ಒಂದೇ ಶಾಟ್‌, ಒಬ್ಬ ಕಲಾವಿದ, ಒಂದೇ ಸ್ಥಳ


Team Udayavani, Jul 18, 2018, 2:40 PM IST

srinivasa-prabhu-10.jpg

ಒಂದೇ ಶಾಟ್‌, ಒಬ್ಬ ಕಲಾವಿದ, ಒಂದೇ ಸ್ಥಳ, ಒಂದೇ ವಾದ್ಯ …ಇದೆಲ್ಲಾ “ಬಿಂಬ… ಆ ತೊಂಬತ್ತು ನಿಮಿಷಗಳು’ ಚಿತ್ರದ ಹೊಸ ಪ್ರಯೋಗ. ಹೌದು, ಕನ್ನಡದಲ್ಲಿ ಈಗಾಗಲೇ ಸಾಕಷ್ಟು ಪ್ರಯೋಗಾತ್ಮಕ ಸಿನಿಮಾಗಳು ಬಂದಿವೆ. ಆ ಸಾಲಿಗೆ “ಬಿಂಬ … ಆ ತೊಂಬತ್ತು ನಿಮಿಷಗಳು’ ಹೊಸ ಸೇರ್ಪಡೆ. ಎಂ.ಎಂ.ಮೂವೀಸ್‌ ಬ್ಯಾನರ್‌ನಲ್ಲಿ ತಯಾರಾಗಿರುವ ಈ ಚಿತ್ರಕ್ಕೆ ಜಿ. ಮೂರ್ತಿ ಮತ್ತು ಕೆ.ವಿ. ಶ್ರೀನಿವಾಸ ಪ್ರಭು ನಿರ್ದೇಶಕರು. ಚಿತ್ರಕ್ಕೆ ಶ್ರೀನಿವಾಸ ಪ್ರಭು ಕೇಂದ್ರಬಿಂದು.

 ಇಲ್ಲಿ ಅವರೊಬ್ಬರೇ ಕಲಾವಿದರು ಎಂಬುದು ವಿಶೇಷ. ಇದು ಸ್ವಾತಂತ್ರ್ಯ ಪೂರ್ವದಲ್ಲಿದ್ದಂತಹ ಕನ್ನಡದ ಶ್ರೇಷ್ಠ ನಾಟಕಕಾರ, ಸಾಹಿತಿ ಸಂಸರು ಅವರ ಬದುಕಿನ ಚಿತ್ರಣ. ಅವರ ಪೂರ್ಣ ಹೆಸರು ಸಾಮಿ ವೆಂಕಟಾದ್ರಿ ಐಯ್ಯರ್‌. ಇಲ್ಲಿ ಸಂಸರದ್ದೇ ಕೇಂದ್ರ ಪಾತ್ರ. ವಿಕ್ಷಿಪ್ತತೆ ಮೈಗೂಡಿಸಿಕೊಂಡಿದ್ದ ವ್ಯಕ್ತಿತ್ವದ, ಪ್ರಕ್ಷುಬ್ಧ ಮನಸ್ಥಿತಿಯ ವ್ಯಕ್ತಿಯಾಗಿದ್ದ ಸಂಸರಿಗೆ ಸದಾ ತನ್ನನ್ನು ಯಾರೋ ಹಿಂಬಾಲಸುತ್ತಿದ್ದಾರೆ, ಪೊಲೀಸರು ನನ್ನ ಮೇಲೆ ಕಣ್ಣಿಟ್ಟಿದ್ದಾರೆ ಎಂಬ ಭಯ. ಆ ಭಯ ಆತಂಕಗಳೇ ಅವರನ್ನು ಆತ್ಮಹತ್ಯೆ ಮಾಡಿಕೊಳ್ಳುವಂತಹ ಸ್ಥಿತಿಗೆ ಕರೆದೊಯ್ಯುತ್ತದೆ. ಅದೇ ಚಿತ್ರದ ಕಥಾಹಂದರ. ಈ ಹಿಂದೆ ಸಂಸರ ಕುರಿತು ಶ್ರೀನಿವಾಸ ಪ್ರಭು ಏಕ ವ್ಯಕ್ತಿ ಪ್ರದರ್ಶನ ಮಾಡಿದ್ದರು. ಆ ನಾಟಕವೇ ಈಗ “ಬಿಂಬ… ಆ ತೊಂಬತ್ತು ನಿಮಿಷಗಳು’ ಚಿತ್ರವಾಗಿದೆ.

ಇಲ್ಲಿ ಸಂಸರ ಪಾತ್ರವನ್ನು ಶ್ರೀನಿವಾಸ್‌ ಪ್ರಭು ನಿರ್ವಹಿಸಿದ್ದಾರೆ. ಸಂಸರು ಆತ್ಮಹತ್ಯೆಗೆ ಮುನ್ನ ಒಂದಷ್ಟು ಹಳೆಯ ನೆನಪುಗಳನ್ನು ಮೆಲುಕು ಹಾಕುತ್ತಾರೆ. ಕನ್ನಡಿ ಮುಂದೆ ನಿಂತು ಸಂಸರು ಸ್ವಗತದಲ್ಲಿ ಒಂದಷ್ಟು ಮಾತಾಡಿಕೊಳ್ಳುತ್ತಾರೆ. ಅದನ್ನೇ ಇಲ್ಲಿ ಒಂದೇ ಶಾಟ್‌, ಒಂದೇ ಸ್ಥಳದಲ್ಲಿ ಚಿತ್ರೀಕರಿಸಲಾಗಿದೆ. ನಾಟಕವನ್ನು ಯಥಾವತ್‌ ಆಗಿ ಇಲ್ಲಿ ಮಾಡದಿದ್ದರೂ, ಚಿತ್ರಕ್ಕಾಗಿ ಕೆಲವು ತಿದ್ದುಪಡಿ ಮಾಡಲಾಗಿದೆ. ಹೊಸ ರೀತಿಯ ಚಿತ್ರಕಥೆ ಮಾಡಿ, 90 ನಿಮಿಷದದ ಆತ್ಮಹತ್ಯೆಯ ಕಥೆ ಮತ್ತು ವ್ಯಥೆಯ ಜೊತೆಗೆ ಸಂಸರ ಬದುಕು ಅನಾವರಣಗೊಳಿಸುವ ಪ್ರಯತ್ನ ಇಲ್ಲಿ ಮಾಡಲಾಗಿದೆ.

ಇಲ್ಲಿ ಶ್ರೀನಿವಾಸ್‌ ಪ್ರಭು ಅವರೊಬ್ಬರೇ ತೆರೆ ಮೇಲೆ ಕಾಣಿಸಿಕೊಂಡಿದ್ದಾರೆ. ಅವರೊಂದಿಗೆ ನಾಲ್ಕು ವಿಶೇಷ ಧ್ವನಿಗಳು ಮಾತ್ರ ಕೇಳಿಸುತ್ತವೆ. ಅದು ಬಿಟ್ಟರೆ, ಬೇರ್ಯಾವ ಪಾತ್ರವೂ ಇಲ್ಲಿಲ್ಲ. ಈ ಚಿತ್ರದ ಉದ್ದೇಶ ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರನ್ನು ದ್ವೇಷಿಸುತ್ತಿದ್ದ ಸಂಸರ ಬದುಕಿನ ಚಿತ್ರಣವನ್ನು ಕಟ್ಟಿಕೊಡಲಾಗಿದೆ. ಇದೊಂದು ಬಡ ಸಾಹಿತಿಯ ಚಿತ್ರ ಎಂಬುದು ನಿರ್ದೇಶಕ ಕಮ್‌ ನಟ ಶ್ರೀನಿವಾಸ್‌ ಪ್ರಭು ಅವರ ಮಾತು. ನಾಟಕದಲ್ಲೂ ಚೌರಾಸಿಯ ಅವರ ಕೊಳಲ ಹಿನ್ನೆಲೆ ಸಂಗೀತವನ್ನು ಬಳಸಿಕೊಳ್ಳಲಾಗಿತ್ತು. ಚಿತ್ರದಲ್ಲೂ ಗೋಡ್ಕಿಂಡಿ ಅವರ ಕೊಳಲು ವಾದನವಿದೆ. 

ವಿಶೇಷವೆಂದರೆ, ಇದೊಂದೇ ವಾದ್ಯ ಚಿತ್ರದಲ್ಲಿದೆ ಎನ್ನುತ್ತಾರೆ ಅವರು. ಅಂದಹಾಗೆ, ನಿರ್ದೇಶಕ ಜಿ. ಮೂರ್ತಿ ಅವರು, ಶ್ರೀನಿವಾಸ ಪ್ರಭು ಅವರ ನಾಟಕ ನೋಡಿ ಮೆಚ್ಚಿದ್ದರು. ಸುಮಾರು ಹದಿನೈದು ದಿನಗಳ ಕಾಲ ಆ ಪಾತ್ರ ಅವರನ್ನು ಕಾಡಿತ್ತಂತೆ. ಒಂದೂವರೆ ಗಂಟೆ ಕಾಲ ಸಂಭಾಷಣೆ ಜೊತೆ ಅಭಿನಯಿಸೋದು ಸುಲಭವಲ್ಲ, ಅದನ್ನು ಚೆನ್ನಾಗಿ ನಿರ್ವಹಿಸಿರುವ ಶ್ರೀನಿವಾಸ ಪ್ರಭು ಅವರಿಗೆ ಫೋನ್‌ ಮಾಡಿ, ಈ ನಾಟಕವನ್ನು ಸಿನಿಮಾ ಮಾಡೋಣ ಅಂದಿದ್ದಾರೆ.

 ಶ್ರೀನಿವಾಸ್‌ ಪ್ರಭು ಅವರಿಗೆ ಇದು ಒಗ್ಗುತ್ತಾ ಎಂಬ ಪ್ರಶ್ನೆ ಎದುರಾಗಿದೆ. ಸಾಹಿತ್ಯಿಕ ಚಿತ್ರ ಯಾಕೆ ಮಾಡಬಾರದು ಅಂತೆನಿಸಿದ್ದೇ ತಡ, ಗ್ರೀನ್‌ಸಿಗ್ನಲ್‌ ಕೊಟ್ಟಿದ್ದಾರೆ. ಚಿತ್ರವೂ ಮುಗಿದಿದೆ. ಸದ್ಯಕ್ಕೆ ಡಬ್ಬಿಂಗ್‌ ಮುಗಿದಿದ್ದು, ಚೆನ್ನೈನಲ್ಲಿ ಎಫೆಕ್ಟ್$Õ ನಡೆಯುತ್ತಿದೆ. ನಿರ್ದೇಶಕ ಜಿ. ಮೂರ್ತಿ ಅವರಿಗೂ ಇದು ಚಾಲೆಂಜ್‌. ಇಲ್ಲಿ ಸಿಂಗಲ್‌ ಶಾಟ್‌ನಲ್ಲಿ ಸಿನ್ಮಾ ತೆಗೆಯೋದು ಕಷ್ಟದ ಕೆಲಸ ಅಂತ ಗೊತ್ತಿದ್ದರೂ, ಸಾಹಸಕ್ಕೆ ಕೈ ಹಾಕಿದ್ದಾರೆ. ಒಂದೂಮುಕ್ಕಾಲು ಗಂಟೆ ಅವಧಿಯ ಈ ಚಿತ್ರದಲ್ಲಿ ದುಡಿದ ಎಲ್ಲರಿಗೂ ವಿಶೇಷ ಧನ್ಯವಾದ ಹೇಳುತ್ತಾರೆ ನಿರ್ದೇಶಕರು.

ಪಿ.ಕೆ.ಎಚ್‌ ದಾಸ್‌ ಚಿತ್ರದ ಇನ್ನೊಂದು ಹೈಲೆಟ್‌. ಅವರಿಲ್ಲಿ ಎರಡು ತಾಸು ಹ್ಯಾಂಡಲ್‌ಶಾಟ್‌ ತೆಗೆದಿರುವುದು ವಿಶೇಷ. ಸಾಕಷ್ಟು ರಿಹರ್ಸಲ್‌ ನಡೆಸಿ, ಆ ಬಳಿಕ ಕೆಲಸ ಮಾಡಿರುವ ದಾಸ್‌, ಇಂಥದ್ದೊಂದು ಚಿತ್ರದಲ್ಲಿ ತೊಡಗಿಕೊಂಡಿದ್ದು ಖುಷಿ ಎನ್ನುತ್ತಾರೆ. ಈ ರೀತಿಯ ಚಾಲೆಂಜ್‌ ತೆಗೆದುಕೊಳ್ಳುವಾಗ ಕ್ಯಾಮೆರಾ ಕೈ ಕೊಟ್ಟರೆ ಏನಪ್ಪ ಮಾಡೋದು ಎಂಬ ಭಯದಲ್ಲೆ ಕೆಲಸ ಮಾಡಿದ್ದಾರೆ. ಕೆಲ ಚಿತ್ರಗಳಲ್ಲಿ ಸ್ಟಾಂಡ್‌ ಇಟ್ಟು ಚಿತ್ರೀಕರಿಸಿದ್ದಾರೆ. ಆದರೆ, ದಾಸ್‌ ಇಲ್ಲಿ ಹ್ಯಾಂಡಲ್‌ಶಾಟ್‌ ಮಾಡಿದ್ದಾರೆ. ಅದೇ ವಿಶೇಷ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.