ಯಜಮಾನದಲ್ಲಿ ಅಪ್ಪ-ಮಗ


Team Udayavani, Sep 11, 2018, 11:29 AM IST

darshan.jpg

ದರ್ಶನ್‌ ಅಭಿನಯದ “ಯಜಮಾನ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಸದ್ಯ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಬಹುತೇಕ ಮಾತಿನ ಭಾಗದ ಚಿತ್ರೀಕರಣ ಪೂರ್ಣಗೊಂಡಿದೆ. ಹಾಡುಗಳ ಚಿತ್ರೀಕರಣವಷ್ಟೇ ಬಾಕಿ ಇದೆ. ಈಗ “ಯಜಮಾನ’ ಚಿತ್ರದ ಸೆಟ್‌ನಿಂದ ಸುದ್ದಿಯೊಂದು ಬಂದಿದೆ. ಅದು ದರ್ಶನ್‌ ಪುತ್ರ ವಿನೀಶ್‌ ಕುರಿತಾಗಿ. “ಯಜಮಾನ’ ಚಿತ್ರದಲ್ಲಿ ದರ್ಶನ್‌ ಪುತ್ರ ವಿನೀಶ್‌ ಕೂಡಾ ಕಾಣಿಸಿಕೊಂಡಿದ್ದಾರೆ. ಈ ಮೂಲಕ ತಂದೆಯೊಂದಿಗೆ ಎರಡನೇ ಬಾರಿ ತೆರೆಹಂಚಿಕೊಳ್ಳುತ್ತಿದ್ದಾರೆ ವಿನೀಶ್‌.

ಈ ಹಿಂದೆ  “ಐರಾವತ’ ಚಿತ್ರದ ಕ್ಲೈಮ್ಯಾಕ್ಸ್‌ ದೃಶ್ಯವೊಂದರಲ್ಲಿ ವಿನೀಶ್‌ ಪೊಲೀಸ್‌ ಯುನಿಫಾರಂನಲ್ಲಿ ಕಾಣಿಸಿಕೊಂಡಿದ್ದರು. ಅಪ್ಪ-ಮಗನನ್ನು ತೆರೆಮೇಲೆ ಕಂಡ ದರ್ಶನ್‌ ಅಭಿಮಾನಿಗಳು ಥ್ರಿಲ್‌ ಆಗಿದ್ದರು. ಈಗ “ಯಜಮಾನ’ದಲ್ಲೂ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಹಾಡೊಂದರಲ್ಲಿ ವಿನೀಶ್‌ ಹಾಗೂ ದರ್ಶನ್‌ ತೆರೆಹಂಚಿಕೊಳ್ಳಲಿದ್ದು, ಈಗಾಗಲೇ ಚಿತ್ರೀಕರಣ ನಡೆದಿದೆ. ಶನಿವಾರ ನಡೆದ ಚಿತ್ರೀಕರಣದಲ್ಲಿ ವಿನೀಶ್‌, ಅಪ್ಪನ ಜೊತೆ ಖುಷಿಯಿಂದ ತೆರೆಹಂಚಿಕೊಂಡಿದ್ದಾರೆ.

ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಕೂಡಾ ಅಪ್ಪ-ಮಗನ ಹಾಡಿನ ಚಿತ್ರೀಕರಣವನ್ನು ಶನಿವಾರ ಕಣ್ತುಂಬಿಕೊಂಡಿದ್ದಾರೆ. ಎಲ್ಲಾ ಓಕೆ, ವಿನೀಶ್‌ ಅವರನ್ನೇ ಹಾಡಿನಲ್ಲಿ ಬಳಸಿಕೊಳ್ಳಲು ಕಾರಣವೇನು ಎಂದು ನೀವು ಕೇಳಿದರೆ ಸದ್ಯಕ್ಕೆ ಅದಕ್ಕೆ ಉತ್ತರವಿಲ್ಲ. ಸಿನಿಮಾ ಬಿಡುಗಡೆವರೆಗೆ ಕಾಯಲೇಬೇಕು. ದರ್ಶನ್‌ ಹಾಗೂ ವಿನೀಶ್‌ ಹಾಡಿನಲ್ಲಿ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಸಂತಸ ತಂದಿರುವುದಂತೂ ಸುಳ್ಳಲ್ಲ. “ಯಜಮಾನ’ ಚಿತ್ರವನ್ನು ಪಿ.ಕುಮಾರ್‌ ನಿರ್ದೇಶಿಸುತ್ತಿದ್ದಾರೆ.

ಈ ಹಿಂದೆ “ವಿಷ್ಣುವರ್ಧನ’, “ಚಾರುಲತಾ’, “ರಾಜ ರಾಜೇಂದ್ರ’ ಸೇರಿದಂತೆ ಹಲವು ಚಿತ್ರಗಳನಮು° ನಿರ್ದೇಶಿಸಿರುವ ಕುಮಾರ್‌ ಈಗ ದರ್ಶನ್‌ಗೆ “ಯಜಮಾನ’ ಮಾಡಿದ್ದಾರೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದು, ಬಿ.ಸುರೇಶ್‌ ಹಾಗೂ ಶೈಲಜಾ ನಾಗ್‌ ಈ ಚಿತ್ರದ ನಿರ್ಮಾಪಕರು. ಈ ನಡುವೆಯೇ ದರ್ಶನ್‌ ಅವರ “ಒಡೆಯ’ ಚಿತ್ರಕ್ಕೂ ಮುಹೂರ್ತ ನಡೆದಿದ್ದು, ಮುಂದಿನ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ. ಎಂ.ಡಿ.ಶ್ರೀಧರ್‌ ನಿರ್ದೇಶನದ ಈ ಚಿತ್ರಕ್ಕೆ ನಾಯಕಿಯ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ. 

ಟಾಪ್ ನ್ಯೂಸ್

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.