ವಸಂತ ಕಾಲ ಬಂದಾಗ, ಹಳ್ಳಿ ಹುಡ್ಗಿ ಪ್ಯಾಟೇಗ್‌ ಬಂದ್ಲು


Team Udayavani, Jul 16, 2018, 1:55 PM IST

kanneri1.jpg

ಈ ಹಿಂದೆ “ಮೂಕ ಹಕ್ಕಿ’ ಎಂಬ ಚಿತ್ರ ಮಾಡಿದ್ದ ನೀನಾಸಂ ಮಂಜು, ಈಗ ಇನ್ನೊಂದು ಚಿತ್ರವನ್ನು ಸದ್ದಿಲ್ಲದೆ ಶುರು ಮಾಡಿದ್ದಾರೆ. ಅದೆ “ಕನ್ನೇರಿ’. “ಕಾಡಿನ ವಸಂತಗಳು’ ಎಂಬ ಉಪಶೀರ್ಷಿಕೆ ಇರುವ ಈ ಚಿತ್ರದಲ್ಲಿ ಸುಧಾರಾಣಿ, ತಬಲಾ ನಾಣಿ, ಅರ್ಚನಾ ಮುಂತಾದವರು ನಟಿಸುತ್ತಿದ್ದಾರೆ. ಬುಧವಾರ ಬೆಳಿಗ್ಗೆ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಕೂಡಾ ಮುಗಿದಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಎಸ್‌.ಎ. ಚಿನ್ನೇಗೌಡ ಅವರು ಮೊದಲ ದೃಶ್ಯಕ್ಕೆ ಕ್ಯಾಮೆರಾ ಚಾಲನೆ ಮಾಡಿದ್ದಾರೆ.

“ಕೆನ್ನೇರಿ’ ಚಿತ್ರವು ಕೋಟಗಾನಹಳ್ಳಿ ರಾಮಯ್ಯನವರ “ಜೇನು ಆಕಾಶದ ಅರಮನೆಯೊ’  ಕಾದಂಬರಿಯನ್ನಾಧರಿಸಿದೆ. ನೀನಾಸಂ ಮಂಜು ಅವರ ಮೊದಲ ಚಿತ್ರ “ಮೂಕ ಹಕ್ಕಿ’ಯೂ, ರಾಮಯ್ಯನವರ ಕಥೆಯನ್ನಾಧರಿಸಿತ್ತು. ಆ ಚಿತ್ರಕ್ಕೆ ಸಂಭಾಷಣೆಯನ್ನೂ ಅವರೇ ರಚಿಸಿದ್ದಾರೆ. ಈಗ “ಕೆನ್ನೇರಿ’ ಚಿತ್ರಕ್ಕೂ ರಾಮಯ್ಯನವರ ಕಥೆ ಮತ್ತು ಸಂಭಾಷಣೆಯಿದೆ. ಸಾಹಿತ್ಯವನ್ನೂ ಅವರೇ ರಚಿಸಿದ್ದಾರೆ. ಚಿತ್ರವನ್ನು ಉಮೇಶ್‌ ಎಂ ಕತ್ತಿ ನಿರ್ಮಿಸಿದರೆ, ಚಿತ್ರಕ್ಕೆ ಕದ್ರಿ ಮಣಿಕಾಂತ್‌ ಅವರ ಸಂಗೀತವಿದೆ. ಇನ್ನು ಗುರುಪ್ರಸಾದ್‌ ಚಿತ್ರದ ಛಾಯಾಗ್ರಹಣ ಮಾಡುತ್ತಿದ್ದಾರೆ.

“ಕನ್ನೇರಿ’ ಎಂದರೇನು ಎಂಬ ಪ್ರಶ್ನೆ ಬರಬಹುದು? ಈ ಪ್ರಶ್ನೆಯನ್ನು ಮಂಜು ಅವರ ಮುಂದಿಟ್ಟರೆ, ಕುರುಬರ ಭಾಷೆಯಲ್ಲಿ ವಸಂತ ಕಾಲ ಎಂದು ಉತ್ತರಿಸುತ್ತಾರೆ. ಈ ಚಿತ್ರದ ಕಥೆಯು ಮುತ್ತಮ್ಮ ಎಂಬ ವಿರಾಜಪೇಟೆಯ ಹುಡುಗಿಯ ಸುತ್ತ ಸುತ್ತುದಂತೆ. ಕೊಡಗಿನ ಕಾಡಿನಲ್ಲಿರುವ ಆ ಹುಡುಗಿ ಬೆಂಗಳೂರಿನಲ್ಲಿ ಖ್ಯಾತ ಗಣಿತಶಾಸ್ತ್ರಜ್ಞರೊಬ್ಬರ ಮನೆಯಲ್ಲಿ ಕೆಲಸಕ್ಕೆ ಸೇರುತ್ತಾಳೆ. ಕಾಡಿನಲ್ಲಿದ್ದ ಅವಳು ನಾಡಿನಲ್ಲಿ ಹೇಗೆ ಹೊಂದಿಕೊಳ್ಳುತ್ತಾಳೆ ಎಂಬುದು ಚಿತ್ರದ ಕಥೆ’ ಎನ್ನುತ್ತಾರೆ ಮಂಜು.

ಇಲ್ಲಿ ಮುತ್ತಮ್ಮನಾಗಿ ಅರ್ಚನ ಕಾಣಿಸಿಕೊಂಡರೆ, ಸುಧಾರಾಣಿ ಅವರು ಗಣಿತಶಾಸ್ತ್ರಜ್ಞರಾಗಿ ನಟಿಸುತ್ತಿದ್ದಾರೆ. ಇದಲ್ಲದೆ ಚಿತ್ರದಲ್ಲಿ ದೊಡ್ಡ ಕಲಾವಿದರೊಬ್ಬರು ನಟಿಸುತ್ತಿದ್ದಾರಂತೆ. ಆದರೆ, ಆ ಕಲಾವಿದರ್ಯಾರು ಎಂಬುದನ್ನು ಮಂಜು ಈಗಲೇ ಬಿಟ್ಟುಕೊಡುವುದಕ್ಕೆ ತಯಾರಿಲ್ಲ. “ಒಂದು ಹಂತದ ಮಾತುಕತೆಯಾಗಿದೆ. ಎಲ್ಲಾ ಪಕ್ಕಾ ಆದ ನಂತರ ಬಹಿರಂಗಪಡಿಸಲಾಗುತ್ತಿದೆ. ಮೇಲಾಗಿ ಚಿತ್ರ ಪ್ರಾರಂಭವಾಗುವುದಕ್ಕೆ ಸ್ವಲ್ಪ ಸಮಯವಿದೆ. ಒಳ್ಳೆಯ ದಿನವಿತ್ತು ಎಂಬ ಕಾರಣಕ್ಕೆ ಮುಹೂರ್ತ ಮಾಡಿದ್ದೇವೆ. ಆಗಸ್ಟ್‌ನಲ್ಲಿ ಬೆಂಗಳೂರು, ಕೊಡಗು, ಉತ್ತರ ಕರ್ನಾಟಕದಲ್ಲಿ 40 ದಿನಗಳ ಒಂದೇ ಹಂತದ ಚಿತ್ರೀಕರಣ ಮಾಡುವ ಯೋಚನೆ ಇದೆ’ ಎನ್ನುತ್ತಾರೆ ಮಂಜು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.