ಸಮಯ ಬರಲಿ: ಕೊನೆಗೂ ಫೇಸ್ ಬುಕ್ನಲ್ಲೇ ಮೌನ ಮುರಿದ ರಕ್ಷಿತ್ ಶೆಟ್ಟಿ!
Team Udayavani, Sep 11, 2018, 6:30 PM IST
ರಶ್ಮಿಕಾ ಮಂದಣ್ಣ ಹಾಗೂ ತಮ್ಮ ಎಂಗೇಜ್ಮೆಂಟ್ ಬ್ರೇಕಪ್ ವಿಚಾರದ ಬಗ್ಗೆ ಸಂಬಂಧಿಸಿದಂತೆ ಕೊನೆಗೂ ರಕ್ಷಿತ್ ಶೆಟ್ಟಿ ಮೌನ ಮುರಿದಿದ್ದಾರೆ. ಎಲ್ಲರೂ ಆಕೆಯನ್ನು ದೂಷಿಸುವುದನ್ನು ನಾನು ಗಮನಿಸಿದ್ದೇನೆ, ದಯವಿಟ್ಟು ಆಕೆಗೆ ಶಾಂತಿಯಿಂದ ಇರಲು ಬಿಡಿ ಎಂದು ರಕ್ಷಿತ್ ಹೇಳಿದ್ದಾರೆ.
ಅಲ್ಲದೇ, ಫೇಸ್ಬುಕ್ ಸೇರಿದಂತೆ ಸೋಶಿಯಲ್ ಮೀಡಿಯಾದಿಂದ ಬಹಳ ದೂರ ಸರಿದಿದ್ದ ರಕ್ಷಿತ್ ಶೆಟ್ಟಿ, ಈಗ ಮತ್ತೆ ತಮ್ಮ ಫೇಸ್ಬುಕ್ ಪೇಜ್ ಮೂಲಕವೇ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಸದ್ಯ ಹರಿದಾಡುತ್ತಿರುವ ಯಾವುದೇ ಸುದ್ದಿಗಳನ್ನು ನಂಬಬೇಡಿ. ಈ ಕುರಿತು ಸದ್ಯದಲ್ಲೇ ನಾನು ನಿಮಗೇ ಸ್ಪಷ್ಟನೆ ಕೊಡುತ್ತೇನೆ.
ರಶ್ಮಿಕಾ ಬಗ್ಗೆ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ನೆಗೆಟಿವ್ ಕಮೆಂಟ್ಗಳು ಬರುತ್ತಿವೆ. ದಯವಿಟ್ಟು ಅವುಗಳನ್ನು ನಿಲ್ಲಿಸಿ ಎಂದಿದ್ದಾರೆ. ಅಲ್ಲದೇ ಎರಡು ವರ್ಷಗಳಿಂದ ರಶ್ಮಿಕಾ ಅವರನ್ನು ನೋಡುತ್ತಿದ್ದೇನೆ. ನಿಮಗಿಂತ ಹೆಚ್ಚು ಅವರ ಬಗ್ಗೆ ನನಗೆ ಗೊತ್ತು. ದಯವಿಟ್ಟು ಸುಳ್ಳು ಸುದ್ದಿಗಳನ್ನ ಹಬ್ಬಿಸೋದು ಬೇಡ. ಸಮಯ ಬಂದಾಗ ಈ ಕುರಿತು ಎಲ್ಲವೂ ನಿಮಗೆ ಗೊತ್ತಾಗುತ್ತೆ ಎಂದು ರಕ್ಷಿತ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ