ನಾನು ಬಿಝಿಯಾಗಿದ್ದೆ


Team Udayavani, Sep 5, 2018, 11:29 AM IST

jhansi.jpg

ನಟಿ ಲಕ್ಷ್ಮೀ ರೈ ನಾಲ್ಕು ವರ್ಷಗಳ ನಂತರ ಕನ್ನಡಕ್ಕೆ ಬಂದಿರೋದು ಗೊತ್ತೇ ಇದೆ. “ಝಾನ್ಸಿ’ ಚಿತ್ರ ಒಪ್ಪಿಕೊಂಡಿರುವುದೂ ಗೊತ್ತು. ಆ ಚಿತ್ರಕ್ಕೆ ಈಗಾಗಲೇ ಚಾಲನೆಯೂ ಸಿಕ್ಕಾಗಿದೆ. ಚಿತ್ರದ ಶೀರ್ಷಿಕೆಯೇ ಹೇಳುವಂತೆ, ಅದು ನಾಯಕಿ ಪ್ರಧಾನ ಚಿತ್ರ. ಪಕ್ಕಾ ಮಾಸ್‌ ಅಂಶಗಳೇ ಹೆಚ್ಚು. ಭರ್ಜರಿ ಆ್ಯಕ್ಷನ್‌ ಪ್ಯಾಕ್‌ ಇರುವ ಸಿನಿಮಾ. ಬರೋಬ್ಬರಿ ನಾಲ್ಕು ರಿಸ್ಕೀ ಫೈಟು, ಚೇಸಿಂಗ್‌ ಇತ್ಯಾದಿ ಚಿತ್ರದ ಹೈಲೆಟ್‌. 

ಸಾಮಾನ್ಯವಾಗಿ ಲಕ್ಷ್ಮೀ ರೈ ಅಂದಾಕ್ಷಣ, ಎಲ್ಲರಿಗೂ ನೆನಪಾಗೋದು ಗ್ಲಾಮರ್‌. ಲಕ್ಷ್ಮೀ ರೈ ಗ್ಲಾಮರಸ್‌ ಆಗಿ ಕಾಣಿಸಿಕೊಂಡಿರುವುದುಂಟು. ಆದರೆ, ಇದೇ ಮೊದಲ ಸಲ ಅವರು ಟಾಮ್‌ ಬಾಯ್‌ ಪಾತ್ರ ಮಾಡುತ್ತಿದ್ದಾರೆ. ಪಕ್ಕಾ ಗಂಡುಬೀರಿ ಹುಡುಗಿಯಾಗಿ ರೌಡಿಗಳ ಜೊತೆ ಹೊಡೆದಾಡಲಿದ್ದಾರೆ. ಇಷ್ಟೆಲ್ಲಾ ರಿಸ್ಕ್ ತೆಗೆದುಕೊಳ್ಳಲಿರುವ ಲಕ್ಷ್ಮೀ ರೈ, ಆ ಪಾತ್ರಕ್ಕೆ ಬೇಕಾದ ತಯಾರಿಯನ್ನೂ ಮಾಡಿಕೊಳ್ಳುತ್ತಿದ್ದಾರೆ.

ಅವರೇ ಹೇಳುವಂತೆ, ಮಾರ್ಷಲ್‌ ಆರ್ಟ್ಸ್ ಕಲಿಯುತ್ತಿದ್ದಾರೆ. ಈ ಚಿತ್ರದಲ್ಲಿ ಸಿಕ್ಕಾಪಟ್ಟೆ ಆ್ಯಕ್ಷನ್‌ ಇರುವುದರಿಂದ ಅಲ್ಲಿ ಪಕ್ವತೆ ಇರಬೇಕು ಎಂಬ ಉದ್ದೇಶದಿಂದ ಲಕ್ಷ್ಮೀ ರೈ, ಮುಂಬೈನಲ್ಲಿ ಮಾರ್ಷಲ್‌ ಆರ್ಟ್ಸ್ ತರಬೇತಿ ಪಡೆಯುತ್ತಿದ್ದಾರೆ. ಸದ್ಯ ಮುಂಬೈನಲ್ಲೇ ನೆಲೆಸಿರುವ ಲಕ್ಷ್ಮೀ ರೈ, ತರಬೇತುದಾರ ನಿಜಾಮ್‌ ಎಂಬುವವರ ಬಳಿ ಮಾರ್ಷಲ್‌ ಆರ್ಟ್ಸ್ ಕಲಿಯುತ್ತಿದ್ದಾರೆ. ಅವರೊಂದಿಗೆ ವಿದೇಶಿ ತರಬೇತುದಾರ ಕೂಡ ಮಾರ್ಷಲ್‌ ಆರ್ಟ್ಸ್ ಹೇಳಿಕೊಡುತ್ತಿದ್ದಾರೆ.

ಬಾಲಿವುಡ್‌ ಸ್ಟಾರ್ಗಳಿಗೆ ಸ್ಟಂಟ್ಸ್‌ ಹೇಳಿಕೊಡುವ ತರಬೇತುದಾರರಿಂದಲೇ ತರಬೇತಿ ಪಡೆಯುತ್ತಿರುವುದಾಗಿ ಹೇಳುವ ಲಕ್ಷ್ಮೀ ರೈ, “ಝಾನ್ಸಿ’ ಬಗ್ಗೆ ಆಪಾರ ನಂಬಿಕೆ ಇಟ್ಟುಕೊಂಡಿದ್ದಾರೆ. ಕಥೆ, ಪಾತ್ರ ಚೆನ್ನಾಗಿದೆ ಎಂಬ ಕಾರಣದಿಂದಲೇ ಅವರು ಬಿಜಿ ಇದ್ದರೂ, ಡೇಟ್‌ ಕೊಟ್ಟಿದ್ದಾರಂತೆ. “ನನ್ನನ್ನು ಹಾಕಿ ಸಿನಿಮಾ ಮಾಡುವವರಿಗೆ ಗ್ಲಾಮರ್‌ ಬೇಕೇ ಬೇಕು. ಇಲ್ಲೂ ಗ್ಲಾಮರ್‌ ಇದೆಯಾದರೂ, ಹೊಸ ರೀತಿಯಲ್ಲಿ ನನ್ನನ್ನು ತೋರಿಸಲಾಗುತ್ತಿದೆ.

ನನಗೆ ಡ್ಯಾನ್ಸ್‌ ಅಂದರೆ ಇಷ್ಟ. ಹಾಗೇ, ಆ್ಯಕ್ಷನ್‌ ಕೂಡ ಇಷ್ಟ. ಆದರೆ, ಇದುವರೆಗೆ ಅಂಥದ್ದೊಂದು ಅವಕಾಶ ಸಿಕ್ಕಿರಲಿಲ್ಲ. ಈಗ ಸಿಕ್ಕಿದೆ. ಇಲ್ಲಿ ರಿಸ್ಕೀ ಸ್ಟಂಟ್ಸ್‌ ಇದೆ, ಚೇಸಿಂಗ್‌ ಇದೆ, ಬೈಕ್‌ ಓಡಿಸ್ತೀನಿ, ಖಡಕ್‌ ಡೈಲಾಗ್‌ ಹೇಳ್ತೀನಿ. ರಿಯಲ್‌ ಲೈಫ್ನಲ್ಲಿ ನಾನು ಯಾರಿಗೂ ಕೇರ್‌ ಮಾಡಲ್ಲ. ನೇರ ನುಡಿಯ ವ್ಯಕ್ತಿತ್ವ. ರೀಲ್‌ನಲ್ಲೂ ಅಂಥದ್ದೇ ಪಾತ್ರ ಸಿಕ್ಕಿದೆ. ನೇರ ಮಾತಾಡುವ ನನಗೆ ಪ್ರೀತಿಸೋರು ಇದ್ದಾರೆ, ದ್ವೇಷಿಸೋರು ಇದ್ದಾರೆ.

ನಾನು ಮಾತ್ರ ನನ್ನ ಪಾಡಿಗೆ ಕೆಲಸ ಮಾಡುತ್ತಾ ಹೋಗ್ತಿàನಿ. ನನಗೆ ಅನ್‌ ಕಂಫ‌ರ್ಟ್‌ಬಲ್‌ ಜೋನ್‌ನಲ್ಲಿ ಕೆಲಸ ಮಾಡಲು ಇಷ್ಟವಿಲ್ಲ. ಬೇರೆಯವರನ್ನು ನೋಡಿ ಕಾಪಿ ಮಾಡುವ ಹುಚ್ಚಾ ಇಲ್ಲ. ನನ್ನ ಶೈಲಿಯಲ್ಲೇ ನಾನು ನಟನೆ ಮಾಡ್ತೀನಿ. ಆದರೂ, ಒಂದಷ್ಟು ಕಾಂಟ್ರವರ್ಸಿ ನನ್ನನ್ನು ಸುತ್ತಿಕೊಂಡಿತು. ಅದಕ್ಕೆಲ್ಲಾ ಕೇರ್‌ ಮಾಡಲಿಲ್ಲ. ಎಲ್ಲವನ್ನೂ ಎದುರಿಸಿದ್ದೇನೆ. ಕೆಲವರು, ಪಬ್ಲಿಸಿಟಿಗಾಗಿ ಹೀಗೆಲ್ಲಾ ಮಾಡ್ತಾಳೆ ಅಂತಾರೆ.

ಅದೆಲ್ಲಾ ನನಗೆ ಬೇಕಿಲ್ಲ. ನನ್ನ ಕೆಲಸ ಮಾತಾಡಬೇಕೆಂದುಕೊಂಡವಳು ನಾನು. ಯಾವುದೇ ಬ್ಯಾಕ್‌ಗ್ರೌಂಡ್‌ ಇಲ್ಲದೆ ಸಿನಿಮಾ ರಂಗಕ್ಕೆ ಬಂದವಳು. ಸೋಲು-ಗೆಲುವು ಎರಡನ್ನೂ ಕಂಡಿದ್ದೇನೆ. ರಿಯಲ್‌ ಲೈಫ್ನಲ್ಲಿ ಇಷ್ಟೆಲ್ಲಾ ಆಗಿರುವುದರಿಂದ, “ಝಾನ್ಸಿ’ಯಲ್ಲಿ ಅಂಥದ್ದೇ ಪಾತ್ರ ಇರುವುದರಿಂದ ಕೆಲಸ ಮಾಡೋಕೆ ಸುಲಭವಾಗಿದೆ’ ಎನ್ನುತ್ತಾರೆ ಲಕ್ಷ್ಮೀ ರೈ.

ಅವಕಾಶ ತಪ್ಪೋಯ್ತು: “ನನಗೆ ಕನ್ನಡದಲ್ಲಿ ಅವಕಾಶ ಇಲ್ಲವೆಂದಲ್ಲ. ಈ ಹಿಂದೆ ಸಾಕಷ್ಟು ಅವಕಾಶ ಬಂದಿದ್ದುಂಟು ಆದರೆ, ನಾನು ಬೇರೆ ಸಿನಿಮಾ ಒಪ್ಪಿದ್ದರಿಂದ ಮಾಡಲು ಸಾಧ್ಯವಾಗಲಿಲ್ಲ. ದರ್ಶನ್‌ ಜೊತೆ “ಕುರುಕ್ಷೇತ್ರ’ದಲ್ಲಿ ದ್ರೌಪದಿ ಪಾತ್ರ ಮಾಡಬೇಕಿತ್ತು. ಆಗಲಿಲ್ಲ. ಕಾರಣ, 40 ದಿನ ಡೇಟ್‌ ಬೇಕಿತ್ತು. ನಾನು ಬೇರೆ ಸಿನಿಮಾಗೆ ಕೊಟ್ಟಿದ್ದರಿಂದ ಸಾಧ್ಯವಾಗಲಿಲ್ಲ. “ಕೆಜಿಎಫ್’ ಚಿತ್ರದಲ್ಲೂ ಹಾಡೊಂದಕ್ಕೆ ಡ್ಯಾನ್ಸ್‌ ಮಾಡುವ ಅವಕಾಶ ಬಂದಿತ್ತು.

ಅದೂ ಸಾಧ್ಯವಾಗಲಿಲ್ಲ. ಕಾರಣ, ತೆಲುಗು, ತಮಿಳು, ಮಲಯಾಳಂ ಚಿತ್ರಗಳಲ್ಲಿ ಬಿಜಿಯಾಗಿದ್ದೆ. ಕನ್ನಡದಲ್ಲಿ ಕೆಲಸ ಮಾಡೋಕೆ ಇಷ್ಟ. ಇಲ್ಲಿ ಗ್ಯಾಪ್‌ ತಗೊಂಡು ಮಾಡಿದರೂ, ಒಳ್ಳೇ ಚಿತ್ರ ಮಾಡಬೇಕು, ಗೆಲ್ಲಬೇಕು ಎಂಬುದು ನನ್ನಾಸೆ. ಈಗಂತೂ ನಾಯಕಿ ಪ್ರಧಾನ ಚಿತ್ರಗಳು ಬರುತ್ತಿವೆ. ಯಾರೇ ಇರಲಿ, ಕಾನ್ಸೆಪ್ಟ್ ಚೆನ್ನಾಗಿದ್ದರೆ ನಾನು ಮಾಡ್ತೀನಿ’ ಎಂದಷ್ಟೇ ಹೇಳಿ ಸುಮ್ಮನಾಗುತ್ತಾರೆ ಲಕ್ಷ್ಮೀ ರೈ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.