ಸೆಪ್ಟೆಂಬರ್‌ನಲ್ಲಿ ಡಾ. ವಿಷ್ಣುವರ್ಧನ್‌ ರಾಷ್ಟ್ರೀಯ ಉತ್ಸವ


Team Udayavani, Aug 1, 2018, 6:36 PM IST

veerappa-nayaka.jpg

ಡಾ. ವಿಷ್ಣು ಸೇನಾ ಸಮಿತಿಯವರು ಕಳೆದ ವರ್ಷ ನವದೆಹಲಿಯಲ್ಲಿ ಡಾ. ವಿಷ್ಣುವರ್ಧನ್‌ ರಾಷ್ಟ್ರೀಯ ಉತ್ಸವವನ್ನು ಆಯೋಜಿಸಿದ್ದು ನೆನಪಿರಬಹುದು. ಈ ಉತ್ಸವವನ್ನು ಮುಂದುವರೆಸಿಕೊಂಡು ಹೋಗಲು ಸಮಿತಿ ನಿರ್ಧರಿಸಿದ್ದು, ಈ ಬಾರಿ ಸೆಪ್ಟೆಂಬರ್‌ನಲ್ಲಿ ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಉತ್ಸವವನ್ನು ಆಯೋಜಿಸಲು ಉದ್ದೇಶಿಸಿದೆ.

ಈ ವರ್ಷದ ಡಾ. ವಿಷ್ಣುವರ್ಧನ ರಾಷ್ಟ್ರೀಯ ಉತ್ಸವವು ಸೆಪ್ಟೆಂಬರ್‌ 16, 17 ಮತ್ತು 18ರಂದು ಕೆ.ಆರ್‌. ರಸ್ತೆಯ ಕುವೆಂಪು ಕಲಾಕ್ಷೇತ್ರದಲ್ಲಿ ನಡೆಯಲಿದೆ. ಸೆಪ್ಟೆಂಬರ್‌ 16ರಂದು ಕಾರ್ಯಕ್ರಮದ ಉದ್ಘಾಟನೆ ನಡೆಯಲಿದ್ದು, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಿಂದ ಕುವೆಂಪು ಕಲಾಕ್ಷೇತ್ರದವರೆಗೆ ಬೃಹತ್‌ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಈ ಮೆರವಣಿಗೆಯಲ್ಲಿ ಜಾನಪದ ಕಲಾತಂಡಗಳು, ಸಿನಿಮಾ ಕಲಾವಿದರು ಮತ್ತು 10 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಭಾಗವಹಿಸಲಿದ್ದಾರೆ. ಈ ಉದ್ಘಾಟನ ಸಮಾರಂಭವನ್ನು ಖ್ಯಾತ ಸಾಹಿತಿಗಳು ಮತ್ತು ಮಠಾಧೀಶರು ಉದ್ಘಾಟಿಸಲಿದ್ದು, ಅಂದು ವಿಷ್ಣುವರ್ಧನ್‌ ಅವರನ್ನು ಕುರಿತ ಮೂರು ಪುಸ್ತಕಗಳು ಬಿಡುಗಡೆಯಾಗಲಿವೆ.

ವಿಶೇಷವೆಂದರೆ, ಈ ಬಾರಿ “ವೀರಪ್ಪನಾಯ್ಕ’ ಚಿತ್ರದಲ್ಲಿ ವಿಷ್ಣುವರ್ಧನ್‌ ಅವರ ಗೆಟಪ್‌ನ ಪುತ್ಥಳಿಯನ್ನು ಅನಾವರಣ ಮಾಡಲಾಗುತ್ತಿದೆ. ಅದಲ್ಲದೆ ಡಾ. ವಿಷ್ಣು ಅವರ ಬದುಕು ಮತ್ತು ಸಾಧನೆಗಳನ್ನು ಚಿತ್ರಗಳಲ್ಲಿ ಕಟ್ಟಿಕೊಡುವ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಿ, ವಿಜೇತರಿಗೆ ಬಹುಮಾನವ ವಿತರಿಸಲಾಗುವುದು. ಜೊತೆಗೆ ಡಾ. ವಿಷ್ಣುವರ್ಧನ್‌ ಅವರ ಛಾಯಾಚಿತ್ರ ಪ್ರದಶಘನವನ್ನು ಹಮ್ಮಿಕೊಳ್ಳುವುದರ ಜೊತೆಗೆ ಡಾ. ವಿಷ್ಣು ಅವರೊಂದಿಗೆ ನಟಿಸಿದ ನಟಿಯರು ಮತ್ತು ಯುವ ನಟರನ್ನೊಳಗೊಂಡ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ. 

ಇದೆಲ್ಲದರ ಜೊತೆಗೆ ಪ್ರತಿ ದಿನವೂ ಸಂಜೆಗೆ ಡಾ. ವಿಷ್ಣು ಗೀತೆಗಳ ಸಂಗೀತ ಸಂಜೆಯನ್ನು ಹಮ್ಮಿಕೊಳ್ಳಲಾಗಿದ್ದು, ಮೊದಲನೇ ದಿನ ವಿಷ್ಣು ಅವರ ಯುಗಳ ಗೀತೆಗಳು, ಎರಡನೇ ದಿನ ಕನ್ನಡಪರ ಗೀತೆಗಳು ಮತ್ತು ಮೂರನೇ ದಿನ ವಿಷ್ಣು ಅಭಿಮಾನದ ಗೀತೆಗಳನ್ನು ಪ್ರಸ್ತುತಪಡಿಸಲಾಗುವುದು. ಈ ಸಮಾರಂಭದಲ್ಲಿ 25 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದ್ದು, ಅಮೇರಿಕಾ, ದುಬೈ ಮತ್ತು ಆಸ್ಟ್ರೇಲಿಯಾದಿಂದ ಅಭಿಮಾನಿಗಳು ಈ ಉತ್ಸವದಲ್ಲಿ ಭಾಗವಹಿಸುವ ಸಾಧ್ಯತೆ ಇದೆ.

ಡಾ. ವಿಷ್ಣುವರ್ಧನ ರಾಷ್ಟ್ರೀಯ ಉತ್ಸವದ ಉತ್ಸವ ಗೀತೆಗೆ ಕೆ. ಕಲ್ಯಾಣ ಅವರು ಸಾಹಿತ್ಯ ಮತ್ತು ಸಂಗೀತವನ್ನು ನೀಡುತ್ತಿದ್ದು, ಭಾರತೀ ವಿಷ್ಣುವರ್ಧನ್‌ ಅವರ ಹುಟ್ಟುಹಬ್ಬವಾದ ಆಗಸ್ಟ್‌ 15ರಂದು ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

vasishta simha’s VIP movie

Vasishta Simha: ಫ‌ಸ್ಟ್‌ಲುಕ್‌ ನಲ್ಲಿ ‘ವಿಐಪಿ’ ಎಂಟ್ರಿ

MariGold: ಸಿನಿಮಾ ನೋಡಿ ನನ್ನ ಬೆನ್ನು ನಾನೇ ತಟ್ಟಿಕೊಂಡೆ…; ದಿಗಂತ್‌

MariGold ಸಿನಿಮಾ ನೋಡಿ ನನ್ನ ಬೆನ್ನು ನಾನೇ ತಟ್ಟಿಕೊಂಡೆ…; ದಿಗಂತ್‌

Ramya: ಉತ್ತರಕಾಂಡದಿಂದ ಹೊರನಡೆದ ರಮ್ಯಾ

Ramya: ಉತ್ತರಕಾಂಡದಿಂದ ಹೊರನಡೆದ ರಮ್ಯಾ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.