ಕೆಜಿಎಫ್ ಡಿಸೆಂಬರ್‌ 21ಕ್ಕೆ ಬಿಡುಗಡೆ


Team Udayavani, Oct 11, 2018, 3:46 PM IST

2445.jpg

ಯಶ್‌ ಅಭಿನಯದ “ಕೆಜಿಎಫ್’ ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಚಿತ್ರದ ಬಿಡುಗಡೆಯಷ್ಟೇ ಅಲ್ಲ, ಆ ಚಿತ್ರದ ಟ್ರೇಲರ್‌ ಬಿಡುಗಡೆ ಕೂಡ ಮುಂದೆ ಸಾಗಿದೆ. ಹೌದು, ಈ ಹಿಂದೆ ನವೆಂಬರ್‌ 16 ರಂದು “ಕೆಜಿಎಫ್’ ಬಿಡುಗಡೆಯಾಗಲಿದೆ ಎಂದು ಘೋಷಿಸಲಾಗಿತ್ತು. ಈಗ “ಕೆಜಿಎಫ್’ ಡಿಸೆಂಬರ್‌ 21 ಕ್ಕೆ ಬಿಡುಗಡೆಯಾಗುವುದು ಪಕ್ಕಾ ಆಗಿದೆ. ಇದಕ್ಕೆ ಕಾರಣ, ಹಿಂದಿ ವಿತರಕರು ಮಾಡಿದ ಮನವಿ. ಅಷ್ಟಕ್ಕೂ “ಕೆಜಿಎಫ್’ ಮುಂದಕ್ಕೆ ಹೋಗಲು ಕಾರಣವೇನು? ಈ ಪ್ರಶ್ನೆಗೆ ಉತ್ತರವಿದು.

“ಕೆಜಿಎಫ್’ ಐದು ಭಾಷೆಯಲ್ಲಿ ಬಿಡುಗಡೆಯಾಗುತ್ತಿರುವ ಚಿತ್ರ. ಹಿಂದಿಯಲ್ಲಿ ಈ ಚಿತ್ರವನ್ನು ಅಲ್ಲಿನ ಹಿರಿಯ ವಿತರಕ ಅನಿಲ್‌ ದಾದಾನಿ ಅವರು ಬಿಡುಗಡೆ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರ ವೀಕ್ಷಿಸಿದ ಅವರು, “ಒಳ್ಳೆಯ ಚಿತ್ರಕ್ಕೆ ಪ್ರಚಾರ ಅಗತ್ಯ. ಹಾಗಾಗಿ, ಪ್ರಚಾರಕ್ಕೆ ಸಮಯವಿಲ್ಲದಂತಾಗುತ್ತದೆ. ಈ ಚಿತ್ರವನ್ನು ಚಿಕ್ಕದ್ದಾಗಿ ಬಿಡುಗಡೆ ಮಾಡುವುದು ಸರಿಯಲ್ಲ. ಭಾರತೀಯ ಮಟ್ಟದಲ್ಲಿ ಚಿತ್ರವನ್ನು ಪ್ರಚಾರ ಮಾಡಿ ಬಿಡುಗಡೆ ಮಾಡಬೇಕು. ಅದಕ್ಕೆ ಇನ್ನೂ ಸಮಯ ಬೇಕಿದೆ. ಹಾಗಾಗಿ ಬಿಡುಗಡೆ ದಿನಾಂಕವನ್ನು ಮುಂದಕ್ಕೆ ಹಾಕಿ’ ಎಂಬ ಮನವಿ ಇಟ್ಟಿದ್ದಾರೆ. ಅವರ ಮನವಿಗೆ ಸ್ಪಂದಿಸಿದ ನಿರ್ಮಾಪಕ ವಿಜಯ್‌ಕಿರಗಂದೂರು, ಕನ್ನಡದ ಚಿತ್ರಕ್ಕೆ ದೊಡ್ಡ ಮಟ್ಟದ ಪ್ರಚಾರ ಸಿಗುತ್ತಿದ್ದು, ಅದರಲ್ಲೂ ಹಿಂದಿಯಲ್ಲಿ ದೊಡ್ಡ ವಿತರಕರು ವಿತರಣೆ ಮಾಡುವಾಗ, ನಾವೇಕೆ ಒಂದು ತಿಂಗಳ ಕಾಲ ಮುಂದೆ ಹೋಗಬಾರದು ಅಂದುಕೊಂಡು, ಡಿಸೆಂಬರ್‌ 21ಕ್ಕೆ “ಕೆಜಿಎಫ್’ ಚಿತ್ರ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ. ಇದರೊಂದಿಗೆ ಚಿತ್ರದ ಟ್ರೇಲರ್‌ ಬಿಡುಗಡೆಯೂ ಮುಂದಕ್ಕೆ ಹೋದಂತಾಗಿದೆ.

“ಆರಂಭದಲ್ಲಿ ಚಿತ್ರ ಮಾಡುವಾಗ, ಇದು ಇಷ್ಟೊಂದು ದೊಡ್ಡ ಚಿತ್ರ ಆಗುತ್ತೆ ಅಂದುಕೊಂಡಿರಲಿಲ್ಲ. ಮಾಡುತ್ತಲೇ ದೊಡ್ಡ ಮಟ್ಟಕ್ಕೆ ಹೋಗಿದೆ. ಸಾಮಾನ್ಯವಾಗಿ ನನ್ನ ಚಿತ್ರಗಳು ಡೇಟ್‌ ಅನೌನ್ಸ್‌ ಮಾಡಿದಾಗ, ಮುಂದಕ್ಕೆ ಹೋದ ಉದಾಹರಣೆ ಇಲ್ಲ. ಈಗ “ಕೆಜಿಎಫ್’ ಹೋಗಿದೆ. ಐದು ಭಾಷೆಯಲ್ಲೂ ಬಿಡುಗಡೆಯಾಗುತ್ತಿರುವುದರಿಂದ ಪ್ರಚಾರಕ್ಕೆ ಸಮಯ ಬೇಕೆಂಬ ಮನವಿಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ಯಾನ್‌ ಇಂಡಿಯಾ ಕನಸು ಈ ಮೂಲಕ ಈಡೇರುತ್ತಿದೆ. ಇಷ್ಟು ದಿನ ಕಾದ ಅಭಿಮಾನಿಗಳು ಇನ್ನು ಒಂದು ತಿಂಗಳು ಹೆಚ್ಚು ಕಾಯಬೇಕಷ್ಟೇ. ಇದೊಂದು ಯೂನಿರ್ವಸಲ್‌ ಸಬೆjಕ್ಟ್ ಆಗಿರುವುದರಿಂದ ಎಲ್ಲರಿಗೂ ಸಲ್ಲಬೇಕು. ಎಲ್ಲಾ ಭಾಷೆಗೂ ಇದು ಹೇಗೆ ಕನೆಕ್ಟ್ ಆಗುತ್ತೆ ಎಂಬ ಪ್ರಶ್ನೆ ಎದುರಾಗಬಹುದು. ಇದನ್ನು ಮ್ಯೂಟ್‌ ಮಾಡಿ ನೋಡಿದರೆ, ಕಥೆ ಎಲ್ಲರಿಗೂ ಕನೆಕ್ಟ್ ಆಗುತ್ತೆ’ ಎನ್ನುವ ಯಶ್‌, ಇಲ್ಲಿ ಬಹುತೇಕ ಹೊಸ ಪ್ರತಿಭಾವಂತರಿದ್ದಾರೆ. ಅವರ ಮಧ್ಯೆ ನಾನೇ ಕಳೆದುಹೋಗಬಹುದೇನೋ? ಇದು ಎಪ್ಪತ್ತರ ದಶಕದ ಕಥೆಯಾದ್ದರಿಂದ ಆಗೆಲ್ಲಾ ಗಡ್ಡ, ಕೂದಲು ಟ್ರೆಂಡ್‌ ಇತ್ತು. ಪಾತ್ರಕ್ಕಾಗಿ ಗಡ್ಡ, ಕೂದಲು ಬಿಟ್ಟಿದ್ದು ನಿಜ. ಅದು ಸಖತ್‌ ಆಗಿ ವಕೌìಟ್‌ ಆಗಿದೆ’ ಎಂಬುದು ಅವರ ಮಾತು.

ನಿರ್ದೇಶಕ ಪ್ರಶಾಂತ್‌ ನೀಲ್‌ ಅವರು ಸಿನಿಮಾ ಎರಡನೇ ಭಾಗ ಆಗುತ್ತೆ ಆಂದುಕೊಂಡಿರಲಿಲ್ಲವಂತೆ. ಸಿನಿಮಾ ಚಿತ್ರೀಕರಣ ಆಗುತ್ತಲೇ ಹೊಸ ಯೋಚನೆ ಹುಟ್ಟಿಕೊಂಡು, ದೊಡ್ಡದ್ದಾಗಿದೆ. ಇದು ಎಲ್ಲಾ ಭಾಷೆಗೂ ಸಲ್ಲುವ ಕಥೆ. ಮುಖ್ಯವಾಗಿ ಇಲ್ಲೂ ತಾಯಿ, ಮಗನ ಸೆಂಟಿಮೆಂಟ್‌ ಇದೆ. ಟ್ರೇಲರ್‌ ನೋಡಿದಾಗ ಆ ಫೀಲಿಂಗ್ಸ್‌ ಗೊತ್ತಾಗುತ್ತೆ. ಚಿತ್ರೀಕರಣ ವೇಳೆ ಗಾಳಿ, ಮಳೆ ಆ ಧೂಳಿಗೆ ಜೂನಿಯರ್ ಬರೋಕೂ ಹಿಂದೆ ಮುಂದೆ ನೋಡಿದರು. ಪರಭಾಷೆಯಿಂದಲೂ ಜೂನಿಯರ್ ಕರೆಸಿ ಚಿತ್ರೀಕರಿಸಲಾಗಿದೆ.

ಕನ್ನಡಕ್ಕಷ್ಟೇ ಅಲ್ಲ, ಎಲ್ಲಾ ಭಾಷೆಗೂ “ಕೆಜಿಎಫ್’ ಹೊಸ ಬಗೆಯ ಚಿತ್ರ ಎನ್ನುವ ಪ್ರಶಾಂತ್‌ ನೀಲ್‌, ಇಂಥದ್ದೊಂದು ಚಿತ್ರ ಮಾಡೋಕೆ ಕಾರಣ ಅಮಿತಾಬ್‌ ಬಚ್ಚನ್‌. ನಾನು ಚಿಕ್ಕಂದಿನಿಂದಲೂ ಅಮಿತಾಬ್‌ ಬಚ್ಚನ್‌ ಚಿತ್ರ ನೋಡುತ್ತಿದ್ದೆ. ಆಗಲೇ, ನನಗೆ ಕನ್ನಡದಲ್ಲಿ ಹೊಸಬಗೆಯ ಚಿತ್ರ ಮಾಡುವ ಆಸೆ ಹುಟ್ಟುಕೊಂಡಿತ್ತು. ಅದು “ಕೆಜಿಎಫ್’ ಮೂಲಕ ಈಡೇರಿದೆ’ ಎನ್ನುತ್ತಾರೆ.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.