ನಾವು ಬೇರೆ ಮನೇಲಿದ್ದರೂ ಮನಸ್ಸು ಒಂದೇ


Team Udayavani, Sep 8, 2018, 11:19 AM IST

shivanna.jpg

ಶಿವರಾಜಕುಮಾರ್‌ ತಮ್ಮ ಚಿತ್ರಗಳ ಬಗ್ಗೆ, ನಡೆದು ಬಂದ ಹಾದಿಯ ಬಗ್ಗೆ ಸಾಕಷ್ಟು ಬಾರಿ ಮಾತನಾಡಿದ್ದಾರೆ. ಆದರೆ, ಬಾಲ್ಯದ ಬಗ್ಗೆ ಮತ್ತು ಶಾಲೆಯ ರಜಾ ದಿನಗಳ ಬಗ್ಗೆ ಅವರು ಮಾತನಾಡಿದ್ದು ಕಡಿಮೆಯೇ. ಈಗ ಮೊದಲ ಬಾರಿಗೆ ಅವರು ಮನಬಿಚ್ಚಿ, ತಮ್ಮ ಬಾಲ್ಯದ ದಿನಗಳ ಬಗ್ಗೆ ಮೆಲುಕು ಹಾಕಿದ್ದಾರೆ. ಅದಕ್ಕೆ ವೇದಿಕೆ ಮಾಡಿಕೊಟ್ಟಿದ್ದು ವಿನಯ್‌ ರಾಜಕುಮಾರ್‌ ಅವರ ಹೊಸ ಚಿತ್ರ “ಗ್ರಾಮಾಯಣ’. ದೇವನೂರು ಚಂದ್ರು ನಿರ್ದೇಶನದ “ಗ್ರಾಮಾಯಣ’ ಚಿತ್ರದ ಟೀಸರ್‌ ಬಿಡುಗಡೆ ಸಮಾರಂಭ ಗುರುವಾರ ಸಂಜೆ ನಡೆಯಿತು.

ಟೀಸರ್‌ ಬಿಡುಗಡೆ ಮಾಡಿ ಚಿತ್ರ ತಂಡಕ್ಕೆ ಶುಭ ಹಾರೈಸುವುದಕ್ಕೆ ಶಿವರಾಜಕುಮಾರ್‌, ರಾಘವೇಂದ್ರ ರಾಜಕುಮಾರ್‌ ಮತ್ತು ಪುನೀತ್‌ ರಾಜಕುಮಾರ್‌ ಬಂದಿದ್ದರು. “ಗ್ರಾಮಾಯಣ’ ಚಿತ್ರದ ಪೋಸ್ಟರ್‌ ನೋಡಿದರೆ, ನಿರ್ದೇಶಕ ಸೂರಿ ಅವರ ಪೇಂಟಿಂಗ್‌ ನೆನಪಾಗುತ್ತದೆ ಎಂದು ಹೇಳಿದ ಶಿವರಾಜಕುಮಾರ್‌, ತಮ್ಮ ಗ್ರಾಮದಲ್ಲಿ ಕಳೆದ ಬಾಲ್ಯದ ದಿನಗಳನ್ನು ನೆನಪಿಸಿಕೊಂಡರು. “ಬಾಲ್ಯದ ಸಾಕಷ್ಟು ದಿನಗಳನ್ನು ಹಳ್ಳಿಯಲ್ಲಿ ಕಳೆದಿದ್ದೇನೆ. ಪರೀಕ್ಷೆ ಮುಗಿಯಿತು ಎಂದರೆ, ಅಂಬಾಸಿಡರ್‌ ಕಾರಿನಲ್ಲಿ 25 ಮಕ್ಕಳು ಒಟ್ಟಿಗೆ ಗಾಜನೂರಿಗೆ ಹೋಗುತ್ತಿದ್ದೆವು.

ಯಲ್ಲಪ್ಪ ಅಂತ ಡ್ರೈವರ್‌ವೊಬ್ಬರಿದ್ದರು. ಮೈಸೂರಿನಲ್ಲಿ ಬಿರಿಯಾನಿ ಕಟ್ಟಿಸಿಕೊಂಡು, ನಂಜನಗೂಡಿಯ ಹೊಳೆಯ ದಡದಲ್ಲಿ ಊಟ ಮಾಡಿ, ಊರಿಗೆ ಹೋದವೆಂದರೆ, ಅಲ್ಲಿಂದ ಆಟ ಶುರು. ಎಲ್ಲೇ ಹೋದರೂ ಜನ ನನಗೆ ಬಹಳ ಎನರ್ಜಿ ಇದೆ ಎನ್ನುತ್ತಾರೆ. ಆ ಎನರ್ಜಿಗೆ ಕಾರಣ ನಮ್ಮ ಹಳ್ಳಿಯ ವಾತಾವರಣ. ನಾನು ಈಜ ಕಲಿತಿದ್ದೇ ಅಲ್ಲಿ. ಒಂದು ದಿನ ಯಾರೋ ಒಬ್ಬರು ನನ್ನನ್ನು ನೀರಿಗೆ ತಳ್ಳಿಬಿಟ್ಟಿದ್ದರು. ನನಗೆ ಗಾಬರಿಯಾಗಿಬಿಟ್ಟಿತು. “ಕಾಲು ಬಡಿ, ಈಜು ಬರತ್ತೆ …’ ಅಂದ. ಕಾಲು ಆಡಿಸ್ತಾ ಆಡಿಸ್ತಾ ಈಜು ಕಲಿತಿದ್ದೆ.

ಮೀನು ಹಿಡೀತಿದ್ದಿದ್ದು, ಮರಕೋತಿ ಆಟ ಆಡಿದ್ದು, ಮಾವಿನಕಾಯಿ ಕದ್ದಿದ್ದು, ಅಪ್ಪಾಜಿ ಹೊಡೆದಿದ್ದು … ಇವೆಲ್ಲಾ ಮರೆಯೋಕೆ ಸಾಧ್ಯವಿಲ್ಲ. ಎಲ್ಲೋ ಊಟ ಮಾಡ್ತಿದ್ವಿ, ಎಲ್ಲೋ ಮಲಗುತ್ತಿದ್ವಿ, ಯಾರೂ ನಮ್ಮನ್ನ ತಡೀರಿತಲಿಲ್ಲ. ಈಗಲೂ ನನಗೆ ಸಾವಿರ ಪ್ರಾಬ್ಲಿಮ್‌ಗಳಿದ್ದರೂ, ಎಲ್ಲಿ ಮಲಗಿದರೂ ನಿದ್ದೆ ಬರುತ್ತೆ. ಇದೆಲ್ಲಾ ಕಲಿಸಿದ್ದು ನನ್ನೂರು. ಈಗಲೂ ನನಗೆ ಗಾಜನೂರು ಅಂದ್ರೆ ಇಷ್ಟ’ ಎಂದು ನೆನಪಿಸಿಕೊಂಡರು ಶಿವರಾಜಕುಮಾರ್‌. ತಮ್ಮ ಮಾತನ್ನು ಮುಂದುವರೆಸಿದ ಶಿವರಾಜಕುಮಾರ್‌, “ನನಗೂ ಅಪ್ಪುಗೂ 13 ವರ್ಷ ವ್ಯತ್ಯಾಸ.

ಅವನ ಯಶಸ್ಸಿಗೆ ಯಾವತ್ತೂ ಹೊಟ್ಟೆಕಿಚ್ಚು ಪಟ್ಟಿಲ್ಲ. ಚಿಕ್ಕ ವಯಸ್ಸಿನಿಂದಲೂ ಅವನ ಟ್ಯಾಲೆಂಟ್‌ ನೋಡಿಕೊಂಡು ಬಂದ್ವಿ. ನಾವೆಲ್ಲಾ ಬೇರೆಬೇರೆ ಮನೆಯಲ್ಲಿದ್ದರೂ ನಮ್ಮ ಮನಸ್ಸೆಲ್ಲಾ ಒಂದೇ. ಭಿನ್ನಾಭಿಪ್ರಾಯಗಳು ಸಹಜ. ಅದು ಸಹಜವಾಗಿಯೇ ಇರುತ್ತದೆ ಮತ್ತು ಇರಲೇಬೇಕು. ಹಾಗಂತ ನಾವು ಮೂರು ಜನ ಯಾವತ್ತೂ ಕಿತ್ತಾಡಿಲ್ಲ. ನಾವ್ಯಾವತ್ತೂ ಒಂದೇ. ಅದಢ ಜೀವನ. ಪೋಸ್ಟರ್‌ನಲ್ಲಿದ್ದ ಫೋಟೋ ನೋಡಿ, ಅವೆಲ್ಲಾ ನೆನಪಾಯಿತು. ಇವತ್ತಿಗೂ ನನ್ನ ಬಾಲ್ಯದ ಫೋಟೋ ನೋಡಿದ್ರೆ, ನನಗೆ ಅಳು ಬರತ್ತೆ. ಆ ಫೋಟೋ ನೋಡಿದರೆ ಎಷ್ಟು ಬೇಗ ವಯಸ್ಸಾಯ್ತಲ್ಲ ಅನಿಸುತ್ತೆ’ ಎಂದರು ಶಿವರಾಜಕುಮಾರ್‌.

ಇನ್ನು ವಿನಯ್‌ ರಾಜಕುಮಾರ್‌ ಕುರಿತು ಮಾತನಾಡಿದ ಅವರು, “ವಿನು ಬೇರೆಬೇರೆ ತರಹದ ಸಿನಿಮಾಗಳನ್ನ ಮಾಡ್ತಾ ಇದ್ದಾನೆ. ಕೆಲವು ಚಿತ್ರಗಳು ಕಡಿಮೆ ತಲುಪಬಹುದು, ಅದನ್ನ ಸೋಲು ಅಂತಂದುಕೊಳ್ಳಬಾರದು. ಅದು ಸೋಲಲ್ಲ. ಸೋಲಲ್ಲೂ ಗೆಲವನ್ನು ಕಾಣಬೇಕು. ಡಿಪ್ರಸ್‌ ಆಗಬೇಡ ಅಂತ ಹೇಳುತ್ತಿರುತ್ತೀನಿ. ಅವನಪ್ಪ ನಟ. ತಾತ, ದೊಡ್ಡಪ್ಪ, ಚಿಕ್ಕಪ್ಪ ಎಲ್ಲರೂ ಕಲಾವಿದರೇ. ನನಗೆ 100 ಪರ್ಸೆಂಟ್‌ ನಂಬಿಕೆ ಇದೆ, ಅವನು ತುಂಬಾ ಹೆಸರು ಮಾಡುತ್ತಾನೆ ಅಂತ. ಈ ಚಿತ್ರದ ಹೆಸರು ಬಹಳ ಚೆನ್ನಾಗಿದೆ’ ಎಂದು ಶಿವರಾಜಕುಮಾರ್‌ ಹೇಳಿದರು.

* ನಾವು ಬೇರೆ ಮನೆಯಲ್ಲಿದ್ದರೂ ಮನಸ್ಸು ಒಂದೇ
* ಭಿನ್ನಾಭಿಪ್ರಾಯ ಸಹಜ; ಹಾಗಂತ ಯಾವತ್ತೂ ಕಾಡಿಲ್ಲ
* ನಾವು ಸೋಲಲ್ಲೂ ಗೆಲುವನ್ನ ಕಾಣಬೇಕು
* ಅವನಪ್ಪ, ತಾತ, ದೊಡ್ಡಪ್ಪ, ಚಿಕ್ಕಪ್ಪ ಎಲ್ಲರೂ ಕಲಾವಿದರೇ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.