ಅಂಜಲಿ ಕೇರ್‌ ಆಫ್ ಮನೋರಥ


Team Udayavani, Sep 6, 2018, 12:56 PM IST

57.jpg

ಸಾಫ್ಟ್ವೇರ್‌ ಕ್ಷೇತ್ರದಿಂದ ಸಿನಿಮಾರಂಗಕ್ಕೆ ಬಂದವರ ಸಂಖ್ಯೆಗೇನೂ ಕಮ್ಮಿಯಿಲ್ಲ. ಅಲ್ಲಿಂದ ಬಂದವರೀಗ ನಿರ್ದೇಶನ, ನಿರ್ಮಾಣ, ನಟನೆ ಹೀಗೆ ಹಲವು ವಿಭಾಗದಲ್ಲಿ ತೊಡಗಿಸಿಕೊಂಡಿದ್ದಾರೆ. ಆ ಸಾಲಿಗೆ ಮತ್ತೂಬ್ಬ ನಟಿ ಸೇರಿದ್ದಾರೆ. ಹೆಸರು ಅಂಜಲಿ. ಯಾರು ಈ ಅಂಜಲಿ ಅಂದರೆ, “ಮನೋರಥ’ ಚಿತ್ರ ತೋರಿಸಬೇಕು. ಈ ವಾರ ತೆರೆಕಾಣುತ್ತಿರುವ ಚಿತ್ರವಿದು. ಅಂಜಲಿ ಈ ಚಿತ್ರದ ಮೂಲಕ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಕ್ಕೂ ಮುನ್ನ, ಸುಮನ ಕಿತ್ತೂರ್‌ ನಿರ್ದೇಶನದ “ಕಿರಗೂರಿನ ಗಯ್ನಾಳಿಗಳು’ ಚಿತ್ರದಲ್ಲೊಂದು ಪಾತ್ರ ನಿರ್ವಹಿಸಿದ್ದರು. ಅದಾದ ಬಳಿಕ “ರನ್‌ ಆಂಟೋನಿ’ ಚಿತ್ರದಲ್ಲೂ ಕಾಣಿಸಿಕೊಂಡರು. ದಿನೇಶ್‌ ಬಾಬು ನಿರ್ದೇಶನದ “ನನಗಿಷ್ಟ’ ಚಿತ್ರದಲ್ಲಿ ಪಾತ್ರ ಮಾಡಿದ ಬಳಿಕ “ಮನೋರಥ’ ಚಿತ್ರ ಸಿಕ್ಕಿದೆ.

ಚಿತ್ರದ ಬಗ್ಗೆ ಹೇಳುವ ಅಂಜಲಿ, “”ಮನೋರಥ’ ಒಂದು ಸೈಕಲಾಜಿಕಲ್‌ ಸಸ್ಪೆನ್ಸ್‌ ಥ್ರಿಲ್ಲರ್‌ ಚಿತ್ರ. ಮನುಷ್ಯನ ಮನಸ್ಥಿತಿ ಮೇಲೆ ಸಾಗುವ ಚಿತ್ರವಿದು. ಮಾನಸಿಕ ದೌರ್ಬಲ್ಯ ಇರುವ ವ್ಯಕ್ತಿ ಮೇಲೆ ಒಂದಷ್ಟು ಘಟನೆಗಳು ನಡೆಯುತ್ತವೆ. ಒಂದು ಫೋಬಿಯಾ ಖಾಯಿಲೆ ಸುತ್ತ ನಡೆಯೋ ಕಥೆಯೇ ಚಿತ್ರದ ಜೀವಾಳ. ಇದೊಂದು ಪ್ರಯೋಗಾತ್ಮಕ ಚಿತ್ರ. ಇಲ್ಲಿ ಎರಡು ಶೇಡ್‌ ಪಾತ್ರಗಳಿವೆ. ಒಂದು ಡಾಕ್ಟರ್‌ ಪಾತ್ರ. ಅದು ಪಾಸಿಟಿವ್‌ ಆಗಿರುತ್ತೆ. ಇನ್ನೊಂದು ನೆಗೆಟಿವ್‌ ಪಾತ್ರ. ಅದನ್ನು ಚಿತ್ರಮಂದಿರದಲ್ಲೇ ನೋಡಬೇಕು ಎಂಬುದು ಅಂಜಲಿ ಮಾತು.

ಅಂಜಲಿ ಮೂರನೇ ತರಗತಿ ಓದುವಾಗಲೇ ಭರನಾಟ್ಯ ಕಲಿತವರು. ವಿದ್ವತ್‌ ಕೂಡ ಆಗಿದೆ. ಎಂಜಿನಿಯರಿಂಗ್‌ ಮುಗಿಸಿ, ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಂಜಲಿಗೆ, ಅದೇಕೋ ಸಾಫ್ಟ್ವೇರ್‌ ಕ್ಷೇತ್ರ ಬೇಡವಾಗಿ, ಸಿನಿಮಾ ಕಡೆ ವಾಲಿದ್ದಾರೆ. ಅದಕ್ಕೂ ಮುನ್ನ, ರಂಗಭೂಮಿಗೆ ಕಾಲಿಟ್ಟು, ಸಾತ್ವಿಕ ರಂಗಪಯಣ ತಂಡದಲ್ಲಿ ಹಲವು ನಾಟಕ ಪ್ರದರ್ಶನ ಮಾಡಿದ್ದಾರೆ. ಆ ಬಳಿಕ ಒಂದಷ್ಟು ಕಾರ್ಪೋರೇಟ್‌ ಇವೆಂಟ್‌ಗಳಿಗೆ ನಿರೂಪಣೆ ಮಾಡಿಕೊಂಡು, ಕಿರುತೆರೆಯಲ್ಲೂ ರಿಯಾಲಿಟಿ ಶೋ ನಡೆಸಿಕೊಟ್ಟಿದ್ದಾರೆ. ಎರಡು ವರ್ಷದ ಅನುಭವ ಪಡೆದ ಅಂಜಲಿಗೆ ಈಗ ಮೊದಲ ಸಲ ನಾಯಕಿ ಆಗುವ ಅವಕಾಶ ಸಿಕ್ಕಿದೆ. ಇದೊಂದು ಗುರುತಿಸಿಕೊಳ್ಳುವ ಚಿತ್ರವಾಗುತ್ತೆ ಎಂಬ ನಂಬಿಕೆ ಇಟ್ಟುಕೊಂಡಿದ್ದಾರೆ. ಈ ಚಿತ್ರಕ್ಕೆ ಪ್ರಸನ್ನಕುಮಾರ್‌ ನಿರ್ದೇಶಕರು. ರಾಜ್‌ಚರಣ್‌ ನಾಯಕರಾಗಿದ್ದಾರೆ. ಚಂದ್ರು ಓಬಯ್ಯ ಸಂಗೀತವಿದೆ. ಮುರಳಿ ಅವರ ಛಾಯಾಗ್ರಹಣವಿದೆ. ಸದ್ಯಕ್ಕೆ ಅಂಜಲಿ “ಸ್ವತ್ಛ ಕರ್ನಾಟಕ’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅದರೊಂದಿಗೆ ಇನ್ನೂ ಹೆಸರಿಡದ ಎರಡು ಚಿತ್ರ ಒಪ್ಪಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.