. ಸುಮನ್‌ ರಂಗನಾಥ್‌ ಅವರನ್ನು ನೋಡಿದವರು ಕೇಳುವ ಒಂದು ಸಾಮಾನ್ಯ ಪ್ರಶ್ನೆ ಎಂದರೆ, ಅಂದಿನಿಂದ ಇಂದಿನವರೆಗೂ ಹಾಗೆ ಇದ್ದೀರಿ, ನಿಮ್ಮ ಸೌಂದರ್ಯದ ಗುಟ್ಟೇನು ಎಂಬುದು. ಇದಕ್ಕೆ ಸುಮನ್‌ ರಂಗನಾಥ್‌ ಉತ್ತರಿಸುತ್ತಾರೆ. “ನಮ್ಮ ದೇಹ ಪ್ರಕೃತಿಯಲ್ಲಿ ನಾವು ಬೆಳೆದು ಬಂದ ಹಾದಿ, ನಮ್ಮ ವಂಶಾವಳಿ, ನಮ್ಮ ಲೈಫ್ಸ್ಟೈಲ್‌ ಎಲ್ಲವೂ ಮುಖ್ಯವಾಗುತ್ತದೆ.

ನಾವು ಎಷ್ಟು ಸಿಂಪಲ್‌ ಆಗಿ, ಖುಷಿಯಾಗಿ, ಪಾಸಿಟಿವ್‌ ಆಗಿರುತ್ತೇನೆ ಅಷ್ಟು ನಮಗೆ ಒಳ್ಳೆಯದು. ನಾನು ಅದನ್ನು ಪಾಲಿಸುತ್ತೇನೆ. ಜೀವನ ಶೈಲಿಯಲ್ಲಿ ಯೋಗ ಮಾಡುವುದನ್ನು ರೂಢಿಸಿಕೊಂಡರೆ ಅದು ನಿಮ್ಮನ್ನು ಇನ್ನಷ್ಟು ಖುಷಿಯಾಗಿಡುತ್ತದೆ. ನನಗೆ ಯಾವುದೇ ಬ್ಯಾಡ್‌ ಹ್ಯಾಬಿಟ್ಸ್‌ ಇಲ್ಲ. ಸರಿಯಾದ ಸಮಯಕ್ಕೆ ಊಟ, ನಿದ್ದೆ ಮಾಡುತ್ತೇನೆ. ಮಾಡುವ ಕೆಲಸವನ್ನು ಪ್ರೀತಿಯಿಂದ, ಶ್ರದ್ಧೆಯಿಂದ ಮಾಡುತ್ತೇನೆ’ ಎನ್ನುವುದು ಸುಮನ್‌ ಮಾತು. 

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.