ದರ್ಶನ್‌ 53ನೇ ಚಿತ್ರದ ಥೀಮ್‌ ಪೋಸ್ಟರ್‌ ಬಿಡುಗಡೆ


Team Udayavani, Nov 8, 2018, 1:01 PM IST

darshan.jpg

“ಒಡೆಯ’ ಚಿತ್ರದ ನಂತರ ದರ್ಶನ್‌ ಅಭಿನಯಿಸುತ್ತಿರುವ ಚಿತ್ರ ಯಾವುದು? ಅದರಲ್ಲಿ ದರ್ಶನ್‌ ಗೆಟಪ್‌ ಹೇಗಿರಲಿದೆ? ಡಿ ಬಾಸ್‌ 53ನೇ ಚಿತ್ರದ ಶೀರ್ಷಿಕೆ ಏನು? ಎಂಬ ಅಭಿಮಾನಿಗಳ ಪ್ರಶ್ನೆಗಳಿಗೆ ಈಗ ಒಂದಷ್ಟು ಉತ್ತರ ಸಿಕ್ಕಿದೆ. 

ಹೌದು, ದೀಪಾವಳಿ ಹಬ್ಬದ ಸಂದರ್ಭದಲ್ಲಿ ದರ್ಶನ್‌ ಅಭಿನಯದ 53 ನೇ ಚಿತ್ರದ ಥೀಮ್‌ ಪೋಸ್ಟರ್‌ ಬಿಡುಗಡೆಯಾಗಿದೆ. ಈ ಚಿತ್ರದ ಪೋಸ್ಟರ್‌ ಅನ್ನು ಸ್ವತಃ ದರ್ಶನ್‌ ಅವರೇ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಶೇರ್‌ ಮಾಡಿದ್ದಾರೆ. “ನನ್ನ 53ನೇ ಚಿತ್ರದ ಥೀಮ್‌ ಪೋಸ್ಟರ್‌ ನಿಮಗಾಗಿ. ಕಥೆಯ ಎಳೆ ಏನಿರಬಹುದೆಂಬ ಸಣ್ಣ ಸುಳಿವನ್ನು ನಿರ್ದೇಶಕ ಈ ಪೋಸ್ಟರ್‌ ಮೂಲಕ ತಿಳಿಸಲು ಯತ್ನಿಸಿದ್ದಾರೆ. ಚಿತ್ರದ ಶೀರ್ಷಿಕೆಯನ್ನು ಸಹ
ಶೀಘ್ರದಲ್ಲೇ ಅಧಿಕೃತವಾಗಿ ಹೇಳಲಿದ್ದೇವೆ’ ಎಂದಿದ್ದಾರೆ ದರ್ಶನ್‌. 

ಸದ್ಯ ಬಿಡುಗಡೆಯಾಗಿರುವ ಪೋಸ್ಟರ್‌ನಲ್ಲಿ ದರ್ಶನ್‌ ತನ್ನ ರಕ್ತಸಿಕ್ತ ಬಲಗೈನಲ್ಲಿ ಪುಟ್ಟ ಮಗುವಿನ ಕೈಯೊಂದನ್ನು ಹಿಡಿದುಕೊಂಡಿದ್ದಾರೆ. ಪೋಸ್ಟರ್‌ನ ಕೆಳಭಾಗದಲ್ಲಿ ‘ಈ ಕೈಗೆ ಶಬರಿ ಮುಂದೆ ಸೋಲೋದು ಗೊತ್ತು, ರಾವಣನ ಮುಂದೆ ಗೆಲ್ಲೋದು ಗೊತ್ತು’ ಎಂದು ಬರೆಯಲಾಗಿದೆ.
ದರ್ಶನ್‌ ಎದುರು ಹತ್ತು ತಲೆಯ ರಾವಣನ ಕಟೌಟ್‌ವೊಂದು ಎದ್ದು ನಿಂತಿದೆ. ಇದನ್ನೆಲ್ಲ ನೋಡುತ್ತಿದ್ದರೆ ಇದು ಪಕ್ಕಾ ಮಾಸ್‌ ಚಿತ್ರ ಅನ್ನೋದು ಅಭಿಮಾನಿಗಳ ಲೆಕ್ಕಾಚಾರ.

ಆರಂಭದಲ್ಲಿ, “ಚೌಕ’ ಚಿತ್ರದಲ್ಲಿ ದರ್ಶನ್‌ ಅತಿಥಿ ಕಲಾವಿದನಾಗಿ “ರಾಬರ್ಟ್‌’ ಎಂಬ ಖಡಕ್‌ ಪಾತ್ರದಲ್ಲಿ ಪ್ರೇಕ್ಷಕರ ಮನಗೆದ್ದಿದ್ದರಿಂದ, ಅವರ 53ನೇ ಚಿತ್ರಕ್ಕೂ “ರಾಬರ್ಟ್‌’ ಎಂದೇ ಹೆಸರಿಡಲಾಗಿದೆ ಎನ್ನಲಾಗುತ್ತಿತ್ತು. ಆದರೆ ಈಗ ಆ ಎಲ್ಲಾ ಊಹೆಗಳು ತಲೆಕೆಳಗಾಗಿದ್ದು, ದರ್ಶನ್‌ ರಾಬರ್ಟ್‌ ಬದಲು ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರಾ ಎಂಬ ಯೋಚನೆಯೂ ಅಭಿಮಾನಿಗಳ ತಲೆಯಲ್ಲಿ ಓಡಾಡುತ್ತಿದೆ!

ಆದರೆ ಚಿತ್ರತಂಡ ಮಾತ್ರ ಈ ಪೋಸ್ಟರ್‌ನಲ್ಲಿ ಎಲ್ಲಿಯೂ ಚಿತ್ರದ ಶೀರ್ಷಿಕೆಯನ್ನು ಬಿಟ್ಟುಕೊಟ್ಟಿಲ್ಲ. ಮೂಲಗಳ ಪ್ರಕಾರ, ಚಿತ್ರದ ಪ್ರೀ ಪ್ರೊಡಕ್ಷನ್‌ ಕೆಲಸಗಳು ನಡೆಯುತ್ತಿದ್ದು, ಮುಂದಿನ ಡಿಸೆಂಬರ್‌ ವೇಳೆಗೆ ಚಿತ್ರದ ಶೀರ್ಷಿಕೆ ಅನಾವರಣವಾಗಲಿದೆ ಎನ್ನಲಾಗುತ್ತಿದೆ. “ಚೌಕ’ ಚಿತ್ರದ ಬಳಿಕ ನಿರ್ದೇಶಕ ತರುಣ್‌ ಸುಧೀರ್‌, ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, “ಹೆಬ್ಬುಲಿ’, “ಒಂದಲ್ಲಾ… ಎರಡಲ್ಲಾ’, ಚಿತ್ರವನ್ನು ನಿರ್ಮಿಸಿದ್ದ ಉಮಾಪತಿ ಶ್ರೀನಿವಾಸ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.