ಅನೀಶ್‌ ಈಗ ಗಾಯಕ, ಇವನೊಬ್ಬ ಪೊರ್ಕಿ… ವಾಸು ಬಂದ ದಾರಿಬಿಡಿ


Team Udayavani, Jul 17, 2018, 4:11 PM IST

anish.jpg

ಅನೀಶ್‌ ತೇಜಶ್ವರ್‌ ನಾಯಕ, ನಿರ್ಮಾಪಕರಾಗುವುದರ ಜೊತೆಗೆ ಗಾಯಕರೂ ಆಗಿದ್ದಾರೆ. ಹೌದು, ಹೀರೋ ಆಗಿದ್ದ ಅನೀಶ್‌ “ವಾಸು – ನಾನ್‌ ಪಕ್ಕಾ ಕಮರ್ಷಿಯಲ್‌’ ಚಿತ್ರದ ಮೂಲಕ ನಿರ್ಮಾಪಕರಾದರು. ಈಗ ಅದೇ ಚಿತ್ರದಲ್ಲಿ ಹಾಡುವ ಮೂಲಕ ಗಾಯಕರೂ ಎನಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಅನೀಶ್‌ ತೇಜಶ್ವರ್‌ ಹಾಡಿದ್ದಾರೆ. 

“ಅಲೆಮಾರಿ’ ಸಂತು ಬರೆದ “ಇವನೊಬ್ಬ ಪೊರ್ಕಿ, ಇವನೊಬ್ಬ ಕಂತ್ರಿ… ವಾಸು ಬಂದ ದಾರಿ ಬಿಡಿ…’ ಎಂಬ ಹಾಡಿಗೆ ಅನೀಶ್‌ ಧ್ವನಿಯಾಗಿದ್ದಾರೆ. ಅಜನೀಶ್‌ ಸಂಗೀತದಲ್ಲಿ ಮೂಡಿ ಬಂದ ಈ ಹಾಡನ್ನು ಇತ್ತೀಚೆಗೆ ಅಜನೀಶ್‌ ಅವರ ಸ್ಟುಡಿಯೋದಲ್ಲಿ ರೆಕಾರ್ಡ್‌ ಮಾಡಲಾಗಿದೆ. 

ಅಷ್ಟಕ್ಕೂ ಈ ಹಾಡನ್ನು ಹಾಡಬೇಕೆಂಬ ಯೋಚನೆ ಅನೀಶ್‌ ಅವರಿಗಿರಲಿಲ್ಲವಂತೆ. ಇದೊಂದು ಹಾಡು ಮಾತ್ರ ಬಾಕಿ ಇದ್ದುದರಿಂದ, ಯಾರಿಂದ ಹಾಡಿಸಬೇಕು, ಯಾವಾಗ ಹಾಡಿಸಬೇಕು ಎಂಬ ಚರ್ಚೆ ನಡೆಯುತ್ತಿರುವಾಗ, “ಬೇಗನೇ ಯಾರಿಂದನಾದರೂ ಹಾಡಿಸಿ, ಇಲ್ಲಾ ಅಂದ್ರೆ, ನಾನೇ ಹಾಡಲಾ?’ ಎಂದು ಅನೀಶ್‌ ಹೇಳಿದ್ದಾರೆ. ಹಾಗೆ ಹೇಳಿದ್ದೇ ತಡ, ಅಜನೀಶ್‌ ಲೋಕನಾಥ್‌ ತಡಮಾಡದೆ, ಸ್ಟುಡಿಯೋಗೆ ಕರೆಸಿ, ಹಾಡಿ ಅಂದಿದ್ದಾರೆ. ಸಾಂಗ್‌ ಚೆನ್ನಾಗಿ ಮೂಡಿಬಂದರೆ ಮಾತ್ರ ಇಟ್ಟುಕೊಳ್ಳೋಣ, ಇಲ್ಲವಾದರೆ ಬೇಡ ಎಂಬ ತೀರ್ಮಾನಕ್ಕೆ ಬಂದು, ಅನೀಶ್‌ ತೇಜಶ್ವರ್‌ ಹಾಡಿದ್ದಾರೆ. 

ಕೇವಲ ಎರಡು ಗಂಟೆಯಲ್ಲೇ ಆ ಹಾಡು ಮುಗಿಸಿಬಿಟ್ಟಿದ್ದಾರೆ. ಅದೊಂದು ಪೆಪ್ಪಿ ನಂಬರ್‌ ಆಗಿದ್ದರಿಂದ ಜೋಶ್‌ನಲ್ಲೇ ಹಾಡಿದ್ದಾರೆ. ಅದು ಅಜನೀಶ್‌ಗೂ ಇಷ್ಟವಾಗಿದೆ. ಹೀರೋ ಇಂಟ್ರಡಕ್ಷನ್‌ ಸಾಂಗ್‌ಗೆ ಅವರೇ ಧ್ವನಿಯಾಗಿರುವುದರಿಂದ ಸಹಜವಾಗಿಯೇ ಅವರಿಗೆ ಖುಷಿ ಇದೆ. ಈ ಹಾಡನ್ನು ಮುಂದಿನವಾರ ಬಿಡುಗಡೆ ಮಾಡಲು ಅನೀಶ್‌ ಯೋಚಿಸಿದ್ದಾರೆ. 

ಅಂದಹಾಗೆ, ಚಿತ್ರ ಈಗ ಸೆನ್ಸಾರ್‌ ಅಂಗಳದಲ್ಲಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ “ವಾಸು’ ಜುಲೈನಲ್ಲೇ ಬರುವ ಸಾಧ್ಯತೆ ಇದೆ. ಇಲ್ಲವಾದರೆ, ಆಗಸ್ಟ್‌ ಮೊದಲ ವಾರದಲ್ಲಿ ಪ್ರೇಕ್ಷಕರ ಮುಂದೆ ಬರಲಿದ್ದಾನೆ.  ಚಿತ್ರಕ್ಕೆ ದಿಲೀಪ್‌ ಚಕ್ರವರ್ತಿ ಛಾಯಾಗ್ರಹಣವಿದೆ. ನಿಶ್ವಿ‌ಕಾ ನಾಯ್ಡು ನಾಯಕಿ. ಉಳಿದಂತೆ ಅವಿನಾಶ್‌, ಗಿರೀಶ್‌, ಮಂಜುನಾಥ್‌ ಹೆಗಡೆ, ಅರುಣ ಬಾಲರಾಜ್‌, ದೀಪಕ್‌ ಶೆಟ್ಟಿ ಇತರರು ನಟಿಸಿದ್ದಾರೆ. ಅಜಿತ್‌ ಉಗ್ಗಿನ್‌ ವಾಸನ್‌ ಈ ಚಿತ್ರದ ನಿರ್ದೇಶಕರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.