ರಿಮೇಕ್‌ ಮಾಡೋಕೆ ಕಾರಣ ಕಥೆ


Team Udayavani, Aug 2, 2018, 11:50 AM IST

kavacha.jpg

ಇದೇ ಮೊದಲ ಸಲ ಅಂಧ ಪಾತ್ರದಲ್ಲಿ ಕಾಣಿಸಿಕೊಂಡಿರುವ ಶಿವರಾಜಕುಮಾರ್‌ ಅಭಿನಯದ “ಕವಚ’ ಚಿತ್ರೀಕರಣ ಮುಗಿದಿದೆ. ನೂರು ಪ್ಲಸ್‌ ಚಿತ್ರಗಳ ಬಳಿಕ “ಕವಚ’ದ ಕಥೆ ಮತ್ತು ಪಾತ್ರ ಮೆಚ್ಚಿಕೊಂಡು ನಟಿಸಿರುವ ಶಿವರಾಜಕುಮಾರ್‌ ಅವರಿಗೆ ಅದೊಂದು ಹೊಸ ಅನುಭವ ಕಟ್ಟಿಕೊಟ್ಟಿದೆಯಂತೆ.

ತಮ್ಮ ಅಂಧ ಪಾತ್ರ ಕುರಿತು ಶಿವರಾಜಕುಮಾರ್‌ ಸಾಕಷ್ಟು ಮೆಚ್ಚಿಕೊಂಡಿದ್ದಾರೆ. “ಎಂಟು ತಿಂಗಳು ಹೇಗೆ ಕಳೆದೋಯ್ತು ಅನ್ನೋದು ಅವರಿಗೇ ಗೊತ್ತಾಗಿಲ್ಲವಂತೆ. ಅವರೊಂದಿಗೆ ದೊಡ್ಡ ತಂಡವೇ ಕಾಣಿಸಿಕೊಂಡಿದೆ. ಈ ಹಿಂದೆ ಶಿವರಾಜಕುಮಾರ್‌ ಅವರು ರೀಮೇಕ್‌ ಮಾಡೋದಿಲ್ಲ ಎಂದು ಹೇಳಿದ್ದರು.

ಆದರೆ, “ಕವಚ’ ಚಿತ್ರ ನೋಡಿದ ಮೇಲೆ ಮಾಡಲೇಬೇಕೆನಿಸಿ, ಮಾಡಿದ್ದಾರೆ. ಅದರಲ್ಲೂ ಕಾಡಿದ ಕಥೆ, ಮೋಹನ್‌ಲಾಲ್‌ ಅವರು ನಿರ್ವಹಿಸಿದ ಪಾತ್ರ ಕಂಡು ಮಾಡಲು ನಿರ್ಧರಿಸಿ, “ಕವಚ’ದಲ್ಲಿ ಕಾಣಿಸಿಕೊಂಡಿದ್ದಾರೆ. ಅವರೇ ಹೇಳುವಂತೆ, “ಮೊದಲು ಭಯವಿತ್ತು. ಯಾಕೆಂದರೆ, ಅಂಧನ ಪಾತ್ರ ಅದುವರೆಗೂ ಮಾಡಿಯೇ ಇಲ್ಲ.

ಅದಕ್ಕಾಗಿ ಯಾವುದೇ ತಯಾರಿಯನ್ನೂ ಮಾಡಿಕೊಂಡಿರಲಿಲ್ಲ. ಬ್ಲೆ„ಂಡ್‌ ಆಗಿಯೇ ಸೆಟ್‌ಗೆ ಹೋದೆ. ಅದಕ್ಕೂ ಮುನ್ನ ಚಿತ್ರ ನೋಡಿದ್ದೆ. ಸೆಟ್‌ನಲ್ಲಿ ಒಬ್ಬರು ಒಂದಷ್ಟು ಹೇಳಿಕೊಟ್ಟರು. ಅದನ್ನೇ ಮಾಡುತ್ತಾ ಹೋದೆ. ಅಂಧರು ಅಂದಾಕ್ಷಣ, ಎಲ್ಲರೂ ಒಂದೇ ರೀತಿ ಇರಲ್ಲ. ಇಲ್ಲಿ ಸಾಗರ ಎಂಬ ಊರಿನ ಬಗ್ಗೆ ಅವನಿಗೆ ಎಲ್ಲವೂ ಗೊತ್ತಿರುತ್ತೆ.

ಹಾಗಾಗಿ, ಎಲ್ಲೆಂದರಲ್ಲಿ, ಹೇಗೆಂದರೆ ಹಾಗೆ ವೇಗವಾಗಿ ಅವನ ಪಾಡಿಗೆ ಅವನು ನಡೆದಾಡುತ್ತಿರುತ್ತಾನೆ. ಇನ್ನು, ಆ ಪಾತ್ರ ನಗುವುದು, ಅಳುವುದು ಓವರ್‌ ಆಗುತ್ತಾ ಎಂಬ ಪ್ರಶ್ನೆ ಇತ್ತು. ಮಾನಿಟರ್‌ ನೋಡಿ, ನೋಡಿ ನೈಜತೆ ಕಟ್ಟಿಕೊಡುವ ಉದ್ದೇಶದಿಂದ ಪಾತ್ರ ನಿರ್ವಹಿಸುತ್ತಿದ್ದೆ. ಇನ್ನು, ಕಣ್ಣುಗಳನ್ನು ಒಂದೇ ಸಮನೆ ಮೇಲೆ ಮಾಡಿಕೊಳ್ಳಬೇಕಿತ್ತು. ಅದರಿಂದ ತುಂಬಾ ತಲೆನೋವಾಗುತ್ತಿತ್ತು.

ಎಷ್ಟೋ ಸಲ, ಕಿರಿಕಿರಿಯಾಗಿ, ಜಗಳ ಆಡಿದ್ದುಂಟು. ಆ ಸಮಯದಲ್ಲಿ ಎಲ್ಲರೂ ನನ್ನನ್ನು ಬೈದುಕೊಂಡಿರಬಹುದೇನೋ? ಆದರೆ, ಅದು ಸಿಟ್ಟಿನಿಂದ ಆಡಿದ್ದಲ್ಲ, ಪ್ರೀತಿಯಿಂದ ಮಾಡಿದ ಜಗಳ’ ಎಂಬುದು ಶಿವರಾಜಕುಮಾರ್‌ ಮಾತು. ಹೊಸ ವರ್ಷ ಬಂದಾಗ ಎಲ್ಲರೂ ಒಂದೊಂದು ನಿರ್ಣಯ ತೆಗೆದುಕೊಳ್ಳುತ್ತಾರೆ. ಸಿಗರೇಟ್‌, ಕುಡಿತ ಹೀಗೆ ಒಂದೊಂದು ಅಭ್ಯಾಸ ಬಿಡುವ ನಿರ್ಣಯಗಳು.

ನಾನೂ ಕೂಡ ಹೊಸ ವರ್ಷದಲ್ಲೊಂದು ನಿರ್ಣಯ ತೆಗೆದುಕೊಳ್ತೀನಿ. ಅದು ಕೋಪ ಕಮ್ಮಿ ಮಾಡಿಕೊಳ್ಳುವ ನಿರ್ಣಯ. ಸೆಟ್‌ನಲ್ಲಿ ಕೋಪಿಸಿಕೊಂಡಿದ್ದಕ್ಕೆ ಕ್ಷಮೆ ಕೇಳಿದ್ದೇನೆ’ ಅಂತ ಹೇಳುವ ಅವರು, ಇಲ್ಲಿ ಸಾಕಷ್ಟು ಎಮೋಷನ್ಸ್‌ ಇದೆ. ಆ್ಯಕ್ಷನ್‌ ಇದೆಯಾದರೂ, ಆ ಪಾತ್ರ ಶಬ್ಧ ಮತ್ತು ವಾಸನೆ ಗ್ರಹಿಸಿ ಹೊಡೆದಾಡುತ್ತೆ’ ಎಂದು ತಮ್ಮ ಪಾತ್ರ ಕುರಿತು ವಿವರ ಕೊಡುತ್ತಾರೆ ಶಿವರಾಜಕುಮಾರ್‌.

ಅಂದಹಾಗೆ, ಸಾಗರ ಬೆಂಗಳೂರು, ಮೈಸೂರು, ಮಡಿಕೇರಿ, ಊಟಿ ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಚಿತ್ರದಲ್ಲಿ ಇಷಾ ಕೊಪ್ಪೀಕರ್‌, ವಸಿಷ್ಠ ಸಿಂಹ, ರಾಜೇಶ್‌ ನಟರಂಗ, ತಬಲಾನಾಣಿ, ಮೀನಾಕ್ಷಿ, ಕೃತಿಕಾ ಇತರರು ನಟಿಸಿದ್ದಾರೆ. ಅರ್ಜುನ್‌ ಜನ್ಯ ಸಂಗೀತವಿದೆ.

ಶೇಷಾದ್ರಿ ಜೊತೆ ಸಿನಿಮಾ ಸಾಧ್ಯತೆ
ಶಿವರಾಜಕುಮಾರ್‌ ಅವರೀಗ “ಕವಚ’ ಮುಗಿಸಿದ್ದಾರೆ. ಅವರ ಕೈಯಲ್ಲೀಗ “ರುಸ್ತುಂ’ ಮತ್ತು “ದ್ರೋಣ’ ಚಿತ್ರಗಳಿವೆ. ಈ ಮಧ್ಯೆ ಮೂರು ಕತೆಗಳನ್ನು ಕೇಳಿದ್ದಾರೆ. ಆ ಪೈಕಿ ಪಿ.ಶೇಷಾದ್ರಿ ಅವರ ಕಥೆಯೂ ಸೇರಿದೆ. ಶೇಷಾದ್ರಿ ಅವರು ಹೇಳಿದ ಒನ್‌ಲೈನ್‌ ಚೆನ್ನಾಗಿದ್ದು, ಆ ಬಗ್ಗೆ ಮಾತುಕತೆ ನಡೆಯುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಶಿವರಾಜಕುಮಾರ್‌ ಮುಂದಿನ ಚಿತ್ರ ಪಿ.ಶೇಷಾದ್ರಿ ಅವರ ಜೊತೆ ಮಾಡುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.