ಅರು ಈಗ ಫೈಟರ್‌ ಶಿವ


Team Udayavani, Sep 9, 2018, 11:19 AM IST

aru.jpg

“ಮುದ್ದು ಮನಸೇ’ ಸಿನಿಮಾ ನಿರ್ದೇಶಿಸಿದ ಅನಂತ್‌ ಶೈನ್‌, “ವಿರಾಟ್‌ ಪರ್ವ’ ಎಂಬ ಸಿನಿಮಾ ಮಾಡುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರಕ್ಕೆ ಹೊಸ ಸೇರ್ಪಡೆಯಾಗಿದೆ. ಅದು ಅರು ಗೌಡ. ಯಾವ ಅರು ಗೌಡ ಎಂದು ಕೇಳಿದರೆ “ಮುದ್ದು ಮನಸೇ’, “3 ಗಂಟೆ 30 ದಿನ 30 ಸೆಕೆಂಡ್‌’ ಸಿನಿಮಾಗಳಲ್ಲಿ ನಾಯಕರಾಗಿ ನಟಿಸಿರುವ ಅರುಗೌಡ ಈಗ “ವಿರಾಟ್‌ ಪರ್ವ’ ತಂಡ ಸೇರಿಕೊಂಡಿದ್ದಾರೆ. ಹಾಗಂತ ಅವರು ಈ ಚಿತ್ರದ ನಾಯಕರಲ್ಲ.

ಮೇಲ್ನೋಟಕ್ಕೆ ನೆಗೆಟಿವ್‌ ಶೇಡ್‌ನ‌ಂತೆ ಕಾಣಿಸಿಕೊಳ್ಳುವ ಅವರ ಪಾತ್ರ ಇಡೀ ಸಿನಿಮಾದುದ್ದಕ್ಕೂ ಸಾಗಿಬರಲಿದೆಯಂತೆ. ಈಗಾಗಲೇ ಅರುಣ್‌ ಅವರ ಭಾಗದ ಚಿತ್ರೀಕರಣ ನಡೆದಿದ್ದು, ಸಖತ್‌ ರಗಡ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರಿಲ್ಲಿ ಕೋಲಾರ ಹಿನ್ನೆಲೆಯಲ್ಲಿ ಅವರ ಪಾತ್ರ ಸಾಗಿಬರಲಿದ್ದು, ಫೈಟರ್‌ ಶಿವ ಎಂಬ ಪಾತ್ರ ಮಾಡುತ್ತಿದ್ದಾರೆ. “ಅರುಣ್‌ ಅವರು ಚಿತ್ರದಲ್ಲಿ ಒಂದು ವಿಶೇಷ ಪಾತ್ರ ಮಾಡುತ್ತಿದ್ದಾರೆ.

ಈ ಚಿತ್ರದಲ್ಲಿ ಅವರ ಲುಕ್‌, ಮ್ಯಾನರೀಸಂ ಎಲ್ಲವೂ ಸಂಪೂರ್ಣ ಭಿನ್ನವಾಗಿದ್ದು, ಹೊಸ ಬಗೆಯಲ್ಲಿ ತೋರಿಸಲು ಪ್ರಯತ್ನಿಸಿದ್ದೇವೆ. ಅವರ ಈ ಹಿಂದಿನ ಯಾವ ಸಿನಿಮಾಗಳ ಶೇಡ್‌ಗಳು ಕೂಡಾ ಈ ಪಾತ್ರದಲ್ಲಿ ಇರುವುದಿಲ್ಲ. ಕಥೆಗೆ ಪ್ರಮುಖ ಟ್ವಿಸ್ಟ್‌ ಕೊಡುವಲ್ಲಿ ಅವರ ಪಾತ್ರ ಮಹತ್ವದ್ದಾಗಿದ್ದು, ಈಗಾಗಲೇ ಚಿತ್ರೀಕರಣ ಮುಗಿದಿದೆ’ ಎಂದು ವಿವರ ಕೊಡುತ್ತಾರೆ ನಿರ್ದೇಶಕ ಅನಂತ್‌ ಶೈನ್‌. ಈ ಹಿಂದೆ ಅನಂತ್‌ ಶೈನ್‌ ಅವರ “ಮುದ್ದು ಮನಸೇ’ ಚಿತ್ರದಲ್ಲೂ ಅರು ಗೌಡ ನಾಯಕರಾಗಿ ನಟಿಸಿದ್ದರು. 

ಇನ್ನು ಅನಂತ್‌ ಶೈನ್‌ “ವಿರಾಟ್‌ ಪರ್ವ’ ಚಿತ್ರದಲ್ಲಿ ರೆಗ್ಯುಲರ್‌ ಪ್ಯಾಟರ್ನ್ ಬಿಟ್ಟು ಈ ಬಾರಿ ಹೊಸ ಜಾನರ್‌ನತ್ತ ವಾಲಿದ್ದು,  ಇಂದಿನ ಟ್ರೆಂಡ್‌ಗೆ ಒಗ್ಗುವಂತಹ ಕಥೆ ಮಾಡಿಕೊಂಡಿದ್ದಾರೆ. ವಿಭಿನ್ನ ಮನಸ್ಥಿತಿಯ ಮೂವರು ಹುಡುಗರ ಸುತ್ತ ಇಡೀ ಸಿನಿಮಾ ಸುತ್ತಲಿದ್ದು, ಹೊಸ ಬಗೆಯ ಕಥೆಯಾಗಿ ಪ್ರೇಕ್ಷಕರಿಗೆ ಇಷ್ಟವಾಗುವ ವಿಶ್ವಾಸ ಅನಂತ್‌ ಶೈನ್‌ ಅವರಿಗಿದೆ. ಅರು ಗೌಡ ಅಲ್ಲದೇ, ಚಿತ್ರದಲ್ಲಿ ಆಭಿನಯ ಪ್ರಮುಖ ಪಾತ್ರ ಮಾಡಿದ್ದಾರೆ.

ಮಾತು ಬಾರದ ಹಾಗೂ ಶ್ರವಣ ದೋಷವಿರುವ ಅಭಿನಯ “ಕಿಚ್ಚು’ ಸಿನಿಮಾದಲ್ಲಿ ತಮ್ಮ ನಿಜ ಜೀವನದ ಪಾತ್ರವನ್ನೇ ಮಾಡಿದ್ದರು. ಆದರೆ, “ವಿರಾಟ ಪರ್ವ’ ಸಿನಿಮಾದಲ್ಲಿ ತಮ್ಮ ನಿಜ ಜೀವನಕ್ಕೆ ವಿರುದ್ಧವಾದ, ಸವಾಲಿನ ಪಾತ್ರ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿ ಕಾಣಿಸಿಕೊಳ್ಳುತ್ತಿದ್ದು, ಸಿನಿಮಾದುದ್ದಕ್ಕೂ ಪಟಪಟನೇ ಮಾತನಾಡುವ ಪಾತ್ರ ಸಿಕ್ಕಿದೆ. ಯಶವಂತ್‌ ಶೆಟ್ಟಿ ಕೂಡಾ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರವನ್ನು ಎಸ್‌.ಆರ್‌.ಮೀಡಿಯಾ ಪ್ರೊಡಕ್ಷನ್ಸ್‌ನಡಿ ಸುನೀಲ್‌ ನಿರ್ಮಿಸುತ್ತಿದ್ದಾರೆ. 

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.