ರಾಕಿಂಗ್ ಸ್ಟಾರ್ ಜೊತೆ ಮಿಲ್ಕಿ ಬ್ಯೂಟಿ


Team Udayavani, Aug 10, 2018, 3:49 PM IST

kgf.jpg

ಸ್ಯಾಂಡಲ್‍ವುಡ್‍ನ ಬಹು ನಿರೀಕ್ಷಿತ “ಕೆಜಿಎಫ್’ ಚಿತ್ರದಲ್ಲಿ ಯಶ್ ಜೊತೆ ಡ್ಯಾನ್ಸ್ ಮಾಡಿದ ಮಿಲ್ಕಿ ಬ್ಯೂಟಿ ನಟಿ ತಮನ್ನಾ ಭಾಟಿಯಾ ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಟ್ವೀಟ್ ಮಾಡಿದ್ದಾರೆ. ಯಶ್ ಜೊತೆ ತಮನ್ನಾ “ಜೋಕೆ ನಾನು ಬಳ್ಳಿಯ ಮಿಂಚು’ ಎಂಬ ಹಾಡಿನಲ್ಲಿ ಕಾಣಿಸಿಕೊಂಡಿದ್ದು, ಈ ಹಾಡಿನ ಚಿತ್ರೀಕರಣ ಪೂರ್ಣಗೊಂಡಿದೆ. ಸದ್ಯ ತಮನ್ನಾ ಯಶ್ ಜೊತೆ ಡ್ಯಾನ್ಸ್ ಮಾಡಿದ ಫಸ್ಟ್ ಲುಕ್ ಅನ್ನು ತಮ್ಮ ಸಾಮಾಜಿಕ ಜಾಲತಾಣ ಟ್ವೀಟರ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.

“ಯಶ್ ಜೊತೆ ಜೋಕೆ ಹಾಡಿಗೆ ಚಿತ್ರೀಕರಣ ಮಾಡುವಾಗ ಒಳ್ಳೆಯ ಸಮಯ ಕಳೆದಿದ್ದೇನೆ. ಇಡೀ ಚಿತ್ರತಂಡ ನನಗೆ ಮನೆಯ ಅನುಭವವನ್ನು ನೀಡಿದ್ದು, ಎಲ್ಲರಿಗೂ ತುಂಬು ಹೃದಯದ ಧನ್ಯವಾದ. ಅಲ್ಲದೇ ಎಲ್ಲರೂ ಕೆಜಿಎಫ್ ಚಿತ್ರವನ್ನು ಕನ್ನಡ, ತೆಲುಗು ಹಾಗೂ ತಮಿಳು ಭಾಷೆಯಲ್ಲಿ ನೋಡಲು ನಿಮ್ಮ ಹತ್ತಿರದ ಚಿತ್ರಮಂದಿರಕ್ಕೆ ಭೇಟಿ ನೀಡಿ’ ಎಂದು ಮಿಲ್ಕಿ ಬ್ಯೂಟಿ ಟ್ವೀಟ್ ಮಾಡಿದ್ದಾರೆ.

ಇನ್ನು ಈ ರೆಟ್ರೋ ಹಾಡಿಗೆ ಜಾನಿ ಮಾಸ್ಟರ್‌ ನೃತ್ಯ ನಿರ್ದೇಶನ ಮಾಡಿದ್ದಾರೆ. ಅಂದಹಾಗೆ, “ಪರೋಪಕಾರಿ’ ಚಿತ್ರಕ್ಕೆ ಎಲ್‌.ಆರ್‌. ಈಶ್ವರಿ ಅವರು ಹಾಡಿದ “ಜೋಕೆ ನಾನು ಬಳ್ಳಿಯ ಮಿಂಚು, ಕಣ್ಣು ಕತ್ತಿಯ ಅಂಚು …’ ಹಾಡನ್ನು ಈ ಚಿತ್ರಕ್ಕಾಗಿ ರೀಮಿಕ್ಸ್‌ ಮಾಡಿದ್ದು, ವಿಶೇಷ ಸೆಟ್‍ವೊಂದರಲ್ಲಿ ಚಿತ್ರಿಕರಿಸಲಾಗಿದೆ.

ತಮನ್ನಾ ಕನ್ನಡದಲ್ಲಿ ಕಾಣಿಸಿಕೊಳ್ಳುತ್ತಿರುವುದು ಇದು ಮೊದಲೇನಲ್ಲ. ಇದಕ್ಕೂ ಮುನ್ನ ನಿಖಿಲ್‌ ಕುಮಾರ್‌ ಅಭಿನಯದ “ಜಾಗ್ವಾರ್‌’ ಚಿತ್ರದ ಐಟಂ ಡ್ಯಾನ್ಸ್‌ವೊಂದರಲ್ಲೂ ಕಾಣಿಸಿಕೊಂಡಿದ್ದರು. ಈಗ ಎರಡನೆಯ ಬಾರಿಗೆ ಕನ್ನಡ ಚಿತ್ರದಲ್ಲಿ ಅವರು ಮಿಂಚಿದ್ದಾರೆ. “ಕೆಜಿಎಫ್’ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಸಹ ಬಹುತೇಕ ಮುಗಿದಿದ್ದು, ಸೆಪ್ಟೆಂಬರ್‌ ಕೊನೆಯ ಹೊತ್ತಿಗೆ ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಯೋಚಿಸುತ್ತಿದೆ.

“ಕೆಜಿಎಫ್’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡುತ್ತಿದ್ದಾರೆ ಪ್ರಶಾಂತ್‌ ನೀಲ್‌. ಯಶ್‌ ಜೊತೆಗೆ ಶ್ರೀನಿಧಿ ಶೆಟ್ಟಿ ನಾಯಕಿಯಾಗಿ ನಟಿಸುತ್ತಿದ್ದು, ಮಿಕ್ಕಂತೆ ಅಚ್ಯುತ್‌ ಕುಮಾರ್‌, ವಸಿಷ್ಠ ಸಿಂಹ ಮುಂತಾದವರು ನಟಿಸುತ್ತಿದ್ದಾರೆ. ರವಿ  ಬಸ್ರೂರು ಸಂಗೀತ ಮತ್ತು ಭುವನ್‌ ಗೌಡ ಛಾಯಾಗ್ರಹಣವಿರುವ ಈ ಚಿತ್ರವನ್ನು ಹೊಂಬಾಳೆ ಪ್ರೊಡಕ್ಷನ್ಸ್‌ನಡಿ ವಿಜಯ್‌ಕುಮಾರ್‌ ಕಿರಗಂದೂರು ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.