ಸೂರಿ ಪಾಪ್‌ಕಾರ್ನ್ ವಿಲನ್‌ ಯಾರು?


Team Udayavani, Sep 25, 2018, 11:13 AM IST

popcorn.jpg

ಸೂರಿ ಹಾಗೂ ಶಿವರಾಜಕುಮಾರ್‌ ಕಾಂಬಿನೇಶನ್‌ನಲ್ಲಿ ಬಂದ “ಟಗರು’ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿದ್ದು ನಿಮಗೆ ಗೊತ್ತೇ ಇದೆ. ಹಾಡು, ಚಿತ್ರದ ಸಂಭಾಷಣೆ ಎಲ್ಲವನ್ನು ಅಭಿಮಾನಿಗಳು ಇಷ್ಟಪಟ್ಟಿದ್ದರು. ಡಾಲಿ ಪಾತ್ರದ ಮೂಲಕ ಧನಂಜಯ್‌ಗೆ ಹೊಸ ಇಮೇಜ್‌ ಹಾಗೂ ಅವಕಾಶಗಳು ಕೂಡಾ ಸಿಕ್ಕವು. “ಟಗರು’ ಚಿತ್ರವನ್ನು ನಿರ್ಮಿಸಿದವರು ಕೆ.ಪಿ.ಶ್ರೀಕಾಂತ್‌. ಈಗ ಈ ಜೋಡಿ ಮತ್ತೆ ಒಂದಾಗಿದೆ.

ಶ್ರೀಕಾಂತ್‌, ಸೂರಿ ಹಾಗೂ ಧನಂಜಯ್‌ “ಪಾಪ್‌ಕಾರ್ನ್ ಮಂಕಿಟೈಗರ್‌’ ಚಿತ್ರದ ಮೂಲಕ ಒಂದಾಗಿರುವ ವಿಚಾರ ನಿಮಗೆ ಗೊತ್ತೇ. ಈಗಾಗಲೇ ಸದ್ದಿಲ್ಲದೇ ಚಿತ್ರೀಕರಣ ಕೂಡಾ ಆರಂಭವಾಗಿದೆ. ಧನಂಜಯ್‌, ನಿವೇದಿತಾ, ಅಮೃತಾ, ಸಪ್ತಮಿ ಸೇರಿದಂತೆ ಅನೇಕ ರಂಗಭೂಮಿ ಕಲಾವಿದರು ನಟಿಸುತ್ತಿದ್ದಾರೆ. ಕಳೆದ ಬಾರಿ “ಟಗರು’ ಚಿತ್ರದಲ್ಲಿ ಧನಂಜಯ್‌ ತಮ್ಮ ಡಾಲಿ ಪಾತ್ರದ ಮೂಲಕ ಶಿವರಾಜಕುಮಾರ್‌ ಎದುರು ಖಡಕ್‌ ವಿಲನ್‌ ಆಗಿ ಮಿಂಚಿದ್ದರು.

ಹಾಗಾದರೆ ಈ ಬಾರಿ ಧನಂಜಯ್‌ ಎದುರು ಯಾರು ವಿಲನ್‌ ಆಗಿ ಅಬ್ಬರಿಸುತ್ತಾರೆಂಬ ಕುತೂಹಲ ಅನೇಕರಲ್ಲಿದೆ. ಸೂರಿ ಈ ಬಾರಿಯೂ ಖಡಕ್‌ ವಿಲನ್‌ನನ್ನೆ ತಂದು ನಿಲ್ಲಿಸಲು ರೆಡಿಯಾಗಿದ್ದಾರೆ. ಈಗಾಗಲೇ ಅದಕ್ಕಾಗಿ ಹುಡುಕಾಟ ನಡೆದಿದೆ. ಜೊತೆಗೆ ಹೊಸ ಮ್ಯಾನರೀಸಂನೊಂದಿಗೆ ವಿಲನ್‌ನ ತೋರಿಸಲಿದ್ದಾರೆ. ಹಾಗಾದರೆ ವಿಲನ್‌ ಯಾರಾಗಬಹುದು ಎಂದು ಕೇಳಿದರೆ ಸದ್ಯಕ್ಕೆ ಉತ್ತರವಿಲ್ಲ. ಆದರೆ, ಈ ಬಾರಿಯೂ ವಿಲನ್‌ ಪಾತ್ರ ಮಜ ಕೊಡುವುದರಲ್ಲಿ ಎರಡು ಮಾತಿಲ್ಲ. 

ಸೂರಿ ಈ ಬಾರಿಯೂ ತಮ್ಮ ಎಂದಿನ ಶೈಲಿಯಲ್ಲಿಯೇ ಚಿತ್ರೀಕರಣ ಮಾಡುತ್ತಿದ್ದಾರೆ. ನೈಜವಾಗಿ ಮೂಡಿಬರಬೇಕೆಂಬ ಉದ್ದೇಶದಿಂದ ಸೆಟ್‌ ಬದಲು ಸಣ್ಣ ಕೋಣೆ ಸೇರಿದಂತೆ ಇತರ ಜಾಗದಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರೀಕರಣ ನಡೆಯುತ್ತಿದ್ದು, ಬೆಂಗಳೂರು, ಗೋಕಾಕ್‌, ಮುಂಬೈ, ಶಿವಮೊಗ್ಗ ಸುತ್ತಮುತ್ತ ನಡೆಯಲಿದೆ. ಎರಡನೇ ಬಾರಿಗೆ ಹಿಟ್‌ ಕಾಂಬಿನೇಶನ್‌ ಒಂದಾಗಿರುವುದರಿಂದ ಈ ಸಿನಿಮಾ ಒಂದಷ್ಟು ನಿರೀಕ್ಷೆ ಇರುವುದು ಸುಳ್ಳಲ್ಲ. 

ಟಾಪ್ ನ್ಯೂಸ್

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.