ಚಿತ್ರ ಮಂಡಳಿಯಿಂದ ರಾಜ್ಯೋತ್ಸವ
Team Udayavani, Nov 2, 2018, 11:25 AM IST
ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಗುರುವಾರ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕನ್ನಡ ಬಾವುಟ ಹಾರಿಸಿ, ಪೂಜೆ ಸಲ್ಲಿಸಲಾಯಿತು. ಹಿರಿಯ ನಟ ಅಂಬರೀಶ್, ಮಂಡಳಿ ಅಧ್ಯಕ್ಷ ಚಿನ್ನೇಗೌಡ, ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ಸೇರಿದಂತೆ ಮಂಡಳಿ ಪದಾಧಿಕಾರಿಗಳು ಭಾಗವಹಿಸಿದ್ದರು.
ಕನ್ನಡ ನಿರ್ಮಾಪಕರ ಸಂಘದಲ್ಲೂ ಗುರುವಾರ ಕನ್ನಡ ರಾಜ್ಯೋತ್ಸವ ಆಚರಿಸಲಾಗಿದ್ದು, ನಿರ್ಮಾಪಕರ ಸಂಘದ ಕಾರ್ಯದರ್ಶಿ ಸೂರಪ್ಪ ಬಾಬು ಸೇರಿದಂತೆ ಅನೇಕರು ಭಾಗವಹಿಸಿದ್ದರು. ಹೈದರಾಬಾದ್ನಲ್ಲಿ “ಪೈಲ್ವಾನ್’ ಚಿತ್ರೀಕರಣದಲ್ಲಿ ನಟ ಸುದೀಪ್ ಚಿತ್ರೀಕರಣ ಸ್ಥಳದಲ್ಲೇ ಕನ್ನಡ ರಾಜ್ಯೋತ್ಸವ ಆಚರಿಸಿದರು.