ಅಂಜಲಿ ಕೇರ್‌ ಆಫ್ ಮನೋರಥ


Team Udayavani, Sep 6, 2018, 12:56 PM IST

57.jpg

ಸಾಫ್ಟ್ವೇರ್‌ ಕ್ಷೇತ್ರದಿಂದ ಸಿನಿಮಾರಂಗಕ್ಕೆ ಬಂದವರ ಸಂಖ್ಯೆಗೇನೂ ಕಮ್ಮಿಯಿಲ್ಲ. ಅಲ್ಲಿಂದ ಬಂದವರೀಗ ನಿರ್ದೇಶನ, ನಿರ್ಮಾಣ, ನಟನೆ ಹೀಗೆ ಹಲವು ವಿಭಾಗದಲ್ಲಿ ತೊಡಗಿಸಿಕೊಂಡಿದ್ದಾರೆ. ಆ ಸಾಲಿಗೆ ಮತ್ತೂಬ್ಬ ನಟಿ ಸೇರಿದ್ದಾರೆ. ಹೆಸರು ಅಂಜಲಿ. ಯಾರು ಈ ಅಂಜಲಿ ಅಂದರೆ, “ಮನೋರಥ’ ಚಿತ್ರ ತೋರಿಸಬೇಕು. ಈ ವಾರ ತೆರೆಕಾಣುತ್ತಿರುವ ಚಿತ್ರವಿದು. ಅಂಜಲಿ ಈ ಚಿತ್ರದ ಮೂಲಕ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಕ್ಕೂ ಮುನ್ನ, ಸುಮನ ಕಿತ್ತೂರ್‌ ನಿರ್ದೇಶನದ “ಕಿರಗೂರಿನ ಗಯ್ನಾಳಿಗಳು’ ಚಿತ್ರದಲ್ಲೊಂದು ಪಾತ್ರ ನಿರ್ವಹಿಸಿದ್ದರು. ಅದಾದ ಬಳಿಕ “ರನ್‌ ಆಂಟೋನಿ’ ಚಿತ್ರದಲ್ಲೂ ಕಾಣಿಸಿಕೊಂಡರು. ದಿನೇಶ್‌ ಬಾಬು ನಿರ್ದೇಶನದ “ನನಗಿಷ್ಟ’ ಚಿತ್ರದಲ್ಲಿ ಪಾತ್ರ ಮಾಡಿದ ಬಳಿಕ “ಮನೋರಥ’ ಚಿತ್ರ ಸಿಕ್ಕಿದೆ.

ಚಿತ್ರದ ಬಗ್ಗೆ ಹೇಳುವ ಅಂಜಲಿ, “”ಮನೋರಥ’ ಒಂದು ಸೈಕಲಾಜಿಕಲ್‌ ಸಸ್ಪೆನ್ಸ್‌ ಥ್ರಿಲ್ಲರ್‌ ಚಿತ್ರ. ಮನುಷ್ಯನ ಮನಸ್ಥಿತಿ ಮೇಲೆ ಸಾಗುವ ಚಿತ್ರವಿದು. ಮಾನಸಿಕ ದೌರ್ಬಲ್ಯ ಇರುವ ವ್ಯಕ್ತಿ ಮೇಲೆ ಒಂದಷ್ಟು ಘಟನೆಗಳು ನಡೆಯುತ್ತವೆ. ಒಂದು ಫೋಬಿಯಾ ಖಾಯಿಲೆ ಸುತ್ತ ನಡೆಯೋ ಕಥೆಯೇ ಚಿತ್ರದ ಜೀವಾಳ. ಇದೊಂದು ಪ್ರಯೋಗಾತ್ಮಕ ಚಿತ್ರ. ಇಲ್ಲಿ ಎರಡು ಶೇಡ್‌ ಪಾತ್ರಗಳಿವೆ. ಒಂದು ಡಾಕ್ಟರ್‌ ಪಾತ್ರ. ಅದು ಪಾಸಿಟಿವ್‌ ಆಗಿರುತ್ತೆ. ಇನ್ನೊಂದು ನೆಗೆಟಿವ್‌ ಪಾತ್ರ. ಅದನ್ನು ಚಿತ್ರಮಂದಿರದಲ್ಲೇ ನೋಡಬೇಕು ಎಂಬುದು ಅಂಜಲಿ ಮಾತು.

ಅಂಜಲಿ ಮೂರನೇ ತರಗತಿ ಓದುವಾಗಲೇ ಭರನಾಟ್ಯ ಕಲಿತವರು. ವಿದ್ವತ್‌ ಕೂಡ ಆಗಿದೆ. ಎಂಜಿನಿಯರಿಂಗ್‌ ಮುಗಿಸಿ, ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಂಜಲಿಗೆ, ಅದೇಕೋ ಸಾಫ್ಟ್ವೇರ್‌ ಕ್ಷೇತ್ರ ಬೇಡವಾಗಿ, ಸಿನಿಮಾ ಕಡೆ ವಾಲಿದ್ದಾರೆ. ಅದಕ್ಕೂ ಮುನ್ನ, ರಂಗಭೂಮಿಗೆ ಕಾಲಿಟ್ಟು, ಸಾತ್ವಿಕ ರಂಗಪಯಣ ತಂಡದಲ್ಲಿ ಹಲವು ನಾಟಕ ಪ್ರದರ್ಶನ ಮಾಡಿದ್ದಾರೆ. ಆ ಬಳಿಕ ಒಂದಷ್ಟು ಕಾರ್ಪೋರೇಟ್‌ ಇವೆಂಟ್‌ಗಳಿಗೆ ನಿರೂಪಣೆ ಮಾಡಿಕೊಂಡು, ಕಿರುತೆರೆಯಲ್ಲೂ ರಿಯಾಲಿಟಿ ಶೋ ನಡೆಸಿಕೊಟ್ಟಿದ್ದಾರೆ. ಎರಡು ವರ್ಷದ ಅನುಭವ ಪಡೆದ ಅಂಜಲಿಗೆ ಈಗ ಮೊದಲ ಸಲ ನಾಯಕಿ ಆಗುವ ಅವಕಾಶ ಸಿಕ್ಕಿದೆ. ಇದೊಂದು ಗುರುತಿಸಿಕೊಳ್ಳುವ ಚಿತ್ರವಾಗುತ್ತೆ ಎಂಬ ನಂಬಿಕೆ ಇಟ್ಟುಕೊಂಡಿದ್ದಾರೆ. ಈ ಚಿತ್ರಕ್ಕೆ ಪ್ರಸನ್ನಕುಮಾರ್‌ ನಿರ್ದೇಶಕರು. ರಾಜ್‌ಚರಣ್‌ ನಾಯಕರಾಗಿದ್ದಾರೆ. ಚಂದ್ರು ಓಬಯ್ಯ ಸಂಗೀತವಿದೆ. ಮುರಳಿ ಅವರ ಛಾಯಾಗ್ರಹಣವಿದೆ. ಸದ್ಯಕ್ಕೆ ಅಂಜಲಿ “ಸ್ವತ್ಛ ಕರ್ನಾಟಕ’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅದರೊಂದಿಗೆ ಇನ್ನೂ ಹೆಸರಿಡದ ಎರಡು ಚಿತ್ರ ಒಪ್ಪಿದ್ದಾರೆ.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.