ಟ್ರೆಂಡಿಂಗ್‌ನಲ್ಲಿ ಒರಿಜಿನಲ್ “ಏನಮ್ಮಿ ಏನಮ್ಮಿ’ ಸಾಂಗ್: Watch


Team Udayavani, Sep 11, 2018, 4:05 PM IST

ayogya000.jpg

ಸತೀಶ್‌ ನೀನಾಸಂ, ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯದ ಬಹುನಿರೀಕ್ಷಿತ “ಅಯೋಗ್ಯ’ ಚಿತ್ರ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿದ್ದರೆ, ಇತ್ತ ಚಿತ್ರದ “ಏನಮ್ಮಿ ಏನಮ್ಮಿ’ ಒರಿಜಿನಲ್ ವಿಡೀಯೋ ಸಾಂಗ್ ಬಿಡುಗಡೆಯಾಗಿದೆ. ಸದ್ಯ ಯೂಟ್ಯೂಬ್‌ನಲ್ಲಿ ಈ ಹಾಡು ಧೂಳೆಬ್ಬಿಸುತ್ತಿದ್ದು ಟ್ರೆಂಡಿಂಗ್‌ನಲ್ಲಿದೆ.

ಈಗಾಗಲೇ ಚಿತ್ರ ಕೂಡಾ ಚಿತ್ರಮಂದಿರಗಳಲ್ಲಿ 25 ದಿನ ಪೂರೈಸಿ ಮುನ್ನುಗ್ಗುತ್ತಿದ್ದು, ಇದೇ ಸಂತಸದಲ್ಲಿ ಚಿತ್ರತಂಡ “ಏನಮ್ಮಿ ಏನಮ್ಮಿ’ ಹಾಡಿನ ವಿಡಿಯೋ ಕೂಡಾ ಬಿಡುಗಡೆ ಮಾಡಿದೆ. ಸಿನಿಮಾ ಬಿಡುಗಡೆಗೂ ಮುನ್ನವೇ “ಏನಮ್ಮಿ ಏನಮ್ಮಿ’ ಹಾಡು ಎಲ್ಲರ ಬಾಯಲ್ಲೂ ತೇಲಿಬರ್ತಿತ್ತು. ಈ ಹಾಡಿಗೆ ಮನಸೋತು ಅದೆಷ್ಟೋ ಮಂದಿ ಡಬ್ ಸ್ಮ್ಯಾಶ್ ಮಾಡಿದ್ದರು. ಆದರೆ ಸದ್ಯ ಹಾಡಿನ ವಿಡಿಯೋ ಕೂಡಾ ಬಿಡುಗಡೆಯಾಗಿದ್ದು, ಬಿಡುಗಡೆಯಾದ ಮೂರೇ ದಿನಕ್ಕೆ ಯೂಟ್ಯೂಬ್ ನಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಹಿಟ್ಸ್ ಪಡೆದುಕೊಂಡಿದೆ.

ಸಿನಿಮಾ ಯಶಸ್ವಿಯಾಗಿ ಪ್ರದರ್ಶನ ಕಾಣ್ತಿರೋ ಬೆನ್ನಲ್ಲೇ ಯೂಟ್ಯೂಬ್‌ನಲ್ಲೂ ಹಾಡು ಕೂಡಾ ಟ್ರೆಂಡಿಗ್​ನಲ್ಲಿರೋದಕ್ಕೆ ಸಿನಿಮಾ ತಂಡ ಸಂತಸ ವ್ಯಕ್ತಪಡಿಸಿದೆ. ಇನ್ನು ಈ ಹಾಡಿಗೆ ಭರ್ಜರಿ ಚೇತನ್‌ ಸಾಹಿತ್ಯ ಬರೆದಿದ್ದು, ಅರ್ಜುನ್‌ ಜನ್ಯಾ ಸಂಗೀತ ಸಂಯೋಜನೆ, ವಿಜಯ್ ಪ್ರಕಾಶ್​ ಹಾಗೂ ಪಲಕ್​ ಮುಚ್ಚಲ್​ ಕಂಠಸಿರಿಯಲ್ಲಿ ಮೂಡಿಬಂದಿದೆ. ಚಿತ್ರದಲ್ಲಿ ಸಖತ್ ರಗಡ್ ಲುಕ್ ಹಾಗೂ ಗ್ರಾಮ ಪಂಚಾಯ್ತಿ ಸದಸ್ಯನ ಪಾತ್ರದಲ್ಲಿ ಸತೀಶ್‌ ನೀನಾಸಂ ಕಾಣಿಸಿಕೊಂಡಿದ್ದು, ರಚಿತಾ ರಾಮ್‌ ಮೊದಲ ಬಾರಿಗೆ ಹಳ್ಳಿ ಹುಡುಗಿಯಾಗಿ ಮಿಂಚಿದ್ದಾರೆ.

ಖಡಕ್ ವಿಲನ್ ಬಚ್ಚೇಗೌಡನಾಗಿ ರವಿಶಂಕರ್ ನಟಿಸಿದ್ದಾರೆ. ಚಿತ್ರಕ್ಕೆ ಯೋಗರಾಜ್‌ ಭಟ್‌ ಶಿಷ್ಯ ಮಹೇಶ್‌ ಕುಮಾರ್‌ ಕಥೆ ಬರೆದು ನಿರ್ದೇಶಿಸಿದರೆ, ಟಿ.ಆರ್‌. ಚಂದ್ರಶೇಖರ್‌ ಚಿತ್ರವನ್ನು ನಿರ್ಮಿಸಿದ್ದಾರೆ. ಅಲ್ಲದೇ ಶರತ್ ಚಕ್ರವರ್ತಿ ಸಂಭಾಷಣೆ, ಹರಿಕೃಷ್ಣ ಅವರ ಸಂಗೀತ ಚಿತ್ರಕ್ಕಿದ್ದು, ಪ್ರೀತಮ್‌ ತೆಗ್ಗಿನಮನೆ ಛಾಯಾಗ್ರಹಣ ಮಾಡಿದ್ದಾರೆ. ಚಿತ್ರದಲ್ಲಿ ಚಿಕ್ಕಣ್ಣ, ಶಿವರಾಜ್‌ ಕೆ.ಆರ್‌. ಪೇಟೆ, ಸರಿತ, ರವಿಶಂಕರ್‌, ರಂಗಾಯಣ ರಘು, ತಬಲಾ ನಾಣಿ, ಸಾಧು ಕೋಕಿಲ, ಬುಲೆಟ್‌ ಪ್ರಕಾಶ್‌, ಕುರಿ ಪ್ರತಾಪ್‌ ಸೇರಿದಂತೆ ನಟಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.