ಸಲ್ಮಾನ್ ಚಿತ್ರದಲ್ಲಿ ಸುದೀಪ್; ದಭಾಂಗ್-3ನಲ್ಲಿ ಕಿಚ್ಚ
Team Udayavani, Jul 16, 2018, 3:48 PM IST
ಚಿರಂಜೀವಿಯವರ “ಸೈರಾ’ದಲ್ಲಿ ಸುದೀಪ್ ನಟಿಸಲು ಒಪ್ಪಿಕೊಂಡಿರುವ ವಿಚಾರ ನಿಮಗೆ ಗೊತ್ತೇ ಇದೆ. ಈಗ ಸುದೀಪ್ ಅಭಿಮಾನಿಗಳಿಗೆ ಮತ್ತೂಂದು ಖುಷಿಯ ಸುದ್ದಿ. ಸುದೀಪ್ ಮತ್ತೂಂದು ಹಿಂದಿ ಸಿನಿಮಾದಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ. ಅದು ಬಾಲಿವುಡ್ನ ಸ್ಟಾರ್ ನಟನ ಚಿತ್ರದಲ್ಲಿ ಎಂಬುದು ವಿಶೇಷ. ಹೌದು, ಸಲ್ಮಾನ್ ಖಾನ್ ಅಭಿನಯದ “ದಭಾಂಗ್-3′ ಚಿತ್ರದಲ್ಲಿ ಸುದೀಪ್ ಪ್ರಮುಖ ಪಾತ್ರ ಮಾಡುತ್ತಿದ್ದು, ಈಗಾಗಲೇ ಮಾತುಕತೆಯಾಗಿ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಸುದೀಪ್, ಸಲ್ಮಾನ್ ಖಾನ್ ಚಿತ್ರದಲ್ಲಿ ನಟಿಸಿದಂತಾಗುತ್ತದೆ. ಈಗಾಗಲೇ “ದಭಾಂಗ್’ ಹಾಗೂ “ದಭಾಂಗ್-2′ ಬಂದಿದ್ದು, ಈಗ ಚಿತ್ರತಂಡ “ದಭಾಂಗ್-3′ ಮಾಡಲು ಮುಂದಾಗಿದೆ. ಈ ಚಿತ್ರವನ್ನು ಪ್ರಭುದೇವ ನಿರ್ದೇಶಿಸುತ್ತಿದ್ದು, ಸಲ್ಮಾನ್ ಖಾನ್ ಸಹೋದರ ಸೋಹಲ್ ಖಾನ್ ನಿರ್ಮಿಸುತ್ತಿದ್ದಾರೆ.
ಎಲ್ಲಾ ಓಕೆ, ಚಿತ್ರದಲ್ಲಿ ಸುದೀಪ್ ನೆಗೆಟಿವ್ ಪಾತ್ರ ಮಾಡುತ್ತಿದ್ದಾರಾ ಎಂದು ನೀವು ಕೇಳಿದರೆ, ಇಲ್ಲ ಎಂಬ ಉತ್ತರ ಬರುತ್ತದೆ. ಏಕೆಂದರೆ ಚಿತ್ರದಲ್ಲಿ ಸುದೀಪ್ ಪ್ರಮುಖ ಪಾತ್ರ ಮಾಡುತ್ತಿದ್ದು, ಅದು ನೆಗೆಟಿವ್ ಅಲ್ಲ ಎಂಬುದು ಮೂಲಗಳ ಮಾಹಿತಿ. ಈ ಹಿಂದೆ “ಟೈಗರ್ ಜಿಂದಾ ಹೇ’ ಸಿನಿಮಾದಲ್ಲಿ ಸುದೀಪ್ ನಟಿಸಲಿದ್ದಾರೆಂಬ ಸುದ್ದಿ ಓಡಾಡುತ್ತಿತ್ತು. ಆದರೆ, ಆ ಚಿತ್ರದಲ್ಲಿ ಸುದೀಪ್ ನಟಿಸಿರಲಿಲ್ಲ. ಈಗ ಸುದೀಪ್, ಸಲ್ಮಾನ್ ಖಾನ್ ಚಿತ್ರದಲ್ಲಿ ನಟಿಸುವುದು ಪಕ್ಕಾ ಆಗಿದೆ. ಚಿತ್ರ ಡಿಸೆಂಬರ್ನಲ್ಲಿ ಆರಂಭವಾಗಲಿದೆ.
ಇನ್ನು, ಸಲ್ಲು ಸಹೋದರ ಸೋಹಲ್ ಹಾಗೂ ಸುದೀಪ್ ಇಬ್ಬರು ಒಳ್ಳೆಯ ಸ್ನೇಹಿತರು. ಸಿಸಿಎಲ್ ಮೂಲಕ ಇಬ್ಬರು ಸ್ನೇಹ ಆರಂಭವಾಗಿದ್ದು, ಬೆಂಗಳೂರಿಗೆ ಬಂದಾಗ ಈ ಇಬ್ಬರು ಭೇಟಿಯಾಗುತ್ತಿರುತ್ತಾರೆ. ಈಗ ತಮ್ಮ ನಿರ್ಮಾಣದ ಸಿನಿಮಾದಲ್ಲಿ ಸುದೀಪ್ ನಟಿಸುವಂತೆ ಸೋಹಾಲ್ ಕೇಳಿಕೊಂಡಿದ್ದು, ಸುದೀಪ್ ಕೂಡಾ ಒಪ್ಪಿಕೊಂಡಿದ್ದಾರೆ. ಇದು ಸುದೀಪ್ ಅವರ ಹಿಂದಿ ಸಿನಿಮಾದ ಸುದ್ದಿಯಾದರೆ ತಮಿಳು ಸಿನಿಮಾವೊಂದರಲ್ಲಿ ನಟಿಸಲು ಸುದೀಪ್ ಗ್ರೀನ್ಸಿಗ್ನಲ್ ಕೊಟ್ಟಿದ್ದಾರೆ. ತಮಿಳು ನಟ ಧನುಶ್ ನಿರ್ದೇಶಿಸಿ, ನಟಿಸುತ್ತಿರುವ ಸಿನಿಮಾವೊಂದರಲ್ಲಿ ಸುದೀಪ್ ಕೂಡಾ ಪ್ರಮುಖ ಪಾತ್ರ ಮಾಡಲಿದ್ದಾರೆ. ಈ ಚಿತ್ರ ನವೆಂಬರ್ನಲ್ಲಿ ಆರಂಭವಾಗುವ ಸಾಧ್ಯತೆ ಇದೆ.
ಅತ್ತ ಕಡೆ ಹಾಲಿವುಡ್, ಇತ್ತ ಕಡೆ ಕನ್ನಡ, ತಮಿಳು, ತೆಲುಗು, ಹಿಂದಿ ಸಿನಿಮಾಗಳಲ್ಲಿ ಸುದೀಪ್ ಬಿಝಿಯಾಗುತ್ತಿದ್ದಾರೆ. ಎಲ್ಲಾ ಓಕೆ, ಸದ್ಯ ಸುದೀಪ್ ಅವರು ನಟಿಸುತ್ತಿರುವ “ಕೋಟಿಗೊಬ್ಬ-3′ ಹಾಗೂ “ಪೈಲ್ವಾನ್’ ಚಿತ್ರಗಳು ಯಾವಾಗ ಮುಗಿಯುತ್ತದೆ ಎಂದು ನೀವು ಕೇಳಬಹುದು. ಈಗಾಗಲೇ ಸುದೀಪ್ ಈ ಎರಡು ಸಿನಿಮಾಗಳ ಒಂದೊಂದು ಶೆಡ್ನೂಲ್ ಮುಗಿಸಿದ್ದಾರೆ. ಸದ್ಯ “ಸೈರಾ’ಗೆ ಸುದೀಪ್ ಡೇಟ್ಸ್ ಕೊಟ್ಟಿದ್ದು, ಅದು ಮುಗಿದ ನಂತರ ಮತ್ತೆ “ಪೈಲ್ವಾನ್’ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
MUST WATCH
ಹೊಸ ಸೇರ್ಪಡೆ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ