ಸಲ್ಮಾನ್ ಚಿತ್ರದಲ್ಲಿ ಸುದೀಪ್; ದಭಾಂಗ್-3ನಲ್ಲಿ ಕಿಚ್ಚ


Team Udayavani, Jul 16, 2018, 3:48 PM IST

sudeep1.jpg

ಚಿರಂಜೀವಿಯವರ “ಸೈರಾ’ದಲ್ಲಿ ಸುದೀಪ್‌ ನಟಿಸಲು ಒಪ್ಪಿಕೊಂಡಿರುವ ವಿಚಾರ ನಿಮಗೆ ಗೊತ್ತೇ ಇದೆ. ಈಗ ಸುದೀಪ್‌ ಅಭಿಮಾನಿಗಳಿಗೆ ಮತ್ತೂಂದು ಖುಷಿಯ ಸುದ್ದಿ. ಸುದೀಪ್‌ ಮತ್ತೂಂದು ಹಿಂದಿ ಸಿನಿಮಾದಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ. ಅದು ಬಾಲಿವುಡ್‌ನ‌ ಸ್ಟಾರ್‌ ನಟನ ಚಿತ್ರದಲ್ಲಿ ಎಂಬುದು ವಿಶೇಷ. ಹೌದು, ಸಲ್ಮಾನ್‌ ಖಾನ್‌ ಅಭಿನಯದ “ದಭಾಂಗ್‌-3′ ಚಿತ್ರದಲ್ಲಿ ಸುದೀಪ್‌ ಪ್ರಮುಖ ಪಾತ್ರ ಮಾಡುತ್ತಿದ್ದು, ಈಗಾಗಲೇ ಮಾತುಕತೆಯಾಗಿ ನಟಿಸಲು ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಸುದೀಪ್‌, ಸಲ್ಮಾನ್‌ ಖಾನ್‌ ಚಿತ್ರದಲ್ಲಿ ನಟಿಸಿದಂತಾಗುತ್ತದೆ. ಈಗಾಗಲೇ “ದಭಾಂಗ್‌’ ಹಾಗೂ “ದಭಾಂಗ್‌-2′ ಬಂದಿದ್ದು, ಈಗ ಚಿತ್ರತಂಡ “ದಭಾಂಗ್‌-3′ ಮಾಡಲು ಮುಂದಾಗಿದೆ. ಈ ಚಿತ್ರವನ್ನು ಪ್ರಭುದೇವ ನಿರ್ದೇಶಿಸುತ್ತಿದ್ದು, ಸಲ್ಮಾನ್‌ ಖಾನ್‌ ಸಹೋದರ ಸೋಹಲ್‌ ಖಾನ್‌ ನಿರ್ಮಿಸುತ್ತಿದ್ದಾರೆ. 

ಎಲ್ಲಾ ಓಕೆ, ಚಿತ್ರದಲ್ಲಿ ಸುದೀಪ್‌ ನೆಗೆಟಿವ್‌ ಪಾತ್ರ ಮಾಡುತ್ತಿದ್ದಾರಾ ಎಂದು ನೀವು ಕೇಳಿದರೆ, ಇಲ್ಲ ಎಂಬ ಉತ್ತರ ಬರುತ್ತದೆ. ಏಕೆಂದರೆ ಚಿತ್ರದಲ್ಲಿ ಸುದೀಪ್‌ ಪ್ರಮುಖ ಪಾತ್ರ ಮಾಡುತ್ತಿದ್ದು, ಅದು ನೆಗೆಟಿವ್‌ ಅಲ್ಲ ಎಂಬುದು ಮೂಲಗಳ ಮಾಹಿತಿ. ಈ ಹಿಂದೆ “ಟೈಗರ್‌ ಜಿಂದಾ ಹೇ’ ಸಿನಿಮಾದಲ್ಲಿ ಸುದೀಪ್‌ ನಟಿಸಲಿದ್ದಾರೆಂಬ ಸುದ್ದಿ ಓಡಾಡುತ್ತಿತ್ತು. ಆದರೆ, ಆ ಚಿತ್ರದಲ್ಲಿ ಸುದೀಪ್‌ ನಟಿಸಿರಲಿಲ್ಲ. ಈಗ ಸುದೀಪ್‌, ಸಲ್ಮಾನ್‌ ಖಾನ್‌ ಚಿತ್ರದಲ್ಲಿ ನಟಿಸುವುದು ಪಕ್ಕಾ ಆಗಿದೆ. ಚಿತ್ರ ಡಿಸೆಂಬರ್‌ನಲ್ಲಿ ಆರಂಭವಾಗಲಿದೆ. 

ಇನ್ನು, ಸಲ್ಲು ಸಹೋದರ ಸೋಹಲ್‌ ಹಾಗೂ ಸುದೀಪ್‌ ಇಬ್ಬರು ಒಳ್ಳೆಯ ಸ್ನೇಹಿತರು. ಸಿಸಿಎಲ್‌ ಮೂಲಕ ಇಬ್ಬರು ಸ್ನೇಹ ಆರಂಭವಾಗಿದ್ದು, ಬೆಂಗಳೂರಿಗೆ ಬಂದಾಗ ಈ ಇಬ್ಬರು ಭೇಟಿಯಾಗುತ್ತಿರುತ್ತಾರೆ. ಈಗ ತಮ್ಮ ನಿರ್ಮಾಣದ ಸಿನಿಮಾದಲ್ಲಿ ಸುದೀಪ್‌ ನಟಿಸುವಂತೆ ಸೋಹಾಲ್‌ ಕೇಳಿಕೊಂಡಿದ್ದು, ಸುದೀಪ್‌ ಕೂಡಾ ಒಪ್ಪಿಕೊಂಡಿದ್ದಾರೆ. ಇದು ಸುದೀಪ್‌ ಅವರ ಹಿಂದಿ ಸಿನಿಮಾದ ಸುದ್ದಿಯಾದರೆ ತಮಿಳು ಸಿನಿಮಾವೊಂದರಲ್ಲಿ ನಟಿಸಲು ಸುದೀಪ್‌ ಗ್ರೀನ್‌ಸಿಗ್ನಲ್‌ ಕೊಟ್ಟಿದ್ದಾರೆ. ತಮಿಳು ನಟ ಧನುಶ್‌ ನಿರ್ದೇಶಿಸಿ, ನಟಿಸುತ್ತಿರುವ ಸಿನಿಮಾವೊಂದರಲ್ಲಿ ಸುದೀಪ್‌ ಕೂಡಾ ಪ್ರಮುಖ ಪಾತ್ರ ಮಾಡಲಿದ್ದಾರೆ. ಈ ಚಿತ್ರ ನವೆಂಬರ್‌ನಲ್ಲಿ ಆರಂಭವಾಗುವ ಸಾಧ್ಯತೆ ಇದೆ. 

ಅತ್ತ ಕಡೆ ಹಾಲಿವುಡ್‌, ಇತ್ತ ಕಡೆ ಕನ್ನಡ, ತಮಿಳು, ತೆಲುಗು, ಹಿಂದಿ ಸಿನಿಮಾಗಳಲ್ಲಿ ಸುದೀಪ್‌ ಬಿಝಿಯಾಗುತ್ತಿದ್ದಾರೆ. ಎಲ್ಲಾ ಓಕೆ, ಸದ್ಯ ಸುದೀಪ್‌ ಅವರು ನಟಿಸುತ್ತಿರುವ “ಕೋಟಿಗೊಬ್ಬ-3′ ಹಾಗೂ “ಪೈಲ್ವಾನ್‌’ ಚಿತ್ರಗಳು ಯಾವಾಗ ಮುಗಿಯುತ್ತದೆ ಎಂದು ನೀವು ಕೇಳಬಹುದು. ಈಗಾಗಲೇ ಸುದೀಪ್‌ ಈ ಎರಡು ಸಿನಿಮಾಗಳ ಒಂದೊಂದು ಶೆಡ್ನೂಲ್‌ ಮುಗಿಸಿದ್ದಾರೆ. ಸದ್ಯ “ಸೈರಾ’ಗೆ ಸುದೀಪ್‌ ಡೇಟ್ಸ್‌ ಕೊಟ್ಟಿದ್ದು, ಅದು ಮುಗಿದ ನಂತರ ಮತ್ತೆ “ಪೈಲ್ವಾನ್‌’ ಆರಂಭವಾಗಲಿದೆ. 

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.