ಕೆಜಿಎಫ್‍ಗೆ ತಮನ್ನಾ


Team Udayavani, Aug 6, 2018, 5:59 PM IST

kgf.jpg

“ಕೆಜಿಎಫ್’ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ತಿಗೊಂಡು, ಇನ್ನೊಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿ ಇದೆ. ಅದೂ ಮುಗಿದು ಬಿಟ್ಟರೆ, ಚಿತ್ರೀಕರಣ ಸಂಪೂರ್ಣವಾದಂತೆ. ಆದರೆ, ಆ ಹಾಡಿಗೆ ಯಾರನ್ನು ಕರೆತರಬೇಕು, ಯಾರಿಂದ ಕುಣಿಸಬೇಕು ಎಂದು ಚಿತ್ರತಂಡ ತಲೆ ಕೆಡಿಸಿಕೊಂಡಿತ್ತು. ಈಗ ಆ ಗೊಂದಲ ಬಗೆಹರಿದಿದ್ದು, ಯಶ್‌ ಜೊತೆಗೆ ಹೆಜ್ಜೆ ಹಾಕುವುದಕ್ಕೆ ಟಾಲಿವುಡ್‌ ನಟಿ ತಮನ್ನಾ ಭಾಟಿಯಾ ಬರುತ್ತಿದ್ದಾರೆ.

ಹೌದು, “ಕೆಜಿಎಫ್’ ಚಿತ್ರದಲ್ಲಿ ರೆಟ್ರೋ ಹಾಡಿನ ಚಿತ್ರೀಕರಣ ಬಾಕಿ ಇದ್ದು, ಆ ಹಾಡಿನಲ್ಲಿ ಯಾರು ಕಾಣಿಸಿಕೊಳ್ಳುತ್ತಾರೆ ಎಂಬ ಕುತೂಹಲ ಎಲ್ಲರಿಗೂ ಇತ್ತು. ಅದಕ್ಕೆ ಸರಿಯಾಗಿ ನಾಲ್ವರು ಜನಪ್ರಿಯ ನಟಿಯರ ಹೆಸರು ಕೇಳಿ ಬಂದಿತ್ತು. ತಮನ್ನಾ ಭಾಟಿಯಾ ಜೊತೆಗೆ ಕಾಜಲ್‌ ಅಗರ್ವಾಲ್‌, ಲಕ್ಷ್ಮೀ ರೈ ಮತ್ತು ನೂರಾ ಫ‌ತೇಹಿ ಹೆಸರು ಕೇಳಿಬಂದಿತ್ತು. ಈ ನಾಲ್ವರಲ್ಲಿ ತಮನ್ನಾ ಭಾಟಿಯಾ ಫೈನಲ್‌ ಆಗಿದ್ದು, ಸದ್ಯದಲ್ಲೇ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.

ಬೆಂಗಳೂರಿನಲ್ಲಿ ಇದೇ ವಾರ ಈ ಹಾಡಿನ ಚಿತ್ರೀಕರಣ ನಡೆಯಲಿದ್ದು, ಮೂರು ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಈ ಹಾಡಿಗೆಂದೇ ವಿಶೇಷವಾದ ಸೆಟ್‌ ನಿರ್ಮಿಸಲಾಗುತ್ತಿದ್ದು, ಜಾನಿ ಮಾಸ್ಟರ್‌ ನೃತ್ಯ ನಿರ್ದೇಶನ ಮಾಡುತ್ತಿದ್ದಾರೆ. ಅಂದಹಾಗೆ, “ಪರೋಪಕಾರಿ’ ಚಿತ್ರಕ್ಕೆ ಎಲ್‌.ಆರ್‌. ಈಶ್ವರಿ ಅವರು ಹಾಡಿದ “ಜೋಕೆ ನಾನು ಬಳ್ಳಿಯ ಮಿಂಚು, ಕಣ್ಣು ಕತ್ತಿಯ ಅಂಚು …’ ಹಾಡನ್ನು ಈ ಚಿತ್ರಕ್ಕಾಗಿ ರೀಮಿಕ್ಸ್‌ ಮಾಡಲಾಗುತ್ತಿದ್ದು, ಆ ಹಾಡಿಗೆ ತಮನ್ನಾ ಹೆಜ್ಜೆ ಹಾಕುತ್ತಿದ್ದಾರೆ.

ತಮನ್ನಾ ಕನ್ನಡದಲ್ಲಿ ಕಾಣಿಸಿಕೊಳ್ಳುತ್ತಿರುವುದು ಇದು ಮೊದಲೇನಲ್ಲ. ಇದಕ್ಕೂ ಮುನ್ನ ನಿಖಿಲ್‌ ಕುಮಾರ್‌ ಅಭಿನಯದ “ಜಾಗ್ವಾರ್‌’ ಚಿತ್ರದ ಐಟಂ ಡ್ಯಾನ್ಸ್‌ವೊಂದರಲ್ಲೂ ಕಾಣಿಸಿಕೊಂಡಿದ್ದರು. ಈಗ ಎರಡನೆಯ ಬಾರಿಗೆ ಕನ್ನಡ ಚಿತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. “ಕೆಜಿಎಫ್’ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಸಹ ಬಹುತೇಕ ಮುಗಿದಿದ್ದು, ಸೆಪ್ಟೆಂಬರ್‌ ಕೊನೆಯ ಹೊತ್ತಿಗೆ ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಯೋಚಿಸುತ್ತಿದೆ.

“ಕೆಜಿಎಫ್’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡುತ್ತಿದ್ದಾರೆ ಪ್ರಶಾಂತ್‌ ನೀಲ್‌. ಯಶ್‌ ಜೊತೆಗೆ ಶ್ರೀನಿಧಿ ಶೆಟ್ಟಿ ನಾಯಕಿಯಾಗಿ ನಟಿಸುತ್ತಿದ್ದು, ಮಿಕ್ಕಂತೆ ಅಚ್ಯುತ್‌ ಕುಮಾರ್‌, ವಸಿಷ್ಠ ಸಿಂಹ ಮುಂತಾದವರು ನಟಿಸುತ್ತಿದ್ದಾರೆ. ರವಿ  ಬಸ್ರೂರು ಸಂಗೀತ ಮತ್ತು ಭುವನ್‌ ಗೌಡ ಛಾಯಾಗ್ರಹಣವಿರುವ ಈ ಚಿತ್ರವನ್ನು ಹೊಂಬಾಳೆ ಪ್ರೊಡಕ್ಷನ್ಸ್‌ನಡಿ ವಿಜಯ್‌ಕುಮಾರ್‌ ಕಿರಗಂದೂರು ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.