ಸದ್ಯದಲ್ಲೇ ಪುಟ ತೆರೆಯಲಿದೆ … 


Team Udayavani, Sep 26, 2018, 11:37 AM IST

puta-109.jpg

ನಿರ್ದೇಶಕ ದಯಾಳ್‌ ಅವರ “ಆ ಕರಾಳ ರಾತ್ರಿ’ ಚಿತ್ರಕ್ಕೆ ಎಲ್ಲಾ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗಿತ್ತು. ಇತ್ತೀಚಿನ ದಿನಗಳಲ್ಲಿ ಬಂದು ಹೊಸ ಬಗೆಯ ಚಿತ್ರ ಎಂಬ ಹೆಗ್ಗಳಿಕೆಗೂ ಆ ಚಿತ್ರ ಪಾತ್ರವಾಗಿತ್ತು. ಈಗ ದಯಾಳ್‌ ಮತ್ತೂಂದು ಸಿನಿಮಾದೊಂದಿಗೆ ಪ್ರೇಕ್ಷಕರ ಮುಂದೆ ಬರಲು ಸಿದ್ಧರಾಗಿದ್ದಾರೆ. ಅದು “ಪುಟ 109′. ದಯಾಳ್‌ “ಆ ಕರಾಳ ರಾತ್ರಿ’ ಹಾಗೂ “ಪುಟ 109′ ಚಿತ್ರವನ್ನು ಒಟ್ಟಿಗೆ ಆರಂಭಿಸಿದ್ದರು.

ಈಗ “ಪುಟ 109′ ಚಿತ್ರೀಕರಣ ಮುಗಿದಿದ್ದು, ಸೆಪ್ಟೆಂಬರ್‌ 5 ರಂದು ತೆರೆ ಕಾಣುವ ಸಾಧ್ಯತೆ ಇದೆ. ಸಾಮಾನ್ಯವಾಗಿ ಚಿತ್ರ ಬಿಡುಗಡೆಯಾದ ನಂತರ ಚಿತ್ರತಂಡದವರು ಖುಷಿಯಾಗಿರುತ್ತಾರೆ. ಆದರೆ, ದಯಾಳ್‌ ಚಿತ್ರ ಬಿಡುಗಡೆ ಮುನ್ನವೇ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ ನಟ ಸುದೀಪ್‌. ಈಗಾಗಲೇ ಚಿತ್ರ ವೀಕ್ಷಿಸಿರುವ ಸುದೀಪ್‌, ತೆಲುಗು ಹಾಗೂ ತಮಿಳಿನಲ್ಲಿ ಈ ಚಿತ್ರ ಮಾಡಲು ಆಸಕ್ತಿ ತೋರಿಸಿದ್ದಾರಂತೆ. ಇದು ದಯಾಳ್‌ಗೆ ಸಿನಿಮಾ ಮೇಲಿನ ವಿಶ್ವಾಸ ಹೆಚ್ಚಿಸಿದೆ.

ಅಂದಹಾಗೆ, ಇದೊಂದು ಸಸ್ಪೆನ್ಸ್‌, ಥ್ರಿಲ್ಲರ್‌ ಸಿನಿಮಾವಾಗಿದ್ದು ಒಂದು ಕೊಲೆಯ ಸುತ್ತ ಸಾಗುತ್ತದೆ. ಚಿತ್ರದಲ್ಲಿ ಜೆ.ಕೆ ಹಾಗೂ ನವೀನ್‌ ಕೃಷ್ಣ ಅವರ ಪಾತ್ರ ಹೈಲೈಟ್‌ ಎಂಬ ಮಾಹಿತಿ ನೀಡುತ್ತಾರೆ ದಯಾಳ್‌. 90 ನಿಮಿಷದಲ್ಲಿ ದಯಾಳ್‌ ಇಡೀ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ. ಚಿತ್ರದಲ್ಲಿ ಒಟ್ಟು 25 ಸನ್ನಿವೇಶಗಳಿದ್ದು, 28 ನಿಮಿಷದಲ್ಲಿ 24 ಸನ್ನಿವೇಶಗಳು ಬಂದು ಹೋದರೆ ಚಿತ್ರದ ಒಂದು ಸನ್ನಿವೇಶ ಬರೋಬ್ಬರಿ 62 ನಿಮಿಷ ನಡೆಯುತ್ತದೆಯಂತೆ. 

ಈ ಚಿತ್ರ ಆರಂಭವಾದ ಬಗ್ಗೆ ಮಾತನಾಡುವ ದಯಾಳ್‌, “ಕರಾಳ ರಾತ್ರಿ’ ಚಿತ್ರಕ್ಕೆ ಲೊಕೇಶನ್‌ ನೋಡಲು ಮೂಡಿಗೆರೆಗೆ ಹೋಗಿದ್ದೆವು. ಅಲ್ಲಿನ ಬಂಗಲೆ ನೋಡಿ, ಇದು ಅರವಿಂದ್‌ ಅವರು ಬರೆದ ಕಥೆಗೆ ಸೂಕ್ತವಾಗುತ್ತದೆ ಎಂದು ಮಾತನಾಡಿಕೊಂಡೆವು. ಮುಂದೆ ನಾನು, ನವೀನ್‌ ಕೃಷ್ಣ ಬೆಂಗಳೂರಿಗೆ ಬರುವಷ್ಟರಲ್ಲಿ ಚಿತ್ರಕತೆ ಸಿದ್ಧಪಡಿಸಿದೆವು. ಇಡೀ ಸಿನಿಮಾವನ್ನು 10 ದಿವಸ ಚಿತ್ರೀಕರಿಸಲಾಗಿದೆ.

ಕಥೆ ಕೊಲೆಯೊಂದರ ಸುತ್ತ ಸಾಗಲಿದ್ದು, ಪುಸ್ತಕದ ಪುಟ 109 ಕಾಣೆಯಾಗಿರುವ ಮೂಲಕ ಕಥೆಗೆ ಹೊಸ ತಿರುವು ಸಿಗಲಿದೆ’ ಎಂದು ಸಿನಿಮಾ ಬಗ್ಗೆ ವಿವರ ನೀಡಿದರು. ಚಿತ್ರದಲ್ಲಿ ವೈಷ್ಣವಿ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರಕ್ಕೆ ನವೀನ್‌ ಕೃಷ್ಣ ಸಂಭಾಷಣೆ ಇದ್ದು, ಶ್ರೀ ಸಂಕಲನ, ಗಣೇಶ್‌ ನಾರಾಯಣ್‌ ಸಂಗೀತವಿದೆ. ಅವಿನಾಶ್‌ ಈ ಚಿತ್ರದ ಸಹ ನಿರ್ಮಾಪಕರು. 

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.