ಪುಟ 109 ತೆರೆಯಲು ದಿನಗಣನೆ


Team Udayavani, Nov 9, 2018, 10:54 AM IST

puta-109.jpg

“ಆ ಕರಾಳ ರಾತ್ರಿ’ ಚಿತ್ರವನ್ನು ಯಶಸ್ವಿಯಾಗಿ ಪ್ರೇಕ್ಷಕರ ಮುಂದೆ ತಂದಿದ್ದ ನಿರ್ದೇಶಕ ದಯಾಳ್‌ ಪದ್ಮನಾಭನ್‌, ಈಗ “ಪುಟ 109′ ಚಿತ್ರವನ್ನು ಪ್ರೇಕ್ಷಕರ ಮುಂದೆ ತೆರೆದಿಡುವ ತಯಾರಿಯಲ್ಲಿದ್ದಾರೆ. ಸದ್ಯ  “ಪುಟ 109′ ಚಿತ್ರದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಚಿತ್ರವನ್ನು ಪ್ರೇಕ್ಷಕರಿಗೆ ತಲುಪಿಸುವ ಅಂತಿಮ ಹಂತದ ಪ್ರಚಾರ ಕಾರ್ಯಗಳಲ್ಲಿ ಚಿತ್ರತಂಡ ನಿರತವಾಗಿದೆ. ಇದೇ ನ. 16ರಂದು ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.

ಇದೇ ವೇಳೆ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ದಯಾಳ್‌ ಪದ್ಮನಾಭವ್‌  “ಪುಟ 109’ರಲ್ಲಿ ಅಡಗಿರುವ ಒಂದಷ್ಟು ಕೌತುಕ ಸಂಗತಿಗಳನ್ನು ತೆರೆದಿಟ್ಟಿದ್ದಾರೆ. ಏಕಕಾಲಕ್ಕೆ  “ಆ ಕರಾಳ ರಾತ್ರಿ’ ಮತ್ತು “ಪುಟ 109′ ಚಿತ್ರವನ್ನು ಆರಂಭಿಸಲಾಗಿತ್ತು. ನಮ್ಮ ಯೋಜನೆಯಂತೆ  “ಆ ಕರಾಳ ರಾತ್ರಿ’ ಚಿತ್ರವನ್ನು ಮೊದಲು ಬಿಡುಗಡೆ ಮಾಡಿದ್ದೇವು. ಆ ಚಿತ್ರಕ್ಕೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿತು.

ಈಗ “ಪುಟ 109′ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುತ್ತಿದ್ದೇವೆ. ಇದೊಂದು ಸಸ್ಪೆನ್ಸ್‌ ಚಿತ್ರವಾಗಿದ್ದು, ಪ್ರೇಕ್ಷಕನಿಗೆ ಖಂಡಿತ ಇಷ್ಟವಾಗುತ್ತೆ ಎನ್ನುತ್ತಾರೆ ನಿರ್ದೇಶಕ ದಯಾಳ್‌. ಸಾಮಾನ್ಯವಾಗಿ ನಾವೆಲ್ಲ ಪೊಲೀಸ್‌ ತನಿಖೆಯ ಬಗ್ಗೆ ಕೇಳಿರುತ್ತೇವೆ. ಅದನ್ನು ನೇರವಾಗಿ ನೋಡಿರುವ ಸಾಧ್ಯತೆ ತುಂಬ ಕಡಿಮೆ. ಆದರೆ “ಪುಟ 109′ ಅಂತಹ ಪೊಲೀಸ್‌ ತನಿಖೆಯೊಂದನ್ನು ರೋಚಕವಾಗಿ ನಿಮ್ಮ ಮುಂದೆ ತೆರೆದಿಡುತ್ತದೆ.

ಕೇವಲ ಮೂರ್‍ನಾಲ್ಕು ಪಾತ್ರಗಳು, ಮೂರ್‍ನಾಲ್ಕು ಲೊಕೇಷನ್‌ಗಳ ಸುತ್ತವೇ ಇಡೀ ಚಿತ್ರದ ಕಥೆ ನಡೆಯುತ್ತದೆ. ಆರಂಭದಿಂದ ಕೊನೆಯವರೆಗೂ ನೋಡುಗರನ್ನ ಸೀಟ್‌ನ ತುದಿಯಲ್ಲಿ ಕೂರಿಸುತ್ತದೆ ಎನ್ನುವುದು ದಯಾಳ್‌ ಅವರ ಭರವಸೆಯ ಮಾತು. ಕನ್ನಡದ ಪ್ರೇಕ್ಷಕರು ಇತ್ತೀಚೆಗೆ ಹೊಸಥರದ ಚಿತ್ರಗಳತ್ತ ಆಸಕ್ತರಾಗುತ್ತಿದ್ದಾರೆ. ಚಿತ್ರಗಳಲ್ಲಿ ಪ್ರೇಕ್ಷಕರನ್ನು ಬೇರೆ ಬೇರೆ ರೀತಿಯಲ್ಲಿ ರಂಜಿಸಬಹುದು. ಅದಕ್ಕೆ “ಆ ಕರಾಳ ರಾತ್ರಿ’ ಚಿತ್ರವೇ ಉತ್ತಮ ಉದಾಹರಣೆ.

ಈ ಚಿತ್ರ ಕೂಡ ಪ್ರೇಕ್ಷಕರಿಗೆ ಹೊಸ ಅನುಭವ ಕೊಡುವುದರಲ್ಲಿ ಅನುಮಾನವಿಲ್ಲ ಎಂಬ ವಿಶ್ವಾಸ ದಯಾಳ್‌ ಅವರದ್ದು. “ಪುಟ 109′  ಚಿತ್ರದಲ್ಲಿ ಜೆ.ಕೆ ಹಾಗೂ ನವೀನ್‌ ಕೃಷ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ನಾಯಕಿಯಾಗಿ ವೈಷ್ಣವಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ದಯಾಳ್‌ ಪದ್ಮನಾಭನ್‌ ನಿರ್ದೇಶನದ ಜತೆಗೆ ನಿರ್ಮಾಣವನ್ನೂ ಮಾಡಿದ್ದಾರೆ. ನಿರ್ಮಾಪಕ ಮತ್ತು ವಿತರಕ ಜಾಕ್‌ ಮಂಜು ಚಿತ್ರದ ವಿತರಣೆ ಹಕ್ಕುಗಳನ್ನು ಪಡೆದಿದ್ದಾರೆ. 

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.