ವಿಕ್ಟರಿ-2ನಲ್ಲೂ ಭಟ್ಟರ ಎಣ್ಣೆ ಸಾಂಗ್‌


Team Udayavani, Sep 23, 2018, 12:22 PM IST

victory.jpg

ಯೋಗರಾಜ್‌ ಭಟ್ಟರು ಈವರೆಗೆ ಸಾಕಷ್ಟು ಹಾಡುಗಳನ್ನು ಬರೆದಿದ್ದಾರೆ. ಅದರಲ್ಲೂ ಕುಡಿತದ ಕುರಿತಾಗಿಯೂ ಒಂದಷ್ಟು ಹಾಡುಗಳನ್ನು ಬರೆದಿದ್ದಾರೆ. ಅದರಲ್ಲಿ ಕೆಲವು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿವೆ. ಆ ತರಹ ಸದ್ದು ಮಾಡಿದ ಹಾಡಲ್ಲಿ “ಖಾಲಿ ಕ್ವಾಟ್ರು ಬಾಟ್ಲಿ ಹಂಗೆ ಲೈಫ‌ು’ ಹಾಡು ಕೂಡಾ ಒಂದು. ಶರಣ್‌ ನಾಯಕರಾಗಿರುವ “ವಿಕ್ಟರಿ’ ಚಿತ್ರದ ಈ ಹಾಡು ದೊಡ್ಡ ಮಟ್ಟದಲ್ಲಿ ಹಿಟ್‌ ಆಯಿತು. ಈಗ “ವಿಕ್ಟರಿ-2′ ಬರುತ್ತಿದೆ.

ಸಹಜವಾಗಿಯೇ ಒಂದು ಚಿತ್ರದ ಹಾಡು ಹಿಟ್‌ ಆಗಿರುವಾಗ, ಅದರ ಮುಂದುವರಿದ ಭಾಗದಲ್ಲೂ ಆ ತರಹದ ಹಾಡನ್ನು ಜನ ನಿರೀಕ್ಷಿಸುತ್ತಾರೆ. ಇದನ್ನು ಗಮನದಲ್ಲಿಟ್ಟುಕೊಂಡಿರುವ “ವಿಕ್ಟರಿ-2′ ತಂಡ ಆ ತರಹದ ಒಂದು ಮಾಸ್‌ ಸಾಂಗ್‌ ಅನ್ನು ಚಿತ್ರೀಕರಿಸಿಕೊಂಡಿದೆ. “ನಾನ್‌ ಮನೇಗ್‌ ಹೋಗೋದಿಲ್ಲ..’ ಎಂದು ಆರಂಭವಾಗುವ ಈ ಹಾಡನ್ನು ಯೋಗರಾಜ್‌ ಭಟ್ಟರು ರಚಿಸಿದ್ದಾರೆ.

ಅರ್ಜುನ್‌ ಜನ್ಯಾ ಸಂಗೀತ ನೀಡಿದ್ದು, ವಿಜಯ್‌ ಪ್ರಕಾಶ್‌ ಧ್ವನಿಯಲ್ಲಿ ಈ ಹಾಡು ಮೂಡಿಬಂದಿದೆ. ಕಳೆದ ಬಾರಿಯೂ ಈ ಮೂವರ ಸಮಾಗಮದಲ್ಲಿ ಬಂದ ಹಾಡು ಹಿಟ್‌ ಆಗಿತ್ತು. ಈಗ “ವಿಕ್ಟರಿ-2′ ಅದೇ ನಿರೀಕ್ಷೆಯೊಂದಿಗೆ ಎದುರು ನೋಡುತ್ತಿದೆ. ಕಲರ್‌ಫ‌ುಲ್‌ ಸೆಟ್‌ನಲ್ಲಿ ಈ ಹಾಡನ್ನು ಚಿತ್ರೀಕರಿಸಿದ್ದು, ಶರಣ್‌, ಸಾಧುಕೋಕಿಲ ಸೇರಿದಂತೆ ಅನೇಕರು ಸ್ಟೆಪ್‌ ಹಾಕಿದ್ದಾರೆ. 

“ವಿಕ್ಟರಿ-2′ ಚಿತ್ರವನ್ನು ಹರಿಸಂತೋಷ್‌ ನಿರ್ದೇಶಿಸುತ್ತಿದ್ದು, ತರುಣ್‌ ಶಿವಪ್ಪ ನಿರ್ಮಿಸಿದ್ದಾರೆ. ಈ ಚಿತ್ರದಲ್ಲೂ ರವಿಶಂಕರ್‌ ಪ್ರಮುಖ ಪಾತ್ರ ಮಾಡಿದ್ದಾರೆ. ಜೊತೆಗೆ ಸನ್ನಿವೇಶವೊಂದರಲ್ಲಿ ಶರಣ್‌ ಹಾಗೂ ರವಿಶಂಕರ್‌ ಲೇಡಿ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಬಿಡುಗಡೆಗೊಂಡಿರುವ ಚಿತ್ರದ “ಪ್ಲೀಸ್‌ ಟ್ರಸ್ಟು …’ ಹಾಡು ಹಿಟ್‌ ಆಗಿದ್ದು, ಇದು ಚಿತ್ರತಂಡದ ವಿಶ್ವಾಸ ಹೆಚ್ಚಿಸಿದೆ.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.