ಎರಡೇ ಪಾತ್ರಗಳ ಸುತ್ತ ತಿಮ್ಮೇಗೌಡ


Team Udayavani, Aug 30, 2018, 11:20 AM IST

tara-kish.jpg

ದೇಶದ ಮೊದಲ ಶಿಕ್ಷಕಿ “ಸಾವಿತ್ರಿಬಾಯಿ ಫ‌ುಲೆ’ ಅವರ ಬದುಕು ಆಧರಿಸಿದ “ಸಾವಿತ್ರಿಬಾಯಿ ಫ‌ುಲೆ’ ಚಿತ್ರದ ಮೂಲಕ ಇನ್ನಷ್ಟು ಗಮನಸೆಳೆದಿದ್ದ ನಟಿ ತಾರಾ, ಈಗ ಹೊಸದೊಂದು ಚಿತ್ರ ಒಪ್ಪಿಕೊಂಡಿದ್ದಾರೆ. ಅದು ಕೂಡ ಹೊಸ ಬಗೆಯ ಚಿತ್ರ ಎಂಬುದು ವಿಶೇಷ. ಆ ಚಿತ್ರಕ್ಕೆ “ಮಿಸ್ಟರ್‌ ಅಂಡ್‌ ಮಿಸಸ್‌ ತಿಮ್ಮೇಗೌಡ’ ಎಂದು ನಾಮಕರಣ ಮಾಡಲಾಗಿದೆ. ತಾರಾ ಅವರ ಪತಿಯಾಗಿ ನಟ ಕಿಶೋರ್‌ ಕಾಣಿಸಿಕೊಳ್ಳುತ್ತಿದ್ದಾರೆ.

ಇಡೀ ಚಿತ್ರದಲ್ಲಿ ಇವರಿಬ್ಬರೇ ಹೈಲೆಟ್‌. ಅಂದಹಾಗೆ, ಈ ಚಿತ್ರಕ್ಕೆ ಪ್ರಶಾಂತ್‌ ನಿರ್ದೇಶಕರು. ಇವರಿಗೆ ಇದು ಮೊದಲ ಸಿನಿಮಾ. ಈ ಹಿಂದೆ ನಾಗಾಭರಣ, ಸಾಧು ಕೋಕಿಲ, ನಾಗೇಂದ್ರ ಪ್ರಸಾದ್‌ ಸೇರಿದಂತೆ ಒಂದಷ್ಟು ನಿರ್ದೇಶಕರ ಜೊತೆ ಕೆಲಸ ಮಾಡಿದ ಅನುಭವ ಪ್ರಶಾಂತ್‌ ಅವರಿಗಿದೆ. ಈ ಚಿತ್ರಕ್ಕೆ ಡಾ. ಸೂರಿ ನಿರ್ಮಾಪಕರು. “ಇದು ಎರಡು ಪಾತ್ರಗಳ ನಡುವಿನ ಕಥೆ. ಇಡೀ ಚಿತ್ರದಲ್ಲಿ ಎರಡೇ ಪಾತ್ರಗಳು ಕಾಣಿಸಿಕೊಳ್ಳಲಿವೆ.

ಗಂಡ ಮತ್ತು ಹೆಂಡತಿ ನಡುವಿನ ಬದುಕು, ಬವಣೆ, ನೋವು, ನಲಿವು ಮತ್ತು ಅವರ ಸುಂದರ ಲೈಫ್ ಬಗ್ಗೆ ಕಥೆ ಸಾಗಲಿದೆ. ಆ ಮಧ್ಯೆ ಒಂದಷ್ಟು ಸಮಸ್ಯೆಗಳು ಎದುರಾಗುತ್ತವೆ. ಆದರೆ, ಅದ್ಯಾವ ಸಮಸ್ಯೆಯೂ ತೆರೆಯ ಮೇಲೆ ತೋರಿಸುವ ಪ್ರಯತ್ನ ಮಾಡುವುದಿಲ್ಲ’ ಎಂಬುದು ನಿರ್ದೇಶಕ ಪ್ರಶಾಂತ್‌ ಮಾತು. ಪ್ರತಿಯೊಬ್ಬರು ಹೀಗೂ ಬದುಕಬಹುದಾ ಎಂಬ ಬದುಕನ್ನು ತೋರಿಸುವ ಉದ್ದೇಶ ಈ ಚಿತ್ರದ್ದು.

ಪ್ರಪಂಚದಲ್ಲಿರುವ ಸುಮಾರು 50 ಪ್ಪಸ್‌ ಆಸುಪಾಸಿನ ವಯಸ್ಸಿನವರಿಗೆ ಆಗುವಂತಹ ತಳಮಳ, ತಲ್ಲಣದ ಅಂಶಗಳು ಒಂದೇ ರೀತಿಯಾಗಿರುತ್ತವೆ. ಅಂತಹ ಯುನಿರ್ವಸಲ್‌ ವಿಷಯ ಇಟ್ಟುಕೊಂಡು ಕಥೆ ಹೆಣೆದಿದ್ದೇನೆ. ಕೆ.ಆರ್‌.ನಗರ ತಾಲೂಕು ಶ್ರೀರಾಮಪುರ ಗ್ರಾಮದಲ್ಲಿರುವ ಒಂದು ಮನೆಯಲ್ಲಿ ಚಿತ್ರೀಕರಣ ನಡೆಯಲಿದೆ. ಸುಮಾರು ಎರಡು ಸಾವಿರ ಕಿ.ಮೀ ಸುತ್ತಾಟ ನಡೆಸಿ, ಕೊನೆಗೆ ಕಥೆಗೆ ಬೇಕಾದ ಮನೆ ಹುಡುಕಿದ್ದು ವಿಶೇಷ’ ಎಂಬುದು ನಿರ್ದೇಶಕರ ಮಾತು. 

ಚಿತ್ರಕ್ಕೆ ಎಲ್ಲಾ ತಯಾರಿಯೂ ನಡೆದಿದೆ. ಕಿಶೋರ್‌ ಡೇಟ್ಸ್‌ ನೋಡಿಕೊಂಡು ಚಿತ್ರೀಕರಣಕ್ಕೆ ಹೋಗುವ ಯೋಚನೆ  ಇದೆ. ನವೆಂಬರ್‌ ತಿಂಗಳಲ್ಲಿ ಚಿತ್ರೀಕರಣ ನಡೆಯಲಿದೆ. ಚಿತ್ರಕ್ಕೆ ಸನಾ ರವಿಕುಮಾರ್‌ ಛಾಯಾಗ್ರಹಣವಿದೆ. ಅರ್ಜುನ್‌ ಜನ್ಯಾ ಅವರು ಸಂಗೀತ ನೀಡುತ್ತಿದ್ದು, ನಾಲ್ಕು ಹಾಡುಗಳು ಚಿತ್ರದಲ್ಲಿರಲಿವೆ. ಇಲ್ಲಿ ಎರಡು ಪಾತ್ರಗಳ ಜೊತೆಗೆ ಔಟ್‌ ವಾಯ್ಸ ಕೇಳಿಬರಲಿದೆ. ಬಿಟ್ಟರೆ, ಯಾವ ಪಾತ್ರವೂ ತೆರೆಯ ಮೇಲೆ ಬರಲ್ಲ ಎಂಬುದು ಪ್ರಶಾಂತ್‌ ಮಾತು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.