ವರದಿಯಿಂದ ಹೊಳೆದ ಕಥೆ


Team Udayavani, Sep 9, 2018, 11:18 AM IST

attayya-versus-handi-kayolu.jpg

ದಿನಪತ್ರಿಕೆಗಳಲ್ಲಿ ಬರುವ ಸುದ್ದಿಗಳು ಹಲವು ಚಿತ್ರಗಳಿಗೆ ಸ್ಫೂರ್ತಿಯಾಗಿವೆ. ಆ ವರದಿಗಳನ್ನು ಮೂಲವಾಗಿಟ್ಟುಕೊಂಡು, ಕಥೆ ಮಾಡಿ, ಚಿತ್ರ ಮಾಡಿದವರ ಸಂಖ್ಯೆ ಸಾಕಷ್ಟಿದೆ. ಈಗ ಅದೇ ಸಾಲಿಗೆ ಲೋಕೇಂದ್ರ ಸೂರ್ಯ ಸಹ ಸೇರುತ್ತಾರೆ. ಕೆಲವು ವರ್ಷಗಳ ಹಿಂದೆ ಮಳವಳ್ಳಿಯಲ್ಲಿ ನಡೆದ ಘಟನೆಯೊಂದರ ವರದಿಯನ್ನು ಅವರು ದಿನಪತ್ರಿಕೆಯೊಂದರಲ್ಲಿ ಓದಿದ್ದಾರೆ. ಆ ವರದಿ ಅವರ ಆಸಕ್ತಿ ಕೆರಳಿಸಿದೆ.

ಕೊನೆಗೆ ಮಳವಳ್ಳಿಯ ತಮ್ಮ ಪೊಲೀಸ್‌ ಮಿತ್ರರಾದ ಪ್ರಭು ಮತ್ತು ರಿಯಾಜ್‌ ಅವರನ್ನು ಸಂಪರ್ಕಿಸಿದ್ದಾರೆ. ಅವರಿಬ್ಬರು ಹೆಚ್ಚಿನ ಮಾಹಿತಿಗಾಗಿ ಲೋಕೇಂದ್ರ ಅವರನ್ನು  ಸರ್ಕಲ್‌ ಇನ್‌ಸ್ಪೆಕ್ಟರ್‌ ಶ್ರೀಕಾಂತ್‌ ಬಳಿ ಕಳುಹಿಸಿದ್ದಾರೆ. ಆ ಕೇಸ್‌ನ ಬಗ್ಗೆ ತಿಳಿದುಕೊಳ್ಳುತ್ತಿದ್ದಂತೆಯೇ, ಲೋಕೇಂದ್ರ ತಲೆಯಲ್ಲೊಂದು ಕಥೆ ಹೊಳೆದಿದೆ. ಆ ಕಥೆಯೇ ಈಗ “ಅಟ್ಟಯ್ಯ ವರ್ಸಸ್‌ ಹಂದಿ ಕಾಯೋಳು’ ಎಂಬ ಚಿತ್ರವಾಗಿದೆ. “ಅಟ್ಟಯ್ಯ ವರ್ಸಸ್‌ ಹಂದಿ ಕಾಯೋಳು’ ಚಿತ್ರವು ಕಳೆದ ವರ್ಷ ಮೇನಲ್ಲಿ ಪ್ರಾರಂಭವಾಯಿತಂತೆ.

ಇದೀಗ ಸೆನ್ಸಾರ್‌ ಹಂತದಲ್ಲಿರುವ ಈ ಚಿತ್ರದ ಹಾಡುಗಳು ಮತ್ತು ಟೀಸರ್‌ ಮಂಗಳವಾರ ಬಿಡುಗಡೆಯಾಗಿದೆ. ಮಳವಳ್ಳಿಯಲ್ಲಿ ನಡೆದ ಘಟನೆಯೊಂದನ್ನು ಬೇಸ್‌ ಮಾಡಿ, ಕಥೆ ಮಾಡಿರುವುದಾಗಿ ಹೇಳಿಕೊಳ್ಳುವ ಲೋಕೇಂದ್ರ, “ಈ ಕೇಸ್‌ನ ವಿಚಾರವಾಗಿ ಸರ್ಕಲ್‌ ಇನ್‌ಸ್ಪೆಕ್ಟರ್‌ ಅವರ ಹತ್ತಿರ ಮಾತಾಡಿದೆ. ಅವರು ಹೇಳಿದ ವಿಷಯ ಇಟ್ಟುಕೊಂಡು, ಒಂದಿಷ್ಟು ಪಾತ್ರಗಳನ್ನು ಸೃಷ್ಟಿಸಿ, ಕಥೆ ವಿಸ್ತರಣೆ ಮಾಡಿ ಈ ಚಿತ್ರ ಮಾಡಿದ್ದೇನೆ. ಈ ಚಿತ್ರದಲ್ಲಿ ಹಲವು ವಿಷಯಗಳಿವೆ.

ಮೂವರು ಅಮಾಯಕರು ಒಂದು ಕೊಲೆ ಕೇಸ್‌ನಲ್ಲಿ ಫಿಟ್‌ ಆದಾಗ, ಅವರ ಮೇಲೆ ಯಾವ ರೀತಿ ಪರಿಣಾಮವಾಗುತ್ತದೆ ಎಂಬ ವಿಷಯದ ಜೊತೆಗೆ ಇನ್ನೊಂದಿಷ್ಟು ವಿಷಯಗಳನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಿದ್ದೇನೆ’ ಎನ್ನುತ್ತಾರೆ ಲೋಕೇಂದ್ರ ಸೂರ್ಯ. ಈ ಚಿತ್ರವನ್ನು ಬೆಂಗಳೂರು, ಕನಕಪುರ, ಕೊಳ್ಳೇಗಾಲ, ಬೆಳಕವಾಡಿ, ಮಹದೇಶ್ವರ ಬೆಟ್ಟ ಮುಂತಾದ ಕಡೆ ಅವರು ಚಿತ್ರೀಕರಣ ಮಾಡಿದ್ದಾರೆ. “ಅಟ್ಟಯ್ಯ ವರ್ಸಸ್‌ ಹಂದಿ ಕಾಯೋಳು’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡುವುದರ ಜೊತೆಗೆ ಒಂದು ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ ಲೋಕೇಂದ್ರ.

ಅವರ ಜೊತೆಗೆ ಎ. ಮಹದೇವಯ್ಯ, ಅರ್ಜುನ ಕೃಷ್ಣ, ಚೈತ್ರ ಎಸ್‌.ಕೆ. ವಿನಯ್‌ ಕೂರ್ಗ್‌, ತಾತಗುಣಿ ಕೆಂಪೇಗೌಡ, ಎಂ.ಸಿ. ನಾಗರಾಜ್‌ ಮುಂತಾದ ಹಲವರು ನಟಿಸಿದ್ದಾರೆ. ವಿಜಯ್‌ ಚಂದ್ರ ಛಾಯಾಗ್ರಹಣ ಮಾಡಿದರೆ, ಯಶವಂತ್‌ ಭೂಪತಿ ಸಂಗೀತ ಸಂಯೋಜಿಸಿದ್ದಾರೆ. ಇವರೆಲ್ಲರೂ ಹೊಸಬರು ಎನ್ನುವುದು ವಿಶೇಷ. ಚಿತ್ರದಲ್ಲಿ ಎರಡು ಹಾಡುಗಳಿದ್ದು, “ಸಂಭವಾಮಿ ಯುಗೇ ಯುಗೇ, ಒಳ್ಳೇವ್ರಗೆಲ್ಲಾ ಹೊಗೆ ಹೊಗೆ …’ ಎಂಬ ಹಾಡನ್ನು ವಿಜಯಪ್ರಕಾಶ್‌ ಹಾಡಿದ್ದಾರೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.