ಅಂಬಿ ಸಂಭ್ರಮ : ಆಗಸ್ಟ್‌10ಕ್ಕೆ ಹಾಡು ಬಿಡುಗಡೆ


Team Udayavani, Aug 1, 2018, 11:48 AM IST

ambareesh-1-8.jpg

ಎಲ್ಲಾ ಅಂದುಕೊಂಡಂತಾಗಿದ್ದರೆ, ಆಗಸ್ಟ್‌ 10ರಂದು ಅಂಬರೀಶ್‌ ಮತ್ತು ಸುದೀಪ್‌ ಅಭಿನಯದ ‘ಅಂಬಿ ನಿಂಗೆ ವಯಸ್ಸಾಯ್ತೋ’ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಬೇಕಿತ್ತು. ಆದರೆ, ಚಿತ್ರದ ಬಿಡುಗಡೆ ಸ್ವಲ್ಪ ಮುಂದಕ್ಕೆ ಹೋಗಿದ್ದು, ಆಗಸ್ಟ್‌10ರಂದು ಚಿತ್ರದ ಹಾಡುಗಳು ಬಿಡುಗಡೆಯಾಗಲಿದೆ. ಅರಮನೆ ಮೈದಾನದಲ್ಲಿ ಆಯೋಜಿತವಾಗಿರುವ ಈ ಸಮಾರಂಭದ ವಿಶೇಷತೆ ಏನೆಂದರೆ, ಕನ್ನಡ ಚಿತ್ರರಂಗದ ಎಲ್ಲಾ ಟಾಪ್‌ ಸ್ಟಾರ್‌ಗಳು ಭಾಗವಹಿಸುತ್ತಿರುವುದು. ಅಷ್ಟೇ ಅಲ್ಲ, ಈ ಸಮಾರಂಭಕ್ಕೆ ತಮಿಳಿನ ಸೂಪರ್‌ ಸ್ಟಾರ್‌ ರಜನಿಕಾಂತ್‌ ಅವರು ಸಹ ಬರುವ ಸಾಧ್ಯತೆ ಇದೆ. ಈಗಾಗಲೇ ರಜನಿಕಾಂತ್‌ ಅವರಿಗೆ ಆಹ್ವಾನ ನೀಡಲಾಗಿದೆ. ಅವರು ಸಮಾರಂಭಕ್ಕೆ ಬರುತ್ತಾರೋ, ಇಲ್ಲವೋ ಗೊತ್ತಿಲ್ಲ. ಆದರೆ, ಅವರ ಅಳಿಯ ಮತ್ತು ಮೂಲ ಚಿತ್ರವನ್ನು ನಿರ್ದೇಶಿಸಿ, ಅದರಲ್ಲಿ ನಟಿಸಿದ್ದ ಧನುಷ್‌ ಈ ಸಮಾರಂಭಕ್ಕೆ ಖಂಡಿತಾ ಬರುತ್ತಾರಂತೆ.

ಸುದೀಪ್‌ ಈ ಚಿತ್ರದ ನಿಜವಾದ ಬ್ಯಾಕ್‌ ಬೋನ್‌: ಅಂಬರೀಶ್‌
ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನಿಟ್ಟಿದ್ದಾರೆ. ಅದಕ್ಕೆ ಕಾರಣ ಚಿತ್ರ ಮೂಡಿಬಂದಿರುವ ರೀತಿ. ಇತ್ತೀಚೆಗೆ ಅಂಬರೀಶ್‌ ಅವರು ತಮ್ಮ ಪಾತ್ರಕ್ಕೆ ಡಬ್‌ ಮಾಡಿದ್ದು, ಆ ಸಂದರ್ಭದಲ್ಲಿ ಚಿತ್ರ ನೋಡಿ ಖುಷಿಯಾಗಿದ್ದಾರೆ. ಅದರಲ್ಲೂ ಸುದೀಪ್‌ ಅವರ ಬಗ್ಗೆ ಸ್ವಲ್ಪ ಜಾಸ್ತಿಯೇ ಖುಷಿಯಿಂದ ಮಾತನಾಡುತ್ತಾರೆ. ‘ನಾನು ಈ ಚಿತ್ರದಲ್ಲಿ ಬರೀ ನಟನೆ ಮಾಡಿದ್ದೀನಿ. ಆದರೆ, ಸುದೀಪ್‌ ಈ ಚಿತ್ರದ ನಿಜವಾದ ಬ್ಯಾಕ್‌ ಬೋನ್‌. ಇಲ್ಲಿ ನನಗಿಂಥ ಅವನ ಪಾಲು ಜಾಸ್ತಿ ಇದೆ. ತೆರೆಯ ಮೇಲೆ ಅವನು ಕಾಣಿಸಿಕೊಳ್ಳುವುದು ಅರ್ಧ ಗಂಟೆಯಾದರೂ, ತೆರೆಯ ಹಿಂದೆ ಸಾಕಷ್ಟು ಕೆಲಸಗಳನ್ನು ಮಾಡಿದ್ದಾನೆ. ಬಿಡುವಿಲ್ಲದಂತೆ ಓಡಾಡಿದರೂ ಚಿತ್ರದ ಬಗ್ಗೆ ಸಾಕಷ್ಟು ತಲೆ ಕೆಡಿಸಿಕೊಂಡಿದ್ದಾನೆ. ಸಿನಿಮಾ ಬಿಟ್ಟರೆ ಅವನ ಹತ್ತಿರ ಬೇರೆ ವಿಷಯ ಮಾತಾಡೋದು ಕಷ್ಟ. ಅಂತ ಹಾರ್ಡ್‌ ವರ್ಕರ್‌ ಅವನು. ಮೊದಲು ಈ ಚಿತ್ರವನ್ನ ನಾನು ಮಾಡೋದಿಲ್ಲ ಅಂತ ಹೇಳಿದ್ದೆ. ಮೂಲ ಚಿತ್ರ ನೋಡಿ ಖುಷಿ ಆಯ್ತು. ಅಷ್ಟರಲ್ಲಿ ಈ ಸಿನಿಮಾ ನಿರ್ಮಿಸಬೇಕಿದ್ದವರು ಬದಲಾಗಿ, ಕೊನೆಗೆ ಸುದೀಪ್‌ ಈ ಚಿತ್ರವನ್ನು ನಿರ್ಮಿಸೋಕೆ ಮುಂದೆ ಬಂದ. ಬಹಳ ಖುಷಿಯಿಂದ ಈ ಚಿತ್ರದಲ್ಲಿ ನಟಿಸೋಕೆ ಒಪ್ಪಿಕೊಂಡೆ’ ಎನ್ನುತ್ತಾರೆ ಅಂಬರೀಶ್.

ಸಿನಿಮಾ ನೋಡಿ ನನಗೆ ವಯಸ್ಸಾಯ್ತಾ ಅಂತ ಹೇಳಿ:
ಇನ್ನು ನಿರ್ದೇಶಕ ಗುರುದತ್‌ ಗಾಣಿಗ ಅವರ ಬಗ್ಗೆ ಮಾತನಾಡುವ ಅಂಬರೀಶ್‌, ಮೊದಲು ಗುರುದತ್‌ ಅವರನ್ನು ನೋಡಿದಾಗ ನಕ್ಕಿದ್ದರಂತೆ. ‘ಆ ಹುಡುಗ ಏನು ಮಾಡಬಹುದು ಎಂಬ ಕುತೂಹಲವಿತ್ತು. ಆದರೆ, ಕೆಲವು ಮಹತ್ವದ ದೃಶ್ಯಗಳನ್ನ ಬಹಳ ಚೆನ್ನಾಗಿ ಚಿತ್ರೀಕರಣ ಮಾಡಿದ್ದಾನೆ. ಯಾರದೋ ದೇಹ, ಗಾತ್ರ ನೋಡಿ ಅವರನ್ನು ಅಳಿಯಬಾರದು. ಅದಕ್ಕೆ ಒಳ್ಳೆಯ ಉದಾಹರಣೆ ನಾನೇ. 500 ರೂಪಾಯಿಗೆ ವಿಲನ್‌ ಪಾತ್ರ ಮಾಡೋಕೆ ಬಂದ ನಾನು, ನಂತರದ ವರ್ಷಗಳಲ್ಲಿ ಪೋಷಕ ಪಾತ್ರ ಮಾಡಿ, ನಾಯಕನಾಗಿ, ಜನನಾಯಕನಾಗಲಿಲ್ಲವಾ? ಅದೇ ತರಹ ಈ ಚಿತ್ರದ ಪಾತ್ರವೂ ಇದೆ. ತಲೆಗೂದಲು ಬೆಳ್ಳಗಾದ ಮಾತ್ರಕ್ಕೆ ಅವನಿಗೆ ವಯಸ್ಸಾಯ್ತು ಅಂತ ತೀರ್ಮಾನಕ್ಕೆ ಬರುವುದು ತಪ್ಪಾಗುತ್ತದೆ. ಸಿನಿಮಾ ನೋಡಿ, ನನಗೆ ನಿಜಕ್ಕೂ ವಯಸ್ಸಾಯ್ತಾ? ಅಂತ ನೀವೇ ಹೇಳಿ’ ಎನ್ನುತ್ತಾರೆ ಅಂಬರೀಶ್‌.

ಟಾಪ್ ನ್ಯೂಸ್

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.