ಬಂದ್ಗೆ ಚಿತ್ರರಂಗ ಸಾಥ್
Team Udayavani, Sep 11, 2018, 11:29 AM IST
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ, ಕರೆ ನೀಡಿದ್ದ ಭಾರತ್ ಬಂದ್ಗೆ ಕನ್ನಡ ಚಿತ್ರರಂಗ ಕೂಡ ಬೆಂಬಲ ಸೂಚಿಸಿತ್ತು. ರಾಜ್ಯಾದ್ಯಂತ ಕೆಲವು ಕಡೆ ಚಿತ್ರಮಂದಿರಗಳು ಎರಡು ಪ್ರದರ್ಶನವನ್ನು ಬಂದ್ ಮಾಡುವ ಮೂಲಕ ಬಂದ್ಗೆ ಬೆಂಬಲಿಸಿದ್ದವು. ಚಿತ್ರೀಕರಣ ಕೂಡ ಸಂಪೂರ್ಣ ಸ್ಥಗಿತಗೊಳಿಸುವ ಮೂಲಕ ಇಂಧನ ಬೆಲೆ ಏರಿಕೆಯನ್ನು ವಿರೋಧಿಸಲಾಗಿದೆ.
ಈ ಕುರಿತು “ಉದಯವಾಣಿ’ ಜೊತೆ ಮಾತನಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ, “ಸ್ವತಃ ಚಿತ್ರಮಂದಿರದ ಮಾಲೀಕರು, ಎರಡು ಪ್ರದರ್ಶನಗಳನ್ನು ರದ್ದು ಪಡಿಸುವ ಮೂಲಕ ಬೆಂಬಲ ಸೂಚಿಸಿದ್ದಾರೆ. ಈ ಮೂಲಕ ಅವರು ನಮ್ಮ ಮನವಿಗೆ ಸ್ಪಂದಿಸಿದ್ದಾರೆ. ಅವರಿಗೆ ಮಂಡಳಿ ಪರವಾಗಿ ಧನ್ಯವಾದ ಸಲ್ಲಿಸುತ್ತೇವೆ.
ಬೆಲೆ ಏರಿಕೆಯಿಂದಾಗಿ, ಸಾಮಾನ್ಯ ಜನರಿಗೆ ತೊಂದರೆ ಆಗುತ್ತದೆ. ಈ ಹಿನ್ನೆಲೆಯಲ್ಲಿ ಕರೆ ನೀಡಿದ್ದ ಬಂದ್ಗೆ ಚಿತ್ರರಂಗ ಕೂಡ ಸಾಥ್ ನೀಡಿದೆ. ಎಲ್ಲರಿಗೂ ಒಳ್ಳೆಯದಾಗಬೇಕೆಂಬುದು ನಮ್ಮ ಉದ್ದೇಶವಷ್ಟೇ. ಎಲ್ಲರೂ ಸ್ವಯಂಪ್ರೇರಿತವಾಗಿ ಬಂದ್ಗೆ ಬೆಂಬಲ ಸೂಚಿಸಿರುವುದರಿಂದ ಯಾವುದೇ ಸಮಸ್ಯೆ ಎದುರಾಗಿಲ್ಲ’ ಎಂದು ಮಂಡಳಿ ಅಧ್ಯಕ್ಷರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…