“ಇರುವುದೆಲ್ಲವ ಬಿಟ್ಟು’ ಚೆಲುವೆ ಬಂದರು ಮುದ್ದಾಗಿ: Watch
Team Udayavani, Sep 5, 2018, 3:59 PM IST
ದಾವಣಗೆರೆ ದೇವರಾಜ್ ನಿರ್ಮಾಣದ “ಇರುವುದೆಲ್ಲವ ಬಿಟ್ಟು’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿ ಅಬ್ಬರಿಸುತ್ತಿರುವ ನಡುವೆಯೇ, ಚಿತ್ರತಂಡ ಚಿತ್ರದ “ಚೆಲುವೆ ನೀ ಬಂದು’ ವಿಡಿಯೋ ಸಾಂಗ್ ರಿಲೀಸ್ ಮಾಡಿದೆ. ಹಾಡಿನಲ್ಲಿ ಮೇಘನಾ ರಾಜ್ ಮತ್ತು ಶ್ರೀಮಹದೇವ್ ಕಾಣಿಸಿಕೊಂಡಿದ್ದಾರೆ.
ಅಲ್ಲದೇ ಹಾಡಿಗೆ ಸಾಹಿತ್ಯವನ್ನು ಜಯಂತ್ ಕಾಯ್ಕಿಣಿ ಬರೆದಿದ್ದು, ಸಿದ್ಧಾರ್ಥ ಬೆಲ್ಮಾಣ್ಣು ಕಂಠಸಿರಿಯಲ್ಲಿ ಮೂಡಿಬಂದಿದೆ. ಸದ್ಯ ಬಿಡುಗಡೆಯಾಗಿರುವ ಲವ್ ರೊಮ್ಯಾಂಟಿಕ್ “ಚೆಲುವೆ ನೀ ಬಂದು’ ಸಾಂಗ್ ಅದ್ಭುತವಾಗಿ ಮೂಡಿ ಬಂದಿದೆ. ಇನ್ನು ಚಿತ್ರದ ಒಂದು ಹಾಡು ತಮಿಳು ನಟ ಸಿಂಬು ಕಂಠದಲ್ಲಿ ಮೂಡಿ ಬಂದಿದ್ದು, ಚಿತ್ರಕ್ಕೆ ಶ್ರೀಮುರಳಿ ಧ್ವನಿ ನೀಡುವ ಮೂಲಕ ಹೊಸಬರ ತಂಡವನ್ನು ಪ್ರೋತ್ಸಾಹಿಸಿದ್ದಾರೆ.
ಚಿತ್ರವನ್ನು ಕಾಂತ ಕನ್ನಲ್ಲಿ ನಿರ್ದೇಶಿಸಿದ್ದು, ಮಹೇಶ್ ಮಳವಳ್ಳಿ ಸಂಭಾಷಣೆ, ವಿಲಿಯಂ ಡೇವಿಡ್ ಛಾಯಾಗ್ರಹಣ, ಶ್ರೀಧರ್ ವಿ ಸಂಭ್ರಮ್ ಸಂಗೀತ, ಶ್ರೀನಿವಾಸ್ ಕಲೆ ಇದೆ. ತಾರಾಗಣದಲ್ಲಿ ತಿಲಕ್, ಶ್ರೀಮಹದೇವ್, ಅಚ್ಯುತ್ ಕುಮಾರ್, ಅರುಣ ಬಾಲರಾಜ್, ಅಭಿಷೇಕ್ ರಾಯಣ್ಣ, ರಿಚರ್ಡ್ ಲೂಯಿಸ್ ಮುಂತಾದವರಿದ್ದಾರೆ. ಅಂದಹಾಗೆ “ಇರುವುದೆಲ್ಲವ ಬಿಟ್ಟು’ ಈ ಶೀರ್ಷಿಕೆಗೆ “ಇರುವೆ ಬಿಟ್ಟುಕೊಳ್ಳುವುದೇ ಜೀವನ’ ಎಂಬ ಅಡಿಬರಹವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ