“ಕುರುಕ್ಷೇತ್ರ’ ಚಿತ್ರವೇ ಮೊದಲು ಬಿಡುಗಡೆಯಾಗಬೇಕು: ನಿಖೀಲ್‌


Team Udayavani, Aug 9, 2018, 7:46 PM IST

x-18.jpg

“ಸೀತಾರಾಮ ಕಲ್ಯಾಣ’ ಚಿತ್ರ ಬಿಡುಗಡೆಗೂ ಮುನ್ನ “ಕುರುಕ್ಷೇತ್ರ’ ಮಾಡಬಾರದು ಎಂದು ಹೇಳಿಲ್ಲ ಮತ್ತು “ಕುರುಕ್ಷೇತ್ರ’ ಚಿತ್ರದ ಬಿಡುಗಡೆ ತಡವಾಗುತ್ತಿರುವುದಕ್ಕೆ ತಾವು ಕಾರಣರಲ್ಲ ಎಂದು ನಿಖೀಲ್‌ ಕುಮಾರ್‌ ಹೇಳಿದ್ದಾರೆ.

ದರ್ಶನ್‌ ಅಭಿನಯದ 50ನೇ ಚಿತ್ರವಾದ “ಕುರುಕ್ಷೇತ್ರ’ದಲ್ಲಿ ನಿಖೀಲ್‌ ಅಭಿಮನ್ಯುವಾಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರದ ಬಹುತೇಕ ಕೆಲಸಗಳು ಮುಗಿದಿದೆ. ಆದರೆ, ನಿಖೀಲ್‌ ಡಬ್ಬಿಂಗ್‌ ಮಾತ್ರ ಇನ್ನೂ ಮುಗಿದಿಲ್ಲ. “ಸೀತಾರಾಮ ಕಲ್ಯಾಣ’ ಚಿತ್ರವು ಮೊದಲು ಬಿಡುಗಡೆಯಾಗಲೀ ಎಂಬ ಕಾರಣಕ್ಕೆ, ನಿಖೀಲ್‌ ಡಬ್ಬಿಂಗ್‌ ಮಾಡದೆ ಚಿತ್ರವನ್ನು ವಿಳಂಬ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಅಕ್ಟೋಬರ್‌ನಲ್ಲಿ “ಸೀತಾರಾಮ ಕಲ್ಯಾಣ’ ಬಿಡುಗಡೆಯಾದ ನಂತರ ನಿಖೀಲ್‌ ಕುಮಾರ್‌, “ಕುರುಕ್ಷೇತ್ರ’ ಚಿತ್ರದಲ್ಲಿನ ತಮ್ಮ ಕೆಲಸವನ್ನು ಮುಗಿಸಿಕೊಡುವುದಕ್ಕೆ ಯೋಚಿಸುತ್ತಿದ್ದಾರೆ ಎಂಬ ಸುದ್ದಿಗಳು ಕೇಳಿ ಬರುತ್ತಿದೆ.

“ಸೀತಾರಾಮ ಕಲ್ಯಾಣ’ ಚಿತ್ರದ ಪತ್ರಿಕಾಗೋಷ್ಠಿಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಅವೆಲ್ಲಾ ಸುಳ್ಳು ಸುದ್ದಿಗಳು. ಅವರ ಚಿತ್ರವೇ ಮೊದಲು ಬಿಡುಗಡೆಯಾಗಲಿ. ಅದಾದ ನಂತರ ನಾವು “ಸೀತಾರಾಮ ಕಲ್ಯಾಣ’ ಚಿತ್ರವನ್ನು ಬಿಡುಗಡೆ ಮಾಡುತ್ತೇವೆ. ನಾವೆಲ್ಲರೂ ಚೆನ್ನಾಗಿಯೇ ಇದ್ದೇವೆ. ಚಿತ್ರಕ್ಕೆ ನಾನಿನ್ನೂ ಡಬ್ಬಿಂಗ್‌ ಮಾಡಿಲ್ಲ. “ಸೀತಾರಾಮ ಕಲ್ಯಾಣ’ ಚಿತ್ರದಲ್ಲಿ ತೊಡಗಿಸಿಕೊಂಡಿದ್ದರಿಂದ ಆಗಲಿಲ್ಲ. ಅವರು ಯಾವಾಗ ಕರೆದರೂ ಹೋಗಿ ಡಬ್ಬಿಂಗ್‌ ಮಾಡಿ ಬರುತ್ತೇನೆ. ಒಂದೆರೆಡು ದಿನಗಳ ಕೆಲಸ ಇದೆ ಅಷ್ಟೇ. ನನ್ನಿಂದ ಯಾವತ್ತೂ ನಿರ್ಮಾಪಕರಿಗೆ ತೊಂದರೆ ಆಗಿಲ್ಲ. ಅವರು ಯಾವಾಗ ಕರೆದರೂ ನಾನು ರೆಡಿ’ ಎನ್ನುತ್ತಾರೆ ನಿಖೀಲ್‌.

ಇನ್ನು ಚಿತ್ರದಲ್ಲಿ ನಿಖೀಲ್‌ ಅವರ ಪಾತ್ರ ಸ್ವಲ್ಪ ದೊಡ್ಡದಾಯಿತು ಎಂದು ದರ್ಶನ್‌ ಬೇಸರಿಸಿಕೊಂಡಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆಯಲ್ಲಾ ಎಂಬ ಪ್ರಶ್ನೆಗೆ, “ಅಭಿಮನ್ಯು ಮಾತ್ರ ಕಾಲ್ಪನಿಕ ಪಾತ್ರವಲ್ಲ. “ಕುರುಕ್ಷೇತ್ರ’ದಲ್ಲಿ ಅಭಿಮನ್ಯು ಪಾತ್ರ ಎಷ್ಟಿರಬೇಕೋ ಅಷ್ಟಿದೆ. ನಾನು ಸಾಕಷ್ಟು ಶ್ರಮ ಹಾಕಿ ಕೆಲಸ ಮಾಡಿದ್ದೇನೆ. ದ್ವಿತೀಯಾರ್ಧದಲ್ಲಿ 12 ನಿಮಿಷಗಳ ಒಂದು ದೊಡ್ಡ ಆ್ಯಕ್ಷನ್‌ ದೃಶ್ಯವಿದೆ. ಸೆಕೆಂಡ್‌ ಹಾಫ್ನಲ್ಲಿ ಆ್ಯಕ್ಷನ್‌ ಇಲ್ಲ ಎಂದು ಮುನಿರತ್ನ ಅವರೇ ಆ ಸಾಹಸ ದೃಶ್ಯವನ್ನು ಹಾಕಿದ್ದಾರೆ. ನಾನು 70ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರೀಕರಣದಲ್ಲಿ ಭಾಗವಹಿಸಿದ್ದೇನೆ. ಇನ್ನು 22 ದಿನಗಳ ಕಾಲ ತರಬೇತಿ ಪಡೆದಿದ್ದೇನೆ’ ಎನ್ನುತ್ತಾರೆ ನಿಖೀಲ್‌.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.