25 ದಿನ ಮುಗಿಸಿದ ಅಯೋಗ್ಯ
Team Udayavani, Sep 11, 2018, 11:29 AM IST
ಸತೀಶ್ ನೀನಾಸಂ ಅಭಿನಯದ “ಅಯೋಗ್ಯ’ ಚಿತ್ರವು ಯಶಸ್ವಿಯಾಗಿ 25 ದಿನಗಳನ್ನು ಮುಗಿಸಿದೆ. 586 ಚಿತ್ರಮಂದಿರಗಳಲ್ಲಿ 25 ದಿನಗಳನ್ನು ಚಿತ್ರ ಪೂರೈಸಿದ್ದು, “ಎಲ್ಲೂ ಅಲ್ಲಾಡಿಲ್ಲ’ ಎಂದು ಖುಷಿಯಿಂದ ಹೇಳಿಕೊಳ್ಳುತ್ತಾರೆ ನಿರ್ದೇಶಕ ಮಹೇಶ್. ಈ 25 ದಿನಗಳು ಪೂರೈಸಿದ ಖುಷಿಯಲ್ಲಿ ಮಹೇಶ್, ಸತೀಶ್ ಮತ್ತು ನಿರ್ಮಾಪಕ ಟಿ.ಆರ್. ಚಂದ್ರಶೇಖರ್ ಅವರು ನರ್ತಕಿ ಚಿತ್ರಮಂದಿರಕ್ಕೆ ಭೇಟಿಕೊಟ್ಟಿದ್ದಾರೆ.
ಈ ಸಂದರ್ಭದಲ್ಲಿ ನೆರೆದಿದ್ದ ನೂರಾರು ಜನರ ಸಮ್ಮುಖದಲ್ಲಿ 25 ಕೆಜಿ ತೂಕದ ಕೇಕ್ ಕಟ್ ಮಾಡಲಾಗಿದೆ. ಚಿತ್ರದ ಇನ್ನೊಂದು ವಿಶೇಷವೆಂದರೆ, ತಮಿಳಿಗೆ ರೀಮೇಕ್ ಹಕ್ಕುಗಳು ಮಾರಾಟವಾಗಿದ್ದು. ಹೌದು, “ಅಯೋಗ್ಯ’ ಚಿತ್ರದ ರೀಮೇಕ್ ಹಕ್ಕುಗಳು 18 ಲಕ್ಷಕ್ಕೆ ಮಾರಾಟವಾಗಿದೆ. ತಮಿಳಿನ ದೊಡ್ಡ ಚಿತ್ರ ನಿರ್ಮಾಣ ಸಂಸ್ಥೆಯೊಂದು ಚಿತ್ರದ ರೀಮೇಕ್ ಹಕ್ಕುಗಳನ್ನು ಕೊಂಡಿದ್ದು, ಅದನ್ನು ತಮಿಳಿನಲ್ಲಿ ನಿರ್ಮಿಸುವುದಕ್ಕೆ ಸಜ್ಜಾಗಿದೆ.
ಇನ್ನು ಆ ಸಂಸ್ಥೆಯ ಬಳಿ ವಿಜಯ್ ಸೇತುಪತಿ ಅವರ ಡೇಟ್ಸ್ ಇದ್ದು, ಚಿತ್ರದಲ್ಲಿ ವಿಜಯ್ ಸೇತುಪತಿ ನಟಿಸುವ ಸಾಧ್ಯತೆ ಇದೆಯಂತೆ. ಮುರಳಿಗೆ ಚಿತ್ರ ಮಾಡುವ ಸಾಧ್ಯತೆ: ಎಲ್ಲಾ ಸರಿ, ಮಹೇಶ್ ಕುಮಾರ್ ಅವರ ಮುಂದಿನ ನಡೆಯೇನು ಎಂದು ಅವರಿಗೆ ಪ್ರಶ್ನೆ ಹಾಕಿದರೆ, ಸದ್ಯದಲ್ಲೇ ಮುಂದಿನ ಚಿತ್ರದ ಬಗ್ಗೆ ತೀರ್ಮಾನವಾಗಲಿದೆ ಎಂದು ಹೇಳುತ್ತಾರೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಧ್ರುವ ಸರ್ಜಾ ಅಭಿನಯದಲ್ಲಿ “ಮದಗಜ’ ಎಂಬ ಚಿತ್ರವನ್ನು ಮಹೇಶ್ ನಿರ್ದೇಶಿಸಬೇಕಿತ್ತು.
ಆದರೆ, “ಪೊಗರು’ ಚಿತ್ರದಲ್ಲಿ ಧ್ರುವ ತೊಡಗಿಸಿಕೊಂಡಿರುವದರಿಂದ ಮತ್ತು ಅದು ಮುಗಿಯುವುದಕ್ಕೆ ಇನ್ನಷ್ಟು ಸಮಯ ಬೇಕಾಗಿರುವುದರಿಂದ, ಧ್ರುವ ಸರ್ಜಾ ಅಭಿನಯದಲ್ಲಿ ಮಹೇಶ್ ನಿರ್ದೇಶಿಸಬೇಕಿದ್ದ ಚಿತ್ರ ಮುಂದಕ್ಕೆ ಹೋಗುವ ಸಾಧ್ಯತೆ ಇದೆ. ಆ ಸಮಯದಲ್ಲಿ ಮುರಳಿ ಅಭಿನಯದಲ್ಲಿ ಚಿತ್ರವನ್ನು ಮಹೇಶ್ ನಿರ್ದೇಶಿಸಲಿದ್ದಾರೆ ಎಂಬ ಮಾತುಗಳು ಗಾಂಧಿನಗರದಲ್ಲಿ ಕೇಳಿ ಬರುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
MUST WATCH
ಹೊಸ ಸೇರ್ಪಡೆ
Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ