ಸಲ್ಮಾನ್ ಚಿತ್ರದಲ್ಲಿ ಸುದೀಪ್; ದಭಾಂಗ್-3ನಲ್ಲಿ ಕಿಚ್ಚ


Team Udayavani, Jul 16, 2018, 3:48 PM IST

sudeep1.jpg

ಚಿರಂಜೀವಿಯವರ “ಸೈರಾ’ದಲ್ಲಿ ಸುದೀಪ್‌ ನಟಿಸಲು ಒಪ್ಪಿಕೊಂಡಿರುವ ವಿಚಾರ ನಿಮಗೆ ಗೊತ್ತೇ ಇದೆ. ಈಗ ಸುದೀಪ್‌ ಅಭಿಮಾನಿಗಳಿಗೆ ಮತ್ತೂಂದು ಖುಷಿಯ ಸುದ್ದಿ. ಸುದೀಪ್‌ ಮತ್ತೂಂದು ಹಿಂದಿ ಸಿನಿಮಾದಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ. ಅದು ಬಾಲಿವುಡ್‌ನ‌ ಸ್ಟಾರ್‌ ನಟನ ಚಿತ್ರದಲ್ಲಿ ಎಂಬುದು ವಿಶೇಷ. ಹೌದು, ಸಲ್ಮಾನ್‌ ಖಾನ್‌ ಅಭಿನಯದ “ದಭಾಂಗ್‌-3′ ಚಿತ್ರದಲ್ಲಿ ಸುದೀಪ್‌ ಪ್ರಮುಖ ಪಾತ್ರ ಮಾಡುತ್ತಿದ್ದು, ಈಗಾಗಲೇ ಮಾತುಕತೆಯಾಗಿ ನಟಿಸಲು ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಸುದೀಪ್‌, ಸಲ್ಮಾನ್‌ ಖಾನ್‌ ಚಿತ್ರದಲ್ಲಿ ನಟಿಸಿದಂತಾಗುತ್ತದೆ. ಈಗಾಗಲೇ “ದಭಾಂಗ್‌’ ಹಾಗೂ “ದಭಾಂಗ್‌-2′ ಬಂದಿದ್ದು, ಈಗ ಚಿತ್ರತಂಡ “ದಭಾಂಗ್‌-3′ ಮಾಡಲು ಮುಂದಾಗಿದೆ. ಈ ಚಿತ್ರವನ್ನು ಪ್ರಭುದೇವ ನಿರ್ದೇಶಿಸುತ್ತಿದ್ದು, ಸಲ್ಮಾನ್‌ ಖಾನ್‌ ಸಹೋದರ ಸೋಹಲ್‌ ಖಾನ್‌ ನಿರ್ಮಿಸುತ್ತಿದ್ದಾರೆ. 

ಎಲ್ಲಾ ಓಕೆ, ಚಿತ್ರದಲ್ಲಿ ಸುದೀಪ್‌ ನೆಗೆಟಿವ್‌ ಪಾತ್ರ ಮಾಡುತ್ತಿದ್ದಾರಾ ಎಂದು ನೀವು ಕೇಳಿದರೆ, ಇಲ್ಲ ಎಂಬ ಉತ್ತರ ಬರುತ್ತದೆ. ಏಕೆಂದರೆ ಚಿತ್ರದಲ್ಲಿ ಸುದೀಪ್‌ ಪ್ರಮುಖ ಪಾತ್ರ ಮಾಡುತ್ತಿದ್ದು, ಅದು ನೆಗೆಟಿವ್‌ ಅಲ್ಲ ಎಂಬುದು ಮೂಲಗಳ ಮಾಹಿತಿ. ಈ ಹಿಂದೆ “ಟೈಗರ್‌ ಜಿಂದಾ ಹೇ’ ಸಿನಿಮಾದಲ್ಲಿ ಸುದೀಪ್‌ ನಟಿಸಲಿದ್ದಾರೆಂಬ ಸುದ್ದಿ ಓಡಾಡುತ್ತಿತ್ತು. ಆದರೆ, ಆ ಚಿತ್ರದಲ್ಲಿ ಸುದೀಪ್‌ ನಟಿಸಿರಲಿಲ್ಲ. ಈಗ ಸುದೀಪ್‌, ಸಲ್ಮಾನ್‌ ಖಾನ್‌ ಚಿತ್ರದಲ್ಲಿ ನಟಿಸುವುದು ಪಕ್ಕಾ ಆಗಿದೆ. ಚಿತ್ರ ಡಿಸೆಂಬರ್‌ನಲ್ಲಿ ಆರಂಭವಾಗಲಿದೆ. 

ಇನ್ನು, ಸಲ್ಲು ಸಹೋದರ ಸೋಹಲ್‌ ಹಾಗೂ ಸುದೀಪ್‌ ಇಬ್ಬರು ಒಳ್ಳೆಯ ಸ್ನೇಹಿತರು. ಸಿಸಿಎಲ್‌ ಮೂಲಕ ಇಬ್ಬರು ಸ್ನೇಹ ಆರಂಭವಾಗಿದ್ದು, ಬೆಂಗಳೂರಿಗೆ ಬಂದಾಗ ಈ ಇಬ್ಬರು ಭೇಟಿಯಾಗುತ್ತಿರುತ್ತಾರೆ. ಈಗ ತಮ್ಮ ನಿರ್ಮಾಣದ ಸಿನಿಮಾದಲ್ಲಿ ಸುದೀಪ್‌ ನಟಿಸುವಂತೆ ಸೋಹಾಲ್‌ ಕೇಳಿಕೊಂಡಿದ್ದು, ಸುದೀಪ್‌ ಕೂಡಾ ಒಪ್ಪಿಕೊಂಡಿದ್ದಾರೆ. ಇದು ಸುದೀಪ್‌ ಅವರ ಹಿಂದಿ ಸಿನಿಮಾದ ಸುದ್ದಿಯಾದರೆ ತಮಿಳು ಸಿನಿಮಾವೊಂದರಲ್ಲಿ ನಟಿಸಲು ಸುದೀಪ್‌ ಗ್ರೀನ್‌ಸಿಗ್ನಲ್‌ ಕೊಟ್ಟಿದ್ದಾರೆ. ತಮಿಳು ನಟ ಧನುಶ್‌ ನಿರ್ದೇಶಿಸಿ, ನಟಿಸುತ್ತಿರುವ ಸಿನಿಮಾವೊಂದರಲ್ಲಿ ಸುದೀಪ್‌ ಕೂಡಾ ಪ್ರಮುಖ ಪಾತ್ರ ಮಾಡಲಿದ್ದಾರೆ. ಈ ಚಿತ್ರ ನವೆಂಬರ್‌ನಲ್ಲಿ ಆರಂಭವಾಗುವ ಸಾಧ್ಯತೆ ಇದೆ. 

ಅತ್ತ ಕಡೆ ಹಾಲಿವುಡ್‌, ಇತ್ತ ಕಡೆ ಕನ್ನಡ, ತಮಿಳು, ತೆಲುಗು, ಹಿಂದಿ ಸಿನಿಮಾಗಳಲ್ಲಿ ಸುದೀಪ್‌ ಬಿಝಿಯಾಗುತ್ತಿದ್ದಾರೆ. ಎಲ್ಲಾ ಓಕೆ, ಸದ್ಯ ಸುದೀಪ್‌ ಅವರು ನಟಿಸುತ್ತಿರುವ “ಕೋಟಿಗೊಬ್ಬ-3′ ಹಾಗೂ “ಪೈಲ್ವಾನ್‌’ ಚಿತ್ರಗಳು ಯಾವಾಗ ಮುಗಿಯುತ್ತದೆ ಎಂದು ನೀವು ಕೇಳಬಹುದು. ಈಗಾಗಲೇ ಸುದೀಪ್‌ ಈ ಎರಡು ಸಿನಿಮಾಗಳ ಒಂದೊಂದು ಶೆಡ್ನೂಲ್‌ ಮುಗಿಸಿದ್ದಾರೆ. ಸದ್ಯ “ಸೈರಾ’ಗೆ ಸುದೀಪ್‌ ಡೇಟ್ಸ್‌ ಕೊಟ್ಟಿದ್ದು, ಅದು ಮುಗಿದ ನಂತರ ಮತ್ತೆ “ಪೈಲ್ವಾನ್‌’ ಆರಂಭವಾಗಲಿದೆ. 

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.