ಆಗಸ್ಟ್‌ 16ಕ್ಕೆ ಒಡೆಯರ್‌ ಆರಂಭ


Team Udayavani, Jul 26, 2018, 11:16 AM IST

aug-darshan.jpg

ದರ್ಶನ್‌ ಅಭಿನಯದ “ಯಜಮಾನ’ ಇನ್ನೇನು ಮುಗಿಯುವ ಹಂತಕ್ಕೆ ಬಂದಿದೆ. ಅದಾದ ಬಳಿಕ ಎಂ.ಡಿ.ಶ್ರೀಧರ್‌ ನಿರ್ದೇಶನದ “ಒಡೆಯರ್‌’ ಚಿತ್ರಕ್ಕೆ ಅದ್ಧೂರಿ ಚಾಲನೆ ಸಿಗಲಿದೆ. “ಒಡೆಯರ್‌’ ಚಿತ್ರ ದರ್ಶನ್‌ ಅಭಿನಯದ 52 ನೇ ಸಿನಿಮಾ ಎಂಬುದು ವಿಶೇಷ. ಆಗಸ್ಟ್‌ 16 ರಂದು ಮೈಸೂರಿನಲ್ಲಿ “ಒಡೆಯರ್‌’ಗೆ ಅದ್ಧೂರಿ ಮುಹೂರ್ತ ನೆರವೇರಲಿದ್ದು, ಸೆಪ್ಟೆಂಬರ್‌ನಿಂದ ಮೊದಲ ಹಂತದ ಚಿತ್ರೀಕರಣ ಶುರುವಾಗಲಿದೆ.

ಇದು ತೆಲುಗಿನ “ವೀರಂ’ ಚಿತ್ರದ ಅವತರಣಿಕೆ. ಕನ್ನಡಕ್ಕೆ ತಕ್ಕಂತೆ ಬದಲಾವಣೆ ಮಾಡಿಕೊಂಡಿರುವ ನಿರ್ದೇಶಕ ಎಂ.ಡಿ.ಶ್ರೀಧರ್‌, ಇದೀಗ ಸ್ಕ್ರಿಪ್ಟ್ ಕೆಲಸವನ್ನು ಪೂರ್ಣಗೊಳಿಸಿ, ಒಂದಷ್ಟು ಅಂತಿಮ ಸ್ಪರ್ಶದಲ್ಲಿದ್ದಾರೆ. ಚಿತ್ರಕ್ಕಿನ್ನೂ ನಾಯಕಿಯ ಆಯ್ಕೆಯಾಗಿಲ್ಲ. ದರ್ಶನ್‌ಗೆ ಸರಿಯಾದ ನಾಯಕಿಯ ಹುಡುಕಾಟದಲ್ಲಿ ನಿರ್ದೇಶಕರು ಬಿಜಿಯಾಗಿದ್ದು, ಆದಷ್ಟು ಕನ್ನಡದ ನಾಯಕಿಯನ್ನೇ ಆಯ್ಕೆ ಮಾಡಲು ಜೋರು ಹುಡುಕಾಟ ನಡೆಸಿದ್ದಾರೆ. 

ಈಗಾಗಲೇ ಕೆಲ ಪಾತ್ರಗಳಿಗೆ ಉಳಿದ ಕಲಾವಿದರ ಜೊತೆ ಮಾತನಾಡಿರುವ ನಿರ್ದೇಶಕರು, ಇಷ್ಟರಲ್ಲೇ ದೊಡ್ಡ ತಾರಾಬಳಗದ ಆಯ್ಕೆಯನ್ನೂ ಅಂತಿಮಗೊಳಿಸಲಿದ್ದಾರೆ. ಇನ್ನು, ನಿರ್ದೇಶಕ ಎಂ.ಡಿ.ಶ್ರೀಧರ್‌ ಅವರು ಈ ಹಿಂದೆ ದರ್ಶನ್‌ ಅಭಿನಯದಲ್ಲಿ “ಪೊರ್ಕಿ’ ಮತ್ತು “ಬುಲ್‌ ಬುಲ್‌’ ಚಿತ್ರವನ್ನು ನಿರ್ದೇಶಿಸಿದ್ದರು. ಆ ಎರಡು ಚಿತ್ರಗಳು ಭರ್ಜರಿ ಯಶಸ್ಸು ಪಡೆದಿದ್ದವು.

ಈಗ ನಿರ್ದೇಶನದ ಮೂರನೇ ಚಿತ್ರ “ಒಡೆಯರ್‌’ಗೆ ತಯಾರಿ ನಡೆಸಿರುವ ಎಂ.ಡಿ.ಶ್ರಿಧರ್‌, “ಹ್ಯಾಟ್ರಿಕ್‌’ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಸೆಪ್ಟೆಂಬರ್‌ನಿಂದ “ಒಡೆಯರ್‌ಗೆ’ ಚಾಲನೆ ಸಿಗುತ್ತಿದ್ದು, ಮೊದಲ ಹಂತದಲ್ಲಿ 40 ದಿನಗಳ ಕಾಲ ಮೈಸೂರು, ಬೆಂಗಳೂರು, ಹೈದರಾಬಾದ್‌ ಸುತ್ತಮುತ್ತ ಚಿತ್ರೀಕರಣ ನಡೆಸಲು ತೀರ್ಮಾನಿಸಿದ್ದಾರೆ. ಎಂದಿನಂತೆ, ಶ್ರೀಧರ್‌ ಚಿತ್ರದಲ್ಲಿ ಕೃಷ್ಣಕುಮಾರ್‌ (ಕೆಕೆ) ಛಾಯಾಗ್ರಹಣ ಮಾಡಿದರೆ, ಹರಿಕೃಷ್ಣ ಅವರು ಸಂಗೀತ ನೀಡುತ್ತಿದ್ದಾರೆ.

ಕೆ.ಎಂ.ಪ್ರಕಾಶ್‌ ಅವರು ಸಂಕಲನ ಮಾಡಲಿದ್ದಾರೆ. ಸಂದೇಶ್‌ ನಾಗರಾಜ್‌ “ಒಡೆಯರ್‌’ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ನಡುವೆಯೇ ದರ್ಶನ್‌ ಅವರ 53ನೇ ಚಿತ್ರದ ಟೈಟಲ್‌ ಬಗ್ಗೆ ಚರ್ಚೆ ಆರಂಭವಾಗಿದೆ. ಈ ಚಿತ್ರವನ್ನು ತರುಣ್‌ ಸುಧೀರ್‌ ನಿರ್ದೇಶಿಸಲಿದ್ದಾರೆ. ಚಿತ್ರಕ್ಕೆ “ರಾಬರ್ಟ್‌’ ಎಂದು ಟೈಟಲ್‌ ಇಡಲಾಗಿದೆ ಎಂಬ ಸುದ್ದಿಯೂ ಓಡಾಡುತ್ತಿದೆ.

“ಚೌಕ’ ಚಿತ್ರದಲ್ಲಿ ದರ್ಶನ್‌ ಗೆಸ್ಟ್‌ ಅಪಿಯರೆನ್ಸ್‌ ಮಾಡಿದ್ದು, ಅದರಲ್ಲಿ ಅವರ ಪಾತ್ರ ರಾಬರ್ಟ್‌ ಎಂದಿತ್ತು. ಹಾಗಾಗಿ ಅದೇ ಟೈಟಲ್‌ ಇಡಲಾಗಿದೆ ಎಂಬ ಸುದ್ದಿಯೂ ಇದೆ. ಜೊತೆಗೆ “ಕಾಟೇರ’ ಟೈಟಲ್‌ ಕೂಡಾ ಓಡಾಡುತ್ತಿದೆ. ಆದರೆ, ತರುಣ್‌ ಸುಧೀರ್‌ ಮಾತ್ರ ಚಿತ್ರಕ್ಕೆ ಯಾವುದೇ ಟೈಟಲ್‌ ಅಂತಿಮವಾಗಿಲ್ಲ. ಆದರೆ, ಒಂದಷ್ಟು ಶೀರ್ಷಿಕೆಗಳನ್ನ ನೋಂದಣಿ ಮಾಡಿಸಿದ್ದೇವೆ ಎನ್ನುವ ಮೂಲಕ 53ನೇ ಚಿತ್ರದ ಟೈಟಲ್‌ ಚರ್ಚೆಗೆ ತೆರೆ ಎಳೆದಿದ್ದಾರೆ.  

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

sanju weds geetha 2 song shooting

Sanju Weds Geetha 2; ಕಲರ್’ಫುಟ್ ಸೆಟ್ ನಲ್ಲಿ ಸಂಜು ಹಾಡು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.