ಭರಣಿ ಸನ್‌ ಆಫ್ ಪಾರ್ವತಮ್ಮ 


Team Udayavani, Aug 15, 2018, 12:07 PM IST

8.jpg

ಹರಿಪ್ರಿಯಾ ಅಭಿನಯದ “ಡಾಟರ್‌ ಆಫ್ ಪಾರ್ವತಮ್ಮ’ ಚಿತ್ರದ ಬಗ್ಗೆ ಗೊತ್ತು. ಆದರೆ, “ಪಾರ್ವತಮ್ಮನ ಮಗ’ ಚಿತ್ರದ ಬಗ್ಗೆ ಗೊತ್ತಾ? ಅದೇ ಈ ಸುದ್ದಿಯ ವಿಶೇಷ. ಈ ಹಿಂದೆ “ಲೂಸ್‌ ಮಾದ’ ಖ್ಯಾತಿಯ ಯೋಗಿ ಅವರ ಸಂಬಂಧಿ ಮಾಧವ ಚಿತ್ರರಂಗಕ್ಕೆ ನಾಯಕರಾಗಿ ಎಂಟ್ರಿಯಾಗುತ್ತಿದ್ದಾರೆ ಎಂಬ ಸುದ್ದಿಯನ್ನು ಇದೇ “ಬಾಲ್ಕನಿ’ಯಲ್ಲಿ ಹೇಳಲಾಗಿತ್ತು. ಆಗ ಆ ಚಿತ್ರಕ್ಕಿನ್ನೂ ನಾಮಕರಣ ಮಾಡಿರಲಿಲ್ಲ. ನಾಯಕಿಯ ಆಯ್ಕೆಯೂ ಆಗಿರಲಿಲ್ಲ. ಈಗ ಆ ಎರಡಕ್ಕೂ ಉತ್ತರ ಸಿಕ್ಕಿದೆ.

ಅಂದಹಾಗೆ, ಚಿತ್ರಕ್ಕೆ “ಭರಣಿ’ ಎಂದು ನಾಮಕರಣ ಮಾಡಲಾಗಿದೆ. “ಪಾರ್ವತಮ್ಮನ ಮಗ’ ಎಂಬ ಅಡಿಬರಹವೂ ಇಲ್ಲಿದೆ. ಇಲ್ಲಿ “ಭರಣಿ’ ಎನ್ನುವುದಕ್ಕಿಂತ “ಪಾರ್ವತಮ್ಮನ ಮಗ’ ಎಂಬುದು ಹೈಲೆಟ್‌. ಅಲ್ಲಿಗೆ ಇದೊಂದು ತಾಯಿ ಮಗನ ಬಾಂಧವ್ಯ ಬಿಂಬಿಸುವ ಅಪ್ಪಟ ದೇಸಿ ಚಿತ್ರ ಎಂಬುದನ್ನು ಸಾರುತ್ತದೆ. ಇನ್ನು, ಚನಾನಿ ರಾಜ ಈ ಚಿತ್ರದ ನಿರ್ದೇಶಕರು. “ಅದ್ಧೂರಿ’, “ರಾಟೆ’, “ಕಿಸ್‌’ “ಬಹದ್ದೂರ್‌’ ಮತ್ತು “ಭರ್ಜರಿ’ ಚಿತ್ರಗಳ ನಿರ್ದೇಶಕರ ಜೊತೆ ಕೆಲಸ ಮಾಡಿದ ಅನುಭವ ಇದೆ. ಇದು ಅವರ ಮೊದಲ ಚಿತ್ರ. ಕಥೆ, ಚಿತ್ರಕಥೆ ಬರೆದು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ರಾಜಮೌಳಿ ನಿರ್ದೇಶನದ “ಯಮದೊಂಗ’ ಚಿತ್ರದಲ್ಲಿ ಕಲಾ ವಿಭಾಗದಲ್ಲಿ ಕೆಲಸ
ಮಾಡಿದ್ದಾರೆ.

ಈ ಚಿತ್ರದ ಫೋಟೋಶೂಟ್‌ಗಾಗಿಯೇ ಕೇರಳಕ್ಕೆ ಹೋಗಿದ್ದ ನಿರ್ದೇಶಕರು, ಅಲ್ಲಿ ಆನೆಯೊಂದಿಗೆ ನಾಯಕ, ನಾಯಕಿಯ ಫೋಟೋಶೂಟ್‌ ಮಾಡಿಸಿದ್ದಾರೆ. “ಆನೆ ಕೂಡ ಚಿತ್ರದ ಒಂದು ಭಾಗವಾಗಿದ್ದು, ಚಿತ್ರದ ಹೈಲೆಟ್‌ ಗಳಲ್ಲೊಂದು. ಆನೆ ಚಿತ್ರದಲ್ಲಿ ಶೇ.30 ರಷ್ಟು ಭಾಗ ಕಾಣಿಸಿಕೊಳ್ಳಲಿದೆ. ಆನೆಗಾಗಿಯೇ ಕಳೆದ ನಾಲ್ಕು ತಿಂಗಳಿನಿಂದ ಕಾಯಬೇಕಾಯಿತು. ಕಾರಣ, ಪರ್ಮಿಷನ್‌ ಸಿಗಲಿಲ್ಲ. ಕೆಲ ದಿನಗಳ ಹಿಂದಷ್ಟೇ ಪರ್ಮಿಷನ್‌ ಸಿಕ್ಕಿದ್ದರಿಂದ ಕೇರಳಕ್ಕೆ ಹೋಗಿ ಆನೆಯೊಂದಿಗೆ ಫೋಟೋಶೂಟ್‌ ಮಾಡಿಸಿಕೊಂಡು ಬಂದಿದ್ದೇವೆ’ ಎಂದು ವಿವರ ಕೊಡುತ್ತಾರೆ ನಿರ್ದೇಶಕ ಚನಾನಿರಾಜ.

ಇಲ್ಲಿ ಪಾರ್ವತಮ್ಮ ಮತ್ತು ಅವನ ಮಗ ನಡುವಿನ ಪ್ರೀತಿ, ವಾತ್ಸಲ್ಯ ಮುಖ್ಯವಾಗಿರಲಿದೆ. ಜೊತೆಗೊಂದು ಪ್ರೀತಿಯೂ ಇರಲಿದೆ. ಚಿತ್ರದಲ್ಲಿ ಸ್ವಾತಿ ಕೊಂಡೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಸುಮಾರು 45 ದಿನಗಳ ಕಾಲ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕತ್ತೆಹೊಳೆ  ಗ್ರಾಮದಲ್ಲೇ ಬಹುತೇಕ ಚಿತ್ರೀಕರಣ ನಡೆಯಲಿದೆಯಂತೆ. ಎ.ಪಿ.ಅರ್ಜುನ್‌, ಚೇತನ್‌ಕುಮಾರ್‌ ಗೀತೆ ರಚಿಸಿದ್ದಾರೆ. ಮಾಸ್ತಿ ಸಂಭಾಷಣೆ ಬರೆದರೆ, ವಿಕ್ರಮ್‌ ಚಕ್ರವರ್ತಿ ಸಂಗೀತವಿದೆ. ಈ ಚಿತ್ರವನ್ನು ಯೋಗೀಶ್‌ ನಿರ್ಮಾಣ ಮಾಡುತ್ತಿದ್ದಾರೆ. 

ಚಿತ್ರದಲ್ಲಿ ಚಿಕ್ಕಣ್ಣ,ಸಿತಾರಾ ಸೇರಿದಂತೆ ಇತರೆ ಕಲಾವಿದರು ನಟಿಸಲಿದ್ದಾರೆ. ಸೆಪ್ಟೆಂಬರ್‌ನಿಂದ ಚಿತ್ರೀಕರಣ ಶುರು.

ಟಾಪ್ ನ್ಯೂಸ್

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.