ಮೆಲ್ಬರ್ನ್ನಲ್ಲಿ ಶಿವರಾಜಕುಮಾರ್‌ಗೆ ಸನ್ಮಾನ


Team Udayavani, Nov 12, 2018, 11:20 AM IST

shivanna.jpg

ಶಿವರಾಜಕುಮಾರ್‌ ಇತ್ತೀಚೆಗೆ ಆಸ್ಟ್ರೇಲಿಯಾಗೆ ತೆರಳಿದ್ದು ಎಲ್ಲರಿಗೂ ಗೊತ್ತು. ಆದರೆ, ಅಲ್ಲಿನ ಮೆಲ್ಬರ್ನ್ ಕನ್ನಡ ಸಂಘ ಅವರಿಗೊಂದು ಪ್ರಶಸ್ತಿ ನೀಡಿ ಗೌರವಿಸಿದ್ದು ಮಾತ್ರ ಬಹಳಷ್ಟು ಮಂದಿಗೆ ಗೊತ್ತಿರಲಿಕ್ಕಿಲ್ಲ. ಹೌದು, ಆಸ್ಟ್ರೇಲಿಯಾದ “ಮೆಲ್ಬರ್ನ್ ಕನ್ನಡ ಸಂಘ’ ಇತ್ತೀಚೆಗೆ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದೆ. ಆ ಕಾರ್ಯಕ್ರಮಕ್ಕೆ ನಟ ಶಿವರಾಜಕುಮಾರ್‌ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು.

ಮೆಲ್ಬರ್ನ್ ಕನ್ನಡ ಸಂಘದ ಆಹ್ವಾನದಿಂದಾಗಿ, ಭಾಗವಹಿಸಿದ್ದ ಶಿವರಾಜಕುಮಾರ್‌ ಅವರಿಗೆ ಅಲ್ಲಿನ ಕನ್ನಡ ಸಂಘ “ಮುಂಬಾ ಸ್ಟಾರ್‌’ ಪ್ರಶಸ್ತಿ ನೀಡಿ ಆತ್ಮೀಯವಾಗಿ ಗೌರವಿಸಿದೆ. 1955 ರಿಂದಲೂ “ಮುಂಬಾ ಫೆಸ್ಟಿವಲ್‌’ ಎಂಬ ಹೆಸರಿನಲ್ಲಿ ಆಚರಿಸಿಕೊಂಡು ಬರಲಾಗುತ್ತಿರುವ, ನಾಲ್ಕು ದಿನಗಳ ಕಾಲ ನಡೆಯುವ ಈ ಕನ್ನಡ ಉತ್ಸವದಲ್ಲಿ ಪ್ರತಿವರ್ಷ ಕರ್ನಾಟಕದಲ್ಲಿ ವಿವಿಧ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಸಾಧಕರನ್ನು ಆಹ್ವಾನಿಸಿ, ಅವರಿಗೆ ಪ್ರೀತಿಯಿಂದ ಸನ್ಮಾನಿಸಿ, ಗೌರವಿಸಲಾಗುತ್ತದೆ.

ಈ ಬಾರಿ ಶಿವರಾಜಕುಮಾರ್‌ ಅವರನ್ನು ಆಹ್ವಾನಿಸಿದ್ದ ಮೆಲ್ಬರ್ನ್ ಕನ್ನಡ ಸಂಘ, ಕನ್ನಡ ಚಿತ್ರರಂಗದಲ್ಲಿ ಗಣನೀಯ ಸಾಧನೆ ಮಾಡಿರುವ ಶಿವರಾಜಕುಮಾರ್‌ ಅವರಿಗೆ ‘ಮುಂಬಾ ಸ್ಟಾರ್‌’ ಪ್ರಶಸ್ತಿ ನೀಡಿ ಗೌರವಿಸಿದೆ. ಇದೇ ವೇಳೆ ಮೆಲ್ಬರ್ನ್ ಕನ್ನಡ ಸಂಘ ‘ಕನ್ನಡ ಭವನ’ ನಿರ್ಮಾಣ ಮಾಡಲು ಮುಂದಾಗಿದ್ದು, ಈ ಕನ್ನಡ ಭವನ ನಿರ್ಮಾಣ ಕಾರ್ಯಕ್ಕೆ ಶಿವರಾಜಕುಮಾರ್‌ ಅವರು ಚಾಲನೆ ನೀಡುವ ಮೂಲಕ ಶುಭ ಹಾರೈಸಿದ್ದಾರೆ.

ಇನ್ನು ಮೆಲ್ಬರ್ನ್ನಲ್ಲಿ ಕನ್ನಡ ಶಾಲೆಯನ್ನು ತೆರೆದಿರುವ ಅಲ್ಲಿನ ಕನ್ನಡ ಸಂಘ, ಅಲ್ಲಿನ ಆಸಕ್ತ ಮಕ್ಕಳಿಗೆ ಉಚಿತವಾಗಿ ಕನ್ನಡ ಭಾಷೆಯನ್ನು ಕಲಿಸುತ್ತಿದೆ. ಕನ್ನಡ ಸಾಹಿತ್ಯ, ಸಂಸ್ಕೃತಿಗೆ ಸಂಬಂಧಿಸಿದ ಪುಸ್ತಕಗಳ ಗ್ರಂಥಾಲಯ ಕೂಡ ಇದೆ. 32 ವರ್ಷಗಳ ಅವಧಿಯಲ್ಲಿ ಕನ್ನಡದ ಅನೇಕ ಕಲಾವಿದರು, ಸಾಹಿತಿಗಳು, ನಾಟಕಕಾರರು ಮೆಲ್ಬರ್ನ್ ಕನ್ನಡ ಸಂಘದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ¨ªಾರೆ. ಮೆಲ್ಬರ್ನ್ ಕನ್ನಡ ಸಂಘದ ಚಟುವಟಿಕೆಗಳ ಮಾಹಿತಿ ಪಡೆದ ಶಿವರಾಜಕುಮಾರ್‌, ಸಂಘದ ಕಾರ್ಯವನ್ನು  ಶ್ಲಾಘಿಸಿದ್ದಾರೆ.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.