ಕೆಸಿಸಿ ಟೂರ್ನಿ ಟಿಕೆಟ್‌ ಹಣ ಕೊಡಗು ಸಂತ್ರಸ್ತ ನಿಧಿಗೆ


Team Udayavani, Sep 2, 2018, 11:11 AM IST

kcc.jpg

ಸುದೀಪ್‌ ನೇತೃತ್ವದ ಕೆಸಿಸಿ ( ಕನ್ನಡ ಚಲನಚಿತ್ರ ಕಪ್‌) ಎರಡನೇ ಆವೃತ್ತಿ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸೆಪ್ಟೆಂಬರ್‌ 08 ಹಾಗೂ 09ರಂದು ನಡೆಯಲಿರುವ ಟೂರ್ನಿಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ. ಪಂದ್ಯಗಳನ್ನು ಹೆಚ್ಚು ಪ್ರೇಕ್ಷಕರು ಕಣ್ತುಂಬಿಕೊಳ್ಳಬೇಕು ಹಾಗೂ ಇದರಿಂದ ಕೊಡಗು ಸಂತ್ರಸ್ತ ನಿಧಿಗೆ ಸಹಾಯವಾಗಬೇಕೆಂಬ ಕಾರಣಕ್ಕೆ ಟಿಕೆಟ್‌ಗೆ ಕಡಿಮೆ ಬೆಲೆ ನಿಗದಿಪಡಿಸಲಾಗಿದೆ.

ಒಂದು ದಿನದ ಟಿಕೆಟ್‌ಗೆ 25 ರೂಪಾಯಿಯನ್ನು ನಿಗದಿಪಡಿಸಿದ್ದು, ಪ್ರೇಕ್ಷಕ 50 ರೂಪಾಯಿ ಕೊಟ್ಟು ಎರಡು ದಿನದ ಟಿಕೆಟ್‌ ಪಡೆಯುವುದು ಕಡ್ಡಾಯ. ಈ ಮೂಲಕ 50 ರೂಪಾಯಿಯಲ್ಲಿ ಚಿನ್ನಸ್ವಾಮಿಯಲ್ಲಿ ಎರಡು ದಿನ ಪಂದ್ಯ ವೀಕ್ಷಿಸುವ ಅವಕಾಶವನ್ನು ಪ್ರೇಕ್ಷಕರಿಗೆ ಕಲ್ಪಿಸಲಾಗಿದೆ. ಟಿಕೆಟ್‌ ಬೆಲೆಯಿಂದ ಸಂಗ್ರಹವಾದ ಹಣವನ್ನು ಕೊಡಗು ಸಂತ್ರಸ್ತರ ನಿಧಿಗೆ ಹಸ್ತಾಂತರಿಸುವ ಮೂಲಕ ಸಹಾಯ ಹಸ್ತ ಚಾಚಲು ಪಂದ್ಯ ಸಂಘಟಕರು ಮುಂದಾಗಿದ್ದಾರೆ.

ಕೆಸಿಸಿ ಟೂರ್ನಿಯ ಟಿಕೆಟ್‌ಗಳು ಸಂಗೀತಾ ಮೊಬೈಲ್ಸ್‌, ಆನ್‌ಲೈನ್‌ ಹಾಗೂ ಕನ್ನಡ ಚಲನಚಿತ್ರ ಕಲಾವಿದರ ಸಂಘದ ಕಟ್ಟಡದಲ್ಲಿ ದೊರಕಲಿದೆ. ಟಿಕೆಟ್‌ನಿಂದ ಸಂಗ್ರಹವಾಗುವ ಮೊತ್ತವನ್ನು ಸೆಪ್ಟೆಂಬರ್‌ 08 ರಂದು ಪಂದ್ಯ ಉದ್ಘಾಟನೆಗೆ ಆಗಮಿಸುವ ಮುಖ್ಯಮಂತ್ರಿಯವರಿಗೆ ಹಸ್ತಾಂತರಿಸಲಾಗುತ್ತದೆ. 
ಎಲ್ಲಾ ಓಕೆ, ಟಿಕೆಟ್‌ ಬೆಲೆ ಕಡಿಮೆ ಇಡಲು ಕಾರಣವೇನೆಂದು ನೀವು ಕೇಳಬಹುದು. ಕನ್ನಡ ಸಿನಿಮಾಗಳನ್ನು ನೋಡಿ ಬೆಳೆಸುವ ಸಾಮಾನ್ಯ ಪ್ರೇಕ್ಷಕನಿಗೆ ಪಂದ್ಯ ನೋಡುವ ಅವಕಾಶವನ್ನು ಕಡಿಮೆ ಬೆಲೆಗೆ ಕಲ್ಪಿಸಿಕೊಡಬೇಕೆಂಬ ಉದ್ದೇಶದಿಂದ ಕಡಿಮೆ ಬೆಲೆ ನಿಗದಿಪಡಿಸಲಾಗಿದೆ.

ಸೆಪ್ಟೆಂಬರ್‌ 08 ನಾಲ್ಕು ಪಂದ್ಯಗಳು ನಡೆಯಲಿದ್ದು, ಸೆ.09 ರಂದು ಎರಡು ಪಂದ್ಯಗಳ ಜೊತೆಗೆ ಫೈನಲ್‌ ಪಂದ್ಯ ಕೂಡಾ ನಡೆಯಲಿದೆ. ಕೆಸಿಸಿಯಲ್ಲಿ  ಕದಂಬ ಲಯನ್ಸ್‌, ವಿಜಯನಗರ ಪೆಟ್ರಿಯಾಟ್ಸ್‌, ಹೊಯ್ಸಳ ಈಗಲ್ಸ್‌, ಗಂಗಾ ವಾರಿಯರ್, ಒಡೆಯರ್‌ ಚಾರ್ಜರ್ ಹಾಗೂ ಕರ್ನಾಟಕ ಪ್ಯಾಂಥರ್ ಎಂಬ ಒಟ್ಟು ಆರು ತಂಡಗಳು ಸೆಣಸಾಡಲಿದ್ದು, ಈ ತಂಡಗಳನ್ನು ಆರು ಮಂದಿ ಪ್ರತಿನಿಧಿಸುವ ಜೊತೆಗೆ ಸ್ಟಾರ್‌ ನಟರು ಕೂಡಾ ತಂಡದಲ್ಲಿ ಆಡಲಿದ್ದಾರೆ. 

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.