ದರ್ಶನ್ 53ನೇ ಚಿತ್ರದ ಥೀಮ್ ಪೋಸ್ಟರ್ ಬಿಡುಗಡೆ
Team Udayavani, Nov 8, 2018, 1:01 PM IST
“ಒಡೆಯ’ ಚಿತ್ರದ ನಂತರ ದರ್ಶನ್ ಅಭಿನಯಿಸುತ್ತಿರುವ ಚಿತ್ರ ಯಾವುದು? ಅದರಲ್ಲಿ ದರ್ಶನ್ ಗೆಟಪ್ ಹೇಗಿರಲಿದೆ? ಡಿ ಬಾಸ್ 53ನೇ ಚಿತ್ರದ ಶೀರ್ಷಿಕೆ ಏನು? ಎಂಬ ಅಭಿಮಾನಿಗಳ ಪ್ರಶ್ನೆಗಳಿಗೆ ಈಗ ಒಂದಷ್ಟು ಉತ್ತರ ಸಿಕ್ಕಿದೆ.
ಹೌದು, ದೀಪಾವಳಿ ಹಬ್ಬದ ಸಂದರ್ಭದಲ್ಲಿ ದರ್ಶನ್ ಅಭಿನಯದ 53 ನೇ ಚಿತ್ರದ ಥೀಮ್ ಪೋಸ್ಟರ್ ಬಿಡುಗಡೆಯಾಗಿದೆ. ಈ ಚಿತ್ರದ ಪೋಸ್ಟರ್ ಅನ್ನು ಸ್ವತಃ ದರ್ಶನ್ ಅವರೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ. “ನನ್ನ 53ನೇ ಚಿತ್ರದ ಥೀಮ್ ಪೋಸ್ಟರ್ ನಿಮಗಾಗಿ. ಕಥೆಯ ಎಳೆ ಏನಿರಬಹುದೆಂಬ ಸಣ್ಣ ಸುಳಿವನ್ನು ನಿರ್ದೇಶಕ ಈ ಪೋಸ್ಟರ್ ಮೂಲಕ ತಿಳಿಸಲು ಯತ್ನಿಸಿದ್ದಾರೆ. ಚಿತ್ರದ ಶೀರ್ಷಿಕೆಯನ್ನು ಸಹ
ಶೀಘ್ರದಲ್ಲೇ ಅಧಿಕೃತವಾಗಿ ಹೇಳಲಿದ್ದೇವೆ’ ಎಂದಿದ್ದಾರೆ ದರ್ಶನ್.
ಸದ್ಯ ಬಿಡುಗಡೆಯಾಗಿರುವ ಪೋಸ್ಟರ್ನಲ್ಲಿ ದರ್ಶನ್ ತನ್ನ ರಕ್ತಸಿಕ್ತ ಬಲಗೈನಲ್ಲಿ ಪುಟ್ಟ ಮಗುವಿನ ಕೈಯೊಂದನ್ನು ಹಿಡಿದುಕೊಂಡಿದ್ದಾರೆ. ಪೋಸ್ಟರ್ನ ಕೆಳಭಾಗದಲ್ಲಿ ‘ಈ ಕೈಗೆ ಶಬರಿ ಮುಂದೆ ಸೋಲೋದು ಗೊತ್ತು, ರಾವಣನ ಮುಂದೆ ಗೆಲ್ಲೋದು ಗೊತ್ತು’ ಎಂದು ಬರೆಯಲಾಗಿದೆ.
ದರ್ಶನ್ ಎದುರು ಹತ್ತು ತಲೆಯ ರಾವಣನ ಕಟೌಟ್ವೊಂದು ಎದ್ದು ನಿಂತಿದೆ. ಇದನ್ನೆಲ್ಲ ನೋಡುತ್ತಿದ್ದರೆ ಇದು ಪಕ್ಕಾ ಮಾಸ್ ಚಿತ್ರ ಅನ್ನೋದು ಅಭಿಮಾನಿಗಳ ಲೆಕ್ಕಾಚಾರ.
ಆರಂಭದಲ್ಲಿ, “ಚೌಕ’ ಚಿತ್ರದಲ್ಲಿ ದರ್ಶನ್ ಅತಿಥಿ ಕಲಾವಿದನಾಗಿ “ರಾಬರ್ಟ್’ ಎಂಬ ಖಡಕ್ ಪಾತ್ರದಲ್ಲಿ ಪ್ರೇಕ್ಷಕರ ಮನಗೆದ್ದಿದ್ದರಿಂದ, ಅವರ 53ನೇ ಚಿತ್ರಕ್ಕೂ “ರಾಬರ್ಟ್’ ಎಂದೇ ಹೆಸರಿಡಲಾಗಿದೆ ಎನ್ನಲಾಗುತ್ತಿತ್ತು. ಆದರೆ ಈಗ ಆ ಎಲ್ಲಾ ಊಹೆಗಳು ತಲೆಕೆಳಗಾಗಿದ್ದು, ದರ್ಶನ್ ರಾಬರ್ಟ್ ಬದಲು ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರಾ ಎಂಬ ಯೋಚನೆಯೂ ಅಭಿಮಾನಿಗಳ ತಲೆಯಲ್ಲಿ ಓಡಾಡುತ್ತಿದೆ!
ಆದರೆ ಚಿತ್ರತಂಡ ಮಾತ್ರ ಈ ಪೋಸ್ಟರ್ನಲ್ಲಿ ಎಲ್ಲಿಯೂ ಚಿತ್ರದ ಶೀರ್ಷಿಕೆಯನ್ನು ಬಿಟ್ಟುಕೊಟ್ಟಿಲ್ಲ. ಮೂಲಗಳ ಪ್ರಕಾರ, ಚಿತ್ರದ ಪ್ರೀ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಮುಂದಿನ ಡಿಸೆಂಬರ್ ವೇಳೆಗೆ ಚಿತ್ರದ ಶೀರ್ಷಿಕೆ ಅನಾವರಣವಾಗಲಿದೆ ಎನ್ನಲಾಗುತ್ತಿದೆ. “ಚೌಕ’ ಚಿತ್ರದ ಬಳಿಕ ನಿರ್ದೇಶಕ ತರುಣ್ ಸುಧೀರ್, ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, “ಹೆಬ್ಬುಲಿ’, “ಒಂದಲ್ಲಾ… ಎರಡಲ್ಲಾ’, ಚಿತ್ರವನ್ನು ನಿರ್ಮಿಸಿದ್ದ ಉಮಾಪತಿ ಶ್ರೀನಿವಾಸ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!