ಶಿವರುದ್ರಯ್ಯ ಹೊಸ ಸವಾರಿ


Team Udayavani, Oct 19, 2018, 12:05 PM IST

ramana.jpg

ನಿರ್ದೇಶಕ ಕೆ.ಶಿವರುದ್ರಯ್ಯ ಅವರು “ಮಾರಿಕೊಂಡವರು’ ಚಿತ್ರದ ನಂತರ ಮತ್ಯಾವ ಚಿತ್ರ ನಿರ್ದೇಶನಕ್ಕೆ ಅಣಿಯಾಗಿದ್ದಾರೆ ಎಂಬ ಪ್ರಶ್ನೆ ಇತ್ತು. ಅದಕ್ಕೆ ಉತ್ತರ “ರಾಮನ ಸವಾರಿ’. ಹೌದು, ಸದ್ದಿಲ್ಲದೆಯೇ ಶಿವರುದ್ರಯ್ಯ ಅವರು ಈ ಚಿತ್ರವನ್ನು ಮುಗಿಸಿ, ಇದೀಗ ಸೆನ್ಸಾರ್‌ಗೆ ಕಳುಹಿಸಲು ಸಜ್ಜಾಗುತ್ತಿದ್ದಾರೆ. ಕಥೆಗಾರ ಕೆ.ಸದಾಶಿವ ಅವರ “ರಾಮನ ಸವಾರಿ ಸಂತೆಗೆ ಹೋದದ್ದು’ ಕಥೆ ಆಧರಿಸಿ, “ರಾಮನ ಸವಾರಿ’ ಚಿತ್ರ ಮಾಡಿದ್ದಾರೆ ಶಿವರುದ್ರಯ್ಯ.

ಇದು ಮಕ್ಕಳ ಚಿತ್ರ. ಇಲ್ಲಿ ನಟಿ ಸೋನುಗೌಡ ಕೂಡ ಹೈಲೆಟ್‌. ಅವರೊಂದಿಗೆ ರಾಜೇಶ್‌, ಸುಧಾ ಬೆಳವಾಡಿ, ಭಾರ್ಗವಿ ಇತರರು ನಟಿಸಿದ್ದಾರೆ. “ರಾಮನ ಸವಾರಿ’ ಕುರಿತು ಮಾಹಿತಿ ಕೊಡುವ ನಿರ್ದೇಶಕ ಶಿವರುದ್ರಯ್ಯ, “ಈ ಕಥೆಯನ್ನು ಈ ಹಿಂದೆ ಗಿರೀಶ್‌ ಕಾರ್ನಾಡ್‌ ಮತ್ತು ಗಿರೀಶ್‌ ಕಾಸರವಳ್ಳಿ ಅವರು ಮಾಡಬೇಕಿತ್ತು. ಆದರೆ ಆಗಲಿಲ್ಲ. ನಾನೂ ಸಹ 2006 ರಲ್ಲೇ ಮಾಡಬೇಕು ಅಂತ ಸಾಕಷ್ಟು ಪ್ರಯತ್ನಿಸಿದ್ದೆ. ಸಾಧ್ಯವಾಗಿರಲಿಲ್ಲ. ಅದಕ್ಕೀಗ ಸಮಯ ಕೂಡಿ ಬಂದಿದೆ.

ಮಂಗಳೂರು ಮೂಲದ ಜೋಸೆಫ್ ಎಂಬ ನಿರ್ಮಾಪಕರು ತಮ್ಮ ಮಗನಿಗೆ ಈ ಕಥೆ ಮಾಡಬೇಕೆಂದು ನಿರ್ಧರಿಸಿದ್ದರಿಂದ ಚಿತ್ರವಾಗಿದೆ. ಸುಮಾರು ಐದುವರೆ ವರ್ಷದ ಹುಡುಗ ಆರ್ಯನ್‌ ಚಿತ್ರದ ಆಕರ್ಷಣೆ. ಕಥೆ ಬಗ್ಗೆ ಹೇಳುವುದಾದರೆ, ಬ್ರಾಹ್ಮಣ ಸಮುದಾಯ ಕುಟುಂಬದ ಹುಡುಗನೊಬ್ಬ ಮನೆಯವರ ಜಗಳ ನೋಡಲಾರದೆ, ಮನೆಬಿಟ್ಟು ಹೋಗುತ್ತಾನೆ. ಮೂರು ವರ್ಷಗಳ ಕಾಲ ಅವನ ಸುಳಿವೇ ಇರುವುದಿಲ್ಲ. ಕೊನೆಗೊಂದು ದಿನ ಸಂತೆಯಲ್ಲಿ ಅವನ ಅಪ್ಪನ ಕಣ್ಣಿಗೆ ಬೀಳುತ್ತಾನೆ.

ಅವನು ನನ್ನ ಮಗನೇ ಅಂತ ಗೊತ್ತಾಗಿ, ಸಂತೆಯಲ್ಲಿ ತಿಂಡಿ, ತಿನಿಸು ಕೊಡಿಸಿ, ಮನೆಗೆ ಕರೆದೊಯ್ಯಲು ಪ್ರಯತ್ನಿಸಿದರೂ ಆ ಹುಡುಗ ಹೋಗಲ್ಲ. ಆಮೇಲೆ ಏನಾಗುತ್ತೆ ಎಂಬುದು ಕಥೆ. ಆ ಹುಡುಗನಿಗೆ ಜಗಳವೆಂದರೆ ಆಗುವುದಿಲ್ಲ. ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು ಎಂಬ ಗಾದೆಗೆ ಹತ್ತಿರವಾದಂತಹ ಕಥೆಯ ಚಿತ್ರಣ ಇಲ್ಲಿದೆ. ಹಾಗೆಯೇ ಪ್ರಕೃತಿ ಮುಂದೆ ಯಾರೂ ದೊಡ್ಡವರಲ್ಲ, ಪ್ರಕೃತಿ ಉಳಿಸಬೇಕೆಂಬ ಸಣ್ಣ ಸಂದೇಶವೂ ಇಲ್ಲಿದೆ’ ಎಂದು ವಿವರ ಕೊಡುತ್ತಾರೆ ನಿರ್ದೇಶಕರು.

ಇದು ಮಲೆನಾಡ ಭಾಗದ ಕಥೆಯಾದ್ದರಿಂದ ಬಹುತೇಕ ಹೊಸನಗರ, ತೀರ್ಥಹಳ್ಳಿ ಸುತ್ತಮುತ್ತ ಚಿತ್ರೀಕರಣಗೊಂಡಿದೆ. 1964, 1974 ರ ಕಾಲಘಟ್ಟದ ಕಥೆ ಇಲ್ಲಿ ಹೇಳಲಾಗಿದೆ. ಆಗಿನ ಕುದುರೆ ಗಾಡಿ, ಎತ್ತಿನಗಾಡಿ ಸೇರಿದಂತೆ ಆಗಿನ ಕಾಲಘಟ್ಟ ತೋರಿಸುವ ಪ್ರಯತ್ನ ಮಾಡಲಾಗಿದೆ. ವಿಶೇಷವೆಂದರೆ, ಈ ಚಿತ್ರಕ್ಕೆ ಗಿರೀಶ್‌ ಕಾಸರವಳ್ಳಿ ಅವರು ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ.

ಚಿತ್ರಕ್ಕೆ ಕೆ.ಕಲ್ಯಾಣ್‌ ಅವರ ಸಂಗೀತವಿದೆ. ಎರಡು ಹಾಡುಗಳಿಗೆ ವಿಜಯಪ್ರಕಾಶ್‌, ಅನುರಾಧಭಟ್‌ ಮತ್ತು ಚಿಂತನ್‌ ಹಾಡಿದ್ದಾರೆ. ಸದ್ಯಕ್ಕೆ ಸಂಕಲನದ ಕೆಲಸದಲ್ಲಿರುವ “ರಾಮನ ಸವಾರಿ’, ಸೆನ್ಸಾರ್‌ಗೆ ರೆಡಿಯಾಗುತ್ತಿದೆ. ಜಯಂತಿ ಮರುಳಸಿದ್ದಪ್ಪ ಅವರು ವಸ್ತ್ರವಿನ್ಯಾಸ ಮಾಡಿದ್ದಾರೆ. ವಿಶ್ವನಾಥ್‌ ಅವರ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.