ಸೀತಾರಾಮ ಕಲ್ಯಾಣದಲ್ಲಿ ಭಾಗ್ಯಶ್ರೀ, ಸಂಜಯ್‌ ಕಪೂರ್‌


Team Udayavani, Sep 24, 2018, 11:37 AM IST

bhagyashree.jpg

ಕನ್ನಡ ಚಿತ್ರರಂಗಕ್ಕೆ ಬಾಲಿವುಡ್‌ ನಟ, ನಟಿಯರ ಆಗಮನ ಹೊಸದೇನಲ್ಲ. ಈಗಾಗಲೇ ಬಾಲಿವುಡ್‌ನ‌ ಹಲವು ನಟ, ನಟಿಯರು ಕನ್ನಡ ಚಿತ್ರದಲ್ಲಿ ನಟಿಸಿದ್ದಾರೆ. ಈಗಲೂ ನಟಿಸುತ್ತಲೇ ಇದ್ದಾರೆ. ಈಗ ಹೊಸ ಸುದ್ದಿಯೆಂದರೆ, ಬಾಲಿವುಡ್‌ನ‌ ನಟ ಮತ್ತು ನಟಿ ಕನ್ನಡ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಹೌದು, ನಿಖಿಲ್‌ಕುಮಾರ್‌ ಅಭಿನಯದ “ಸೀತಾರಾಮ ಕಲ್ಯಾಣ’ ಚಿತ್ರದ ಕಲಾವಿದರ ಪಟ್ಟಿ ದಿನ ಕಳೆದಂತೆ ದೊಡ್ಡದ್ದಾಗಿ ಬೆಳೆಯುತ್ತಿದೆ.

ಈ ಚಿತ್ರದಲ್ಲಿ ಈಗ ಬಾಲಿವುಡ್‌ ನಟಿ ಭಾಗ್ಯಶ್ರೀ ಹಾಗೂ ಅನಿಲ್‌ ಕಪೂರ್‌ ಸಹೋದರ ಸಂಜಯ್‌ ಕಪೂರ್‌ ಅವರು ಅಭಿನಯಿಸುತ್ತಿದ್ದಾರೆ. ಭಾಗ್ಯಶ್ರೀ ಅವರು ನಿಖಿಲ್‌ಕುಮಾರ್‌ ಅಮ್ಮನಾಗಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಭಾಗ್ಯಶ್ರೀ ಅಂದಾಕ್ಷಣ, ಥಟ್ಟನೆ ನೆನಪಾಗೋದೇ ಸಲ್ಮಾನ್‌ಖಾನ್‌ ಅಭಿನಯದ “ಮೈನೆ ಪ್ಯಾರ್‌ಕಿಯಾ’ ಈ ಚಿತ್ರದ ಯಶಸ್ವಿ ಜೋಡಿಯಾಗಿ ಹೊರಹೊಮ್ಮಿದ್ದ ಭಾಗ್ಯಶ್ರೀ, ಆ ಬಳಿಕ ಸಕ್ಸಸ್‌ಫ‌ುಲ್‌ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು.

ಭಾಗ್ಯಶ್ರೀ ಕನ್ನಡಕ್ಕೆ ಬರುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಶಿವರಾಜ್‌ಕುಮಾರ್‌ ಅಭಿನಯದ “ಅಮ್ಮಾವ್ರ ಗಂಡ’ ಚಿತ್ರದಲ್ಲಿ ನಟಿಸಿದ್ದಾರೆ. ಬಹಳ ವರ್ಷಗಳ ಬಳಿಕ ಕನ್ನಡಕ್ಕೆ ಬರುತ್ತಿರುವ ಭಾಗ್ಯಶ್ರೀ, ನಿಖಿಲ್‌ ಕುಮಾರ್‌ಗೆ ತಾಯಿಯಾಗಿ ನಟಿಸುತ್ತಿದ್ದಾರೆ. ಇವರೊಂದಿಗೆ ಸಂಜಯ್‌ಕಪೂರ್‌ ಕೂಡ ನಟಿಸುತ್ತಿದ್ದಾರೆ. ಆದರೆ, ಅವರ ಪಾತ್ರ ಏನೆಂಬುದು ಸಸ್ಪೆನ್ಸ್‌. ಈಗಾಗಲೇ “ಸೀತಾರಾಮ ಕಲ್ಯಾಣ’ ಚಿತ್ರದ ಕಲಾವಿದರ ಪಟ್ಟಿ ದೊಡ್ಡದಾಗಿ ಬೆಳೆದಿದ್ದು, ಆ ಸಾಲಿಗೆ ಬಾಲಿವುಡ್‌ನ‌ ಭಾಗ್ಯಶ್ರೀ ಹಾಗೂ ಸಂಜಯ್‌ ಕಪೂರ್‌ ಸೇರಿದ್ದಾರೆ.

ಅಂದಹಾಗೆ, ಭಾಗ್ಯಶ್ರೀ ಅವರ ಭಾಗದ ಚಿತ್ರೀಕರಣ, ಸೋಮವಾರದಿಂದ (ಇಂದಿನಿಂದ) ಶುರುವಾಗುತ್ತಿದೆ. ಚಿತ್ರದಲ್ಲಿ ನಿಖಿಲ್‌ ತಂದೆಯಾಗಿ ತೆಲುಗು ನಟ ಶರತ್‌ಕುಮಾರ್‌ ನಟಿಸುತ್ತಿದ್ದಾರೆ. ಉಳಿದಂತೆ ಚಿತ್ರದಲ್ಲಿ ರಚಿತಾರಾಮ್‌ ನಾಯಕಿಯಾದರೆ, ಗಿರಿಜಾ ಲೋಕೇಶ್‌, ರವಿಶಂಕರ್‌, ಮಧು, ಜ್ಯೋತಿ ರೈ ಸೇರಿದಂತೆ ಹಲವರು ನಟಿಸುತ್ತಿದ್ದಾರೆ. ಎ.ಹರ್ಷ ಚಿತ್ರದ ನಿರ್ದೇಶಕರು. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನಿರ್ಮಾಪಕರು. “ಸೀತಾರಾಮ ಕಲ್ಯಾಣ” ಪಕ್ಕಾ ಫ್ಯಾಮಿಲಿ ಎಂಟರ್‌ಟೈನರ್‌ ಚಿತ್ರ ಎಂಬುದು ಚಿತ್ರತಂಡದ ಮಾತು.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.