ನಾವಿಬ್ಬರು ಚೆನ್ನಾಗಿದ್ದೇವೆ: ರಕ್ಷಿತ್‌ ಶೆಟ್ಟಿ


Team Udayavani, Aug 3, 2018, 10:00 PM IST

rakshit.jpg

ರಕ್ಷಿತ್‌ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಅವರ ಸಂಬಂಧದಲ್ಲಿ ಬಿರುಕು ಮೂಡಿದೆ, ಸದ್ಯದಲ್ಲೇ ರಶ್ಮಿಕಾ, ರಕ್ಷಿತ್‌ ಜೊತೆಗಿನ ಸಂಬಂಧ ಕಡಿದುಕೊಳ್ಳಲಿದ್ದಾರೆ, ಅವರಿಗೆ ತೆಲುಗು ಚಿತ್ರರಂಗದಲ್ಲಿ ಗಟ್ಟಿನೆಲೆಯೂರುವ ಆಸೆ ಇದೆ. ಬೇಗನೇ ಮದುವೆಯಾದರೆ ಚಿತ್ರರಂಗದಲ್ಲಿ ಬಿಝಿಯಾಗಿರಲು ಸಾಧ್ಯವಿಲ್ಲ. ಈ ಕಾರಣದಿಂದ ರಶ್ಮಿಕಾ, ರಕ್ಷಿತ್‌ ಶೆಟ್ಟಿ ಜೊತೆಗಿನ ನಿಶ್ಚಿತಾರ್ಥವನ್ನು ಮುರಿದು, ತೆಲುಗು ಚಿತ್ರರಂಗದಲ್ಲಿ ತೊಡಗಿಸಿಕೊಳ್ಳಲಿದ್ದಾರೆ – ಈ ತರಹದ ಸುದ್ದಿಯೊಂದು ಕೆಲವು ವೆಬ್‌ಸೈಟ್‌ಗಳಲ್ಲಿ ಓಡಾಡುತ್ತಿದೆ.

ತೆಲುಗಿನಲ್ಲಿ ಬಿಝಿಯಾಗುತ್ತಿರುವ ರಶ್ಮಿಕಾಗೆ, ತೆಲುಗು ಚಿತ್ರರಂಗದಲ್ಲೇ ಮುಂದುವರೆಯುವ ಆಸೆ ಇರುವುದರಿಂದ ರಕ್ಷಿತ್‌ ಜೊತೆಗಿನ ನಿಶ್ಚಿತಾರ್ಥವನ್ನು ಮುರಿದುಕೊಳ್ಳಲಿದ್ದಾರೆಂದು ಕೆಲವು ತೆಲುಗು ಮಾಧ್ಯಮಗಳಲ್ಲಿ ಸುದ್ದಿಯಾಗಿದೆ. ಆದರೆ, ಈ ಬಗ್ಗೆ ರಕ್ಷಿತ್‌ ಶೆಟ್ಟಿಯವರನ್ನು ಕೇಳಿದರೆ, “ಈ ತರಹ ಯಾಕೆ ಸುದ್ದಿಯಾಗುತ್ತಿದೆಯೋ ನನಗೂ ಗೊತ್ತಿಲ್ಲ’ ಎನ್ನುತ್ತಾರೆ. 

“ನಾವಿಬ್ಬರು ತುಂಬಾ ಚೆನ್ನಾಗಿದ್ದೇವೆ. ಆದರೆ, ಈ ತರಹದ ಸುಳ್ಳು ಸುದ್ದಿಗಳನ್ನು ಯಾರು ಹಬ್ಬಿಸುತ್ತಿದ್ದಾರೋ ಗೊತ್ತಿಲ್ಲ. ಇದರ ಹಿಂದಿನ ಉದ್ದೇಶವೇನೆಂಬುದು ನನಗೆ ಅರ್ಥವಾಗುತ್ತಿಲ್ಲ. ಸಿನಿಮಾ ಪ್ರಚಾರಕ್ಕಾಗಿ ಈ ತರಹ ಮಾಡುತ್ತಿದ್ದಾರೋ ಅಥವಾ ದೂರದಿಂದ ಮಜಾ ತೆಗೆದುಕೊಳ್ಳುತ್ತಿದ್ದಾರೋ … ನಾವಂತೂ ಚೆನ್ನಾಗಿದ್ದೇವೆ.

ನಾವಿಬ್ಬರು ಎಷ್ಟೇ ಬಿಝಿ ಇದ್ದರೂ ವಾರಕ್ಕೊಂದು ಬಾರಿಯಾದರೂ ಭೇಟಿಯಾಗುತ್ತೇವೆ. ರಶ್ಮಿಕಾ ಕೂಡಾ ತೆಲುಗು ಸಿನಿಮಾ ಚಿತ್ರೀಕರಣದಲ್ಲಿ ಬಿಝಿಯಾಗಿದ್ದರೂ ನನ್ನನ್ನು ನೋಡಲೆಂದೇ ಅಲ್ಲಿಂದ ಬರುತ್ತಾಳೆ. ಹೀಗಿರುವಾಗ ನಾವು ದೂರವಾಗುವ ಮಾತೆಲ್ಲಿ’ ಎನ್ನುವುದು ರಕ್ಷಿತ್‌ ಶೆಟ್ಟಿ ಮಾತು. ಇನ್ನು, ರಶ್ಮಿಕಾ ಮಂದಣ್ಣ ಹಾಗೂ ವಿಜಯ್‌ ದೇವರಕೊಂಡ ನಟಿಸಿರುವ ತೆಲುಗು ಚಿತ್ರ “ಗೀತಾ ಗೋವಿಂದಂ’ ಆಗಸ್ಟ್‌ 15 ರಂದು ತೆರೆಕಾಣುತ್ತಿದೆ.

ಸಿನಿಮಾ ಪ್ರಚಾರಕ್ಕಾಗಿ ಈ ತರಹದ ಯಾರಾದರೂ ಈ ತರಹದ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೋ ಎಂಬ ಸಂದೇಹ ಕೂಡಾ ರಕ್ಷಿತ್‌ಗಿದೆ. “ಯಾರು ಏನೇ ಅಂದರೂ ನಾವಿಬ್ಬರು ಚೆನ್ನಾಗಿದ್ದೇವೆ. ಮದುವೆಯಾಗುವವರೆಗೆ ಈ ತರಹದ ಸುದ್ದಿಗಳು ಬರುತ್ತಲೇ ಇರುತ್ತದೆ’ ಎನ್ನುತ್ತಾರೆ ರಕ್ಷಿತ್‌. ಸದ್ಯ ರಕ್ಷಿತ್‌ “ಅವನೇ ಶ್ರೀಮನ್ನಾರಾಯಣ’ ಹಾಗೂ “777 ಚಾರ್ಲಿ’ ಸಿನಿಮಾದಲ್ಲಿ ಬಿಝಿಯಾಗಿದ್ದು, ಸದ್ಯ “ಅವನೇ ಶ್ರೀಮನ್ನಾರಾಯಣ’ ಚಿತ್ರೀಕರಣ ನಡೆಯುತ್ತಿದೆ. 

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.