ಶಿವರುದ್ರಯ್ಯ ಹೊಸ ಸವಾರಿ


Team Udayavani, Oct 19, 2018, 12:05 PM IST

ramana.jpg

ನಿರ್ದೇಶಕ ಕೆ.ಶಿವರುದ್ರಯ್ಯ ಅವರು “ಮಾರಿಕೊಂಡವರು’ ಚಿತ್ರದ ನಂತರ ಮತ್ಯಾವ ಚಿತ್ರ ನಿರ್ದೇಶನಕ್ಕೆ ಅಣಿಯಾಗಿದ್ದಾರೆ ಎಂಬ ಪ್ರಶ್ನೆ ಇತ್ತು. ಅದಕ್ಕೆ ಉತ್ತರ “ರಾಮನ ಸವಾರಿ’. ಹೌದು, ಸದ್ದಿಲ್ಲದೆಯೇ ಶಿವರುದ್ರಯ್ಯ ಅವರು ಈ ಚಿತ್ರವನ್ನು ಮುಗಿಸಿ, ಇದೀಗ ಸೆನ್ಸಾರ್‌ಗೆ ಕಳುಹಿಸಲು ಸಜ್ಜಾಗುತ್ತಿದ್ದಾರೆ. ಕಥೆಗಾರ ಕೆ.ಸದಾಶಿವ ಅವರ “ರಾಮನ ಸವಾರಿ ಸಂತೆಗೆ ಹೋದದ್ದು’ ಕಥೆ ಆಧರಿಸಿ, “ರಾಮನ ಸವಾರಿ’ ಚಿತ್ರ ಮಾಡಿದ್ದಾರೆ ಶಿವರುದ್ರಯ್ಯ.

ಇದು ಮಕ್ಕಳ ಚಿತ್ರ. ಇಲ್ಲಿ ನಟಿ ಸೋನುಗೌಡ ಕೂಡ ಹೈಲೆಟ್‌. ಅವರೊಂದಿಗೆ ರಾಜೇಶ್‌, ಸುಧಾ ಬೆಳವಾಡಿ, ಭಾರ್ಗವಿ ಇತರರು ನಟಿಸಿದ್ದಾರೆ. “ರಾಮನ ಸವಾರಿ’ ಕುರಿತು ಮಾಹಿತಿ ಕೊಡುವ ನಿರ್ದೇಶಕ ಶಿವರುದ್ರಯ್ಯ, “ಈ ಕಥೆಯನ್ನು ಈ ಹಿಂದೆ ಗಿರೀಶ್‌ ಕಾರ್ನಾಡ್‌ ಮತ್ತು ಗಿರೀಶ್‌ ಕಾಸರವಳ್ಳಿ ಅವರು ಮಾಡಬೇಕಿತ್ತು. ಆದರೆ ಆಗಲಿಲ್ಲ. ನಾನೂ ಸಹ 2006 ರಲ್ಲೇ ಮಾಡಬೇಕು ಅಂತ ಸಾಕಷ್ಟು ಪ್ರಯತ್ನಿಸಿದ್ದೆ. ಸಾಧ್ಯವಾಗಿರಲಿಲ್ಲ. ಅದಕ್ಕೀಗ ಸಮಯ ಕೂಡಿ ಬಂದಿದೆ.

ಮಂಗಳೂರು ಮೂಲದ ಜೋಸೆಫ್ ಎಂಬ ನಿರ್ಮಾಪಕರು ತಮ್ಮ ಮಗನಿಗೆ ಈ ಕಥೆ ಮಾಡಬೇಕೆಂದು ನಿರ್ಧರಿಸಿದ್ದರಿಂದ ಚಿತ್ರವಾಗಿದೆ. ಸುಮಾರು ಐದುವರೆ ವರ್ಷದ ಹುಡುಗ ಆರ್ಯನ್‌ ಚಿತ್ರದ ಆಕರ್ಷಣೆ. ಕಥೆ ಬಗ್ಗೆ ಹೇಳುವುದಾದರೆ, ಬ್ರಾಹ್ಮಣ ಸಮುದಾಯ ಕುಟುಂಬದ ಹುಡುಗನೊಬ್ಬ ಮನೆಯವರ ಜಗಳ ನೋಡಲಾರದೆ, ಮನೆಬಿಟ್ಟು ಹೋಗುತ್ತಾನೆ. ಮೂರು ವರ್ಷಗಳ ಕಾಲ ಅವನ ಸುಳಿವೇ ಇರುವುದಿಲ್ಲ. ಕೊನೆಗೊಂದು ದಿನ ಸಂತೆಯಲ್ಲಿ ಅವನ ಅಪ್ಪನ ಕಣ್ಣಿಗೆ ಬೀಳುತ್ತಾನೆ.

ಅವನು ನನ್ನ ಮಗನೇ ಅಂತ ಗೊತ್ತಾಗಿ, ಸಂತೆಯಲ್ಲಿ ತಿಂಡಿ, ತಿನಿಸು ಕೊಡಿಸಿ, ಮನೆಗೆ ಕರೆದೊಯ್ಯಲು ಪ್ರಯತ್ನಿಸಿದರೂ ಆ ಹುಡುಗ ಹೋಗಲ್ಲ. ಆಮೇಲೆ ಏನಾಗುತ್ತೆ ಎಂಬುದು ಕಥೆ. ಆ ಹುಡುಗನಿಗೆ ಜಗಳವೆಂದರೆ ಆಗುವುದಿಲ್ಲ. ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು ಎಂಬ ಗಾದೆಗೆ ಹತ್ತಿರವಾದಂತಹ ಕಥೆಯ ಚಿತ್ರಣ ಇಲ್ಲಿದೆ. ಹಾಗೆಯೇ ಪ್ರಕೃತಿ ಮುಂದೆ ಯಾರೂ ದೊಡ್ಡವರಲ್ಲ, ಪ್ರಕೃತಿ ಉಳಿಸಬೇಕೆಂಬ ಸಣ್ಣ ಸಂದೇಶವೂ ಇಲ್ಲಿದೆ’ ಎಂದು ವಿವರ ಕೊಡುತ್ತಾರೆ ನಿರ್ದೇಶಕರು.

ಇದು ಮಲೆನಾಡ ಭಾಗದ ಕಥೆಯಾದ್ದರಿಂದ ಬಹುತೇಕ ಹೊಸನಗರ, ತೀರ್ಥಹಳ್ಳಿ ಸುತ್ತಮುತ್ತ ಚಿತ್ರೀಕರಣಗೊಂಡಿದೆ. 1964, 1974 ರ ಕಾಲಘಟ್ಟದ ಕಥೆ ಇಲ್ಲಿ ಹೇಳಲಾಗಿದೆ. ಆಗಿನ ಕುದುರೆ ಗಾಡಿ, ಎತ್ತಿನಗಾಡಿ ಸೇರಿದಂತೆ ಆಗಿನ ಕಾಲಘಟ್ಟ ತೋರಿಸುವ ಪ್ರಯತ್ನ ಮಾಡಲಾಗಿದೆ. ವಿಶೇಷವೆಂದರೆ, ಈ ಚಿತ್ರಕ್ಕೆ ಗಿರೀಶ್‌ ಕಾಸರವಳ್ಳಿ ಅವರು ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ.

ಚಿತ್ರಕ್ಕೆ ಕೆ.ಕಲ್ಯಾಣ್‌ ಅವರ ಸಂಗೀತವಿದೆ. ಎರಡು ಹಾಡುಗಳಿಗೆ ವಿಜಯಪ್ರಕಾಶ್‌, ಅನುರಾಧಭಟ್‌ ಮತ್ತು ಚಿಂತನ್‌ ಹಾಡಿದ್ದಾರೆ. ಸದ್ಯಕ್ಕೆ ಸಂಕಲನದ ಕೆಲಸದಲ್ಲಿರುವ “ರಾಮನ ಸವಾರಿ’, ಸೆನ್ಸಾರ್‌ಗೆ ರೆಡಿಯಾಗುತ್ತಿದೆ. ಜಯಂತಿ ಮರುಳಸಿದ್ದಪ್ಪ ಅವರು ವಸ್ತ್ರವಿನ್ಯಾಸ ಮಾಡಿದ್ದಾರೆ. ವಿಶ್ವನಾಥ್‌ ಅವರ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.