ಮತ್ತೆ 2 ದಿನ ಜೈಲೇ ಗತಿ; ದುನಿಯಾ ವಿಜಯ್ ಜಾಮೀನು ತೀರ್ಪು ಅ.1ಕ್ಕೆ
Team Udayavani, Sep 29, 2018, 3:46 PM IST
ಬೆಂಗಳೂರು: ಜಿಮ್ ತರಬೇತುದಾರ ಮಾರುತಿಗೌಡ ಎಂಬಾತನನ್ನು ಅಪಹರಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಸೇರಿ ನಾಲ್ವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನಗರದ 70ನೇ ಸೆಷನ್ಸ್ ಕೋರ್ಟ್ ತೀರ್ಪನ್ನು ಅಕ್ಟೋಬರ್ 1ಕ್ಕೆ ಕಾಯ್ದಿರಿಸಿದೆ.
ನಟ ದುನಿಯಾ ವಿಜಯ್ ಗೆ ಜಾಮೀನು ಕೊಟ್ಟರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಹೀಗಾಗಿ ಜಾಮೀನು ನೀಡಬಾರದು ಎಂದು ಸರ್ಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಿದ್ದರು.
ಮತ್ತೊಂದೆಡೆ ದುನಿಯಾ ವಿಜಿ ಹಾಗೂ ಇತರರ ಮೇಲೆ ಪೊಲೀಸರು ಉದ್ದೇಶಪೂರ್ವಕ 326 ಕಲಂ ಅಡಿ ಪ್ರಕರಣ ದಾಖಲಿಸಿದ್ದು, ತಮ್ಮ ಕಕ್ಷಿದಾರರಿಗೆ ಜಾಮೀನು ನೀಡಬೇಕೆಂದು ವಿಜಿ ಪರ ವಕೀಲರು ವಾದ ಮಂಡಿಸಿದ್ದರು.
ವಾದ, ಪ್ರತಿವಾದ ಆಲಿಸಿದ ಬೆಂಗಳೂರು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಟಿಪಿ ರಾಮಲಿಂಗೇಗೌಡ ಅವರು ಜಾಮೀನು ಆದೇಶವನ್ನು ಅ.1ಕ್ಕೆ ಕಾಯ್ದಿರಿಸಿದರು. ಈ ನಿಟ್ಟಿನಿಲ್ಲಿ ದುನಿಯಾ ವಿಜಿ ಸೇರಿ ನಾಲ್ವರಿಗೆ ಜೈಲುವಾಸ ಮುಂದುವರಿದಂತಾಗಿದೆ.
ಕಿಡ್ನಾಪ್ ಮತ್ತು ಹಲ್ಲೆ ಪ್ರಕರಣದಲ್ಲಿ ಜಾಮೀನು ನೀಡುವಂತೆ ವಿಜಯ್ ಸೇರಿದಂತೆ ನಾಲ್ವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು 8ನೇ ಎಸಿಎಂಎಂ ನ್ಯಾಯಾಲಯ ವಜಾಗೊಳಿಸಿದ ಹಿನ್ನೆಲೆಯಲ್ಲಿ ಸೆಷನ್ಸ್ ಕೋರ್ಟ್ ಮೊರೆ ಹೋಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ